ಕನ್ನಡಪ್ರಭ ವಾರ್ತೆ ತುಮಕೂರು
ಏ. 16 ರಂದು ಬೆಳಿಗ್ಗೆ ಧ್ವಜಾರೋಹಣ, ಕಳಸ ಸ್ಥಾಪನೆ ನಡೆಯಲಿದ್ದು, ನಂದಿ ವಾಹನ, ಗಜವಾಹನ ಸೇವೆ ಸಹ ಜರುಗಲಿದೆ. ಏ. 17 ರಂದು ಮಧ್ಯಾಹ್ನ 1 ಗಂಟೆಗೆ ಶ್ರೀ ವೀರಭದ್ರಸ್ವಾಮಿಯ ರಥೋತ್ಸವ ಜರುಗಲಿದೆ. ರಥೋತ್ಸವದ ಅಂಗವಾಗಿ ಹೂವಿನ ಅಲಂಕಾರ, ಧೂಳೋತ್ಸವ, ಪುಷ್ಪಾಲಂಕಾರ, ಪಾನಕ ಸೇವೆ ನಡೆಯಲಿದ್ದು, ಸಂಜೆ 7.30ಕ್ಕೆ ಶ್ರೀ ವೀರಭದ್ರಸ್ವಾಮಿ ನಾಟಕ ಮಂಡಳಿಯಿಂದ ಶನಿಪ್ರಭಾವ ಐತಿಹಾಸಿಕ ನಾಟಕದ ಪ್ರದರ್ಶನ ನಡೆಯಲಿದೆ. ರಾತ್ರಿ 8.30ಕ್ಕೆ ಸಿಂಹ ವಾಹನೋತ್ಸವ, ನವಿಲು ವಾಹನ, ಬೆಳ್ಳಿ ಪಲ್ಲಕ್ಕಿ ಉತ್ಸವ, ನಂದಿವಾಹನ ಸೇವೆಗಳು ನೆರವೇರಲಿವೆ.
ಏ. 18 ರಂದು ರಾತ್ರಿ ನಂದಿ ವಾಹನ ಸೇವೆ, ಏ. 19 ರಂದು ಸಂಜೆ 7.30ಕ್ಕೆ ಜೀ ಕನ್ನಡ ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ , ಅನುರಾಧ ಭಟ್ ಮತ್ತು ಶ್ರೀ ಹರ್ಷ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶ್ರೀ ಚನ್ನಿಗರಾಯ ಸ್ವಾಮಿಗೆ ಬೆಲ್ಲದ ಆರತಿ ಸೇವೆ, ರಾತ್ರಿ 10 ಗಂಟೆಗೆ ಅಕ್ಕಿಪೂಜಾ ಅಲಂಕಾರ, ಪಲ್ಲಕ್ಕಿ ಉತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಜರುಗಲಿದೆ.ಮೇ 20 ರಂದು ತಿರುಗಣಿ ಉತ್ಸವ, ಮೇ 21 ರಂದು ಓಕಳಿ ಮೆರವಣಿಗೆ ಜರುಗಲಿದೆ. ಹರಳೂರು ಜಂಗಮಮಠದ ಶ್ರೀ ಚನ್ನಬಸವಸ್ವಾಮೀಜಿ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕೈಂಕರ್ಯಗಳು ಜರುಗಲಿವೆ.
ಈ ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ವೀರಭದ್ರಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಶ್ರೀ ವೀರಭದ್ರಸ್ವಾಮಿ ಸೇವಾ ಸಮಿತಿ ಮತ್ತು ಶ್ರೀ ವೀರಭದ್ರೇಶ್ವರ ದಾಸೋಹ ಟ್ರಸ್ಟ್ ಮನವಿ ಮಾಡಿದೆ.