ಅರಿತು ಬಾಳುವುದರಿಂದ ಸುಖ-ಶಾಂತಿ ಪ್ರಾಪ್ತಿ

KannadaprabhaNewsNetwork |  
Published : Nov 21, 2025, 03:00 AM IST
ಇಂಡಿ | Kannada Prabha

ಸಾರಾಂಶ

ದೊಡ್ಡ ಮನಸ್ಸು ಮತ್ತು ದೊಡ್ಡ ಗುಣಗಳಿಂದ ಮನುಷ್ಯನಿಗೆ ದೊಡ್ಡಸ್ತಿಕೆ ಪ್ರಾಪ್ತಿಯಾಗಲಿದೆ ಎಂದು ಶಿರಶ್ಯಾಡದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಹೇಳಿದರು.

ಕನ್ನಡಪ್ರಭ ವಾರ್ತೆ ಇಂಡಿ

ಮನುಷ್ಯ ಜೀವನ ಪವಿತ್ರ ಪಾವನ. ಅರಿತು ಬಾಳುವುದರಲ್ಲಿ ಸುಖ- ಶಾಂತಿಯಿದೆ. ಬದುಕಿನ ಉತ್ಕರ್ಷತೆ ಮತ್ತು ಶ್ರೇಯಸ್ಸಿದೆ. ಮನುಷ್ಯ ದೊಡ್ಡ ದೊಡ್ಡ ಮಾತು ಆಡುವುದರಿಂದ ದೊಡ್ಡವರಾಗಲ್ಲ. ದೊಡ್ಡ ಮನಸ್ಸು ಮತ್ತು ದೊಡ್ಡ ಗುಣಗಳಿಂದ ಮನುಷ್ಯನಿಗೆ ದೊಡ್ಡಸ್ತಿಕೆ ಪ್ರಾಪ್ತಿಯಾಗಲಿದೆ ಎಂದು ಶಿರಶ್ಯಾಡದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಹೇಳಿದರು.

ಪಟ್ಟಣದ ದಾನಮ್ಮದೇವಿ ದೇವಸ್ಥಾನದಲ್ಲಿ ದಾನಮ್ಮಾದೇವಿ ೪ನೇ ವರ್ಷದ ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಬಾಲ ಮುತ್ತೈದೆಯರಿಗೆ ಉಡಿ ತುಂಬುವ ಹಾಗೂ ದೀಪೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜೀವನ ನಮಗೆ ಏನು ಕೊಟ್ಟಿದೆ ಎಂಬುದಕಿಂತ ನಾವು ಬೇರೆಯವರಿಗೆ ಏನು ಕೊಟ್ಟಿದ್ದೇವೆ ಎಂಬುದು ಮುಖ್ಯ. ಸ್ವಾಭಿಮಾನದ ಕೊರತೆಯಿಂದ ಅನೇಕ ನೋವು ಅನುಭವಿಸುವ ಪರಿಸ್ಥಿತಿಯಿದೆ. ದೇಶಾಭಿಮಾನ ಮತ್ತು ಧರ್ಮಾಭಿಮಾನ ಎಲ್ಲರಲ್ಲೂ ಬೆಳೆದು ಬರಬೇಕು. ಮನುಷ್ಯನ ಮನಸ್ಸು ಶಾಂತ ಪ್ರಶಾಂತಗೊಳ್ಳಲು ಸಾಧನೆ ಬೇಕು. ಚಂಚಲ ಮನಸ್ಸನ್ನು ತಣ್ಣ ಗಿಡುವ ಜೀವನವೇ ಆಧ್ಯಾತ್ಮ. ಆಧ್ಯಾತ್ಮದ ಬದುಕು ಬಲಗೊಳ್ಳಲು ಆಧ್ಯಾತ್ಮದ ಅರಿವು ಸಾಧನೆ ನಿರಂತರ ವಾಗಿರಬೇಕು ಎಂದರು.

ಆಳೂರ ಶಂಕರಾನಂದ ಶಿವಾಚಾರ್ಯರು ಮಾತನಾಡಿ, ನೀರು ಎರೆದವರಿಗೂ, ಕಡಿಯಲು ಬಂದವರಿಗೂ ಮರ ನೆರಳು ನೀಡಿ, ಹಣ್ಣು ಕೊಡುತ್ತದೆ. ಆ ಮರದ ಸ್ವಭಾವ ಮನುಷ್ಯನ ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕು ಉಜ್ವಲಗೊಳ್ಳುತ್ತದೆ ಎಂದರು. ಬಿಜೆಪಿ ರೈತ ಮೋರ್ಚಾ ಜಿಲ್ಲಾ ಮಾಜಿ ಅಧ್ಯಕ ಕಾಸುಗೌಡ ಬಿರಾದಾರ, ರಾಘವೇಂದ್ರ ಕುಲಕರ್ಣಿ, ವೈ.ಜಿ.ಬಿರಾದಾರ ಮಾತನಾಡಿದರು.

ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆ ಅಧ್ಯಕ್ಷ ನೀಲಕಂಠಗೌಡ ಪಾಟೀಲ, ದೇವಸ್ಥಾನ ಸಮಿತಿಯ ಅಧ್ಯಕ್ಷ ಅನೀಲ ಪ್ರಸಾದ ಏಳಗಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಡಿ.ಡಿ.ಮಡಗೊಂಡ, ಅನಂತ ಜೈನ, ಪಶು ವೈದ್ಯಾಧಿಕಾರಿ ಡಾ. ಲಕ್ಷ್ಮೀಶ ಕಟ್ಟಿಮನಿ, ಅನೀಲಗೌಡ ಬಿರಾದಾರ, ಮುದುಕು ಕುಂಬಾರ, ಬಾಳು ಮುಳಜಿ, ಅರವಿಂದ ಹಂಜಗಿ, ರಾಜಶೇಖರ ತಾಂಬೆ, ಮಲ್ಲಿಕಾರ್ಜುನ ಬಿರಾದಾರ, ಸಂಗಮೇಶ ಕಕ್ಕಳಮೇಲಿ, ಶೈಲೇಶ ಬೀಳಗಿ, ಜಗದೀಶ ಕ್ಷತ್ರಿ , ಬಾಬು ಹಂಜಗಿ , ರವಿಗೌಡ ಪಾಟೀಲ, ಮುರಳೀಧರ ಭಜಂತ್ರಿ , ನೀಖಿಲ ಬಜಂತ್ರಿ ಕುಮಾರಿ ಸ್ಪಂದನಾ ಬಜಂತ್ರಿ, ಅರ್ಚಕ ಧಾನಯ್ಯ ಶಾಸ್ತ್ರಿ ಮತ್ತಿತರಿದ್ದರು.ಇದೆ ಸಂದರ್ಭದಲ್ಲಿ ಅನೀಲಪ್ರಸಾದ ಏಳಗಿ ದಂಪತಿಯನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುವೆಂಪು ಸದ್ಭಾವನಾ ಪ್ರಶಸ್ತಿಗೆ ಭಾಜನರಾದ ಶ್ರೀ ಶ್ಯಾಮ್ ಸುಂದರ್ ಹೆಗ್ಡೆ
ಕಿಡ್ನಾಪ್‌ ಆದ 1094 ಮಕ್ಕಳು ಇನ್ನೂ ಪತ್ತೆಯಾಗಿಲ್ಲ!