ಕನ್ನಡಪ್ರಭ ವಾರ್ತೆ ಹೊನ್ನಾಳಿ
ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಹರ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. 15 ದಿನಗಳಿಂದ ಹರ ಜಾತ್ರೆ ಯಶಸ್ವಿಗೊಳಿಸುವ ಸಲುವಾಗಿ ಪೂರ್ವಸಿದ್ಧತಾ ಸಭೆಗಳನ್ನು ನಡೆಸಲಾಗುತ್ತಿದೆ. ಹರಪೀಠ ಹಾಗೂ ರಾಜ್ಯ ಸಮಿತಿಯು 18 ಜಿಲ್ಲೆಗಳಲ್ಲಿ ಸಭೆ ನಡೆಸಿ ಹರ ಜಾತ್ರೆಗೆ ಆಗಮಿಸುವಂತೆ ಸಮಾಜ ಬಾಂಧವರಲ್ಲಿ ಮನವಿ ಮಾಡಲಾಗಿದೆ. 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಹತ್ತಿರದ ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಹರ ಜಾತ್ರೆಗೆ ಭಕ್ತರು ಬರಬೇಕು ಎಂದು ಮನವಿ ಮಾಡಿದರು.
ಹರಪೀಠದ ಆಡಳಿತಾಧಿಕಾರಿ ಡಾ. ರಾಜಕುಮಾರ್ ಮಾತನಾಡಿ, 200 ರು.ಗಳ ನಾಣ್ಯವನ್ನು ಸಭೆಯಲ್ಲಿ ಬಿಡುಗಡೆಗೊಳಿಸುವ ಮೂಲಕ ಈ ಬಾರಿಯ ಹರ ಜಾತ್ರೆಯಲ್ಲಿ ಪಂಚಮಸಾಲಿ ಸಮಾಜದ ಶಕ್ತಿ, ಸಂಘಟನೆ ಪ್ರದರ್ಶನವಾಗಲಿದೆ ಎಂದರು.ದಾಸೋಹ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ಮಾತನಾಡಿ, ಹರ ಜಾತ್ರೆಗೆ ಸಮಾಜದ ಬಂಧುಗಳು ದವಸ ಧಾನ್ಯ ರೊಟ್ಟಿ ಬುತ್ತಿಯನ್ನು ತಂದು ಸಭೆಯಲ್ಲಿ ಪಾಲ್ಗೊಳ್ಳುವ ಉತ್ಸಾಹದಲ್ಲಿದ್ದಾರೆ ಎಂದರು.
ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಬೆನಕನಹಳ್ಳಿ ವೀರಣ್ಣ ಮಾತನಾಡಿ, ಅವಳಿ ತಾಲೂಕುಗಳ ಗ್ರಾಮಗಳಿಗೆ ತೆರಳಿ ಸಮಾಜ ಬಾಂಧವರಲ್ಲಿ ಮನವಿ ಮಾಡಲಾಗಿದೆ. ಸಮಾಜದ 2 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ ಸೇವೆಯಲ್ಲಿ ತೊಡಗುವರು. ಹರ ಜಾತ್ರೆಗೆ ಪಂಚಮಸಾಲಿ ಸಮಾಜದವರು ಸೇರಿದಂತೆ ಸಹೋದರ ಸಮಾಜದ ಎಲ್ಲ ಜನರು ಜಾತ್ರೆಯಲ್ಲಿ ಭಾಗವಹಿಸಲು ಮನವಿ ಮಾಡಿದರು.
ಸಮಾಜದ ಮುಖಂಡರಾದ ಪರಮೇಶ್ ಪಟ್ಟಣಶೆಟ್ಟಿ, ನ್ಯಾಮತಿ ಪಂಚಣ್ಣ ,ಚಂದ್ರಶೇಖರ್ ಪೂಜಾರ, ಬಸವರಾಜ್ ವೀರಾಪುರ, ಸಂತೋಷ್ ಹಾವೇರಿ, ಕುಂಕುದ ಹಾಲೇಶ್, ಅಶೋಕ್, ಸಾಯಿ ಹಾಲೇಶ್, ಕಾರಿಗನೂರು ಮಂಜಣ್ಣ, ಗಂಗಾಧರ್ ಹಾಗೂ ಹೊನ್ನಾಳಿ, ನ್ಯಾಮತಿ, ಅವಳಿ ತಾಲೂಕಿನ ಸಮಾಜದ ಮುಖಂಡರು ಉಪಸ್ಥಿತರಿದ್ದರು.ಪೂರ್ವಭಾವಿ ಸಭೆಯಲ್ಲಿ ಮೃತ್ಯುಂಜಯ ಪಾಟೀಲ್ ಪ್ರಾರ್ಥನೆ ಮಾಡಿದರು. ಗಿರೀಶ್ ನಾಡಿಗ್ ನಿರೂಪಿಸಿದರು.
- - --13ಎಚ್.ಎಲ್.ಐ1.ಜೆಪಿಜಿ:
ಹೊನ್ನಾಳಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಹರ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ರಾಜ್ಯ ವೀರಶೈವ ಪಂಚಮಸಾಲಿ ಸಮಾಜ ಅಧ್ಯಕ್ಷ ಸೋಮನಗೌಡ ಪಾಟೀಲ್ ಮಾತನಾಡಿದರು.