ಹರಪನಹಳ್ಳಿ ಪಟ್ಟಣ ಸೌಂದರೀಕರಣಕ್ಕೆ ಸಹಕರಿಸಿ: ಶಾಸಕಿ ಎಂ.ಪಿ.ಲತಾ

KannadaprabhaNewsNetwork |  
Published : Nov 04, 2025, 12:45 AM IST
ಹರಪನುಹಳ್ಳಿ ಪಟ್ಟಣದ ಹಳೆ ತಾಲೂಕು ಕಚೇರಿ ನಿವೇಶನದಲ್ಲಿ ಪುರಸಭಾ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಶಂಕುಸ್ಥಾಪನೆ ನೆರವೇರಿಸಿದರು. ಎಂ.ವಿ.ಅಂಜಿನಪ್ಪ, ಅಬ್ದುಲ್‌ ರಹಿಮಾನ್ ಇತರರು ಇದ್ದರು. | Kannada Prabha

ಸಾರಾಂಶ

ಬೀದಿ ಬದಿ ಇರುವ ಗೂಡಂಗಡಿಗಳನ್ನು ತೆರವು ಗೊಳಿಸಿ ಸುಂದರ ಗೊಳಿಸಬೇಕಾಗಿದೆ

ಹರಪನಹಳ್ಳಿ: ಪಟ್ಟಣದ ಸೌಂದರೀಕರಣಕ್ಕೆ ಪುರಸಭಾ ಸದಸ್ಯರು ಸೇರಿದಂತೆ ಸರ್ವರೂ ಸಹಕರಿಸಿ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ಅವರು ಪಟ್ಟಣದ ಹಳೆ ತಾಲೂಕು ಕಚೇರಿ ನಿವೇಶನದಲ್ಲಿ ಪುರಸಭಾ ಕಚೇರಿಯ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿ ಸೋಮವಾರ ಮಾತನಾಡಿದರು. ಬೀದಿ ಬದಿ ಇರುವ ಗೂಡಂಗಡಿಗಳನ್ನು ತೆರವು ಗೊಳಿಸಿ ಸುಂದರ ಗೊಳಿಸಬೇಕಾಗಿದೆ ಎಂದರು. ಗೂಡಂಗಡಿ, ಡಬ್ಬ ಅಂಗಡಿ ಮಾಲೀಕರು ತಳ್ಳುವ ಗಾಡಿಯಲ್ಲಿ ಬೆಳಿಗ್ಗೆ ಬಂದು ವ್ಯಾಪಾರ ಮಾಡಿಕೊಂಡು ಸ್ವಚ್ಛತೆ ಗೊಳಿಸಿ ವಾಪಸ್‌ ಮನೆಗೆ ತೆರಳಬೇಕು. ಕೈಗಾಡಿಗಳ ಇಟ್ಟು ವ್ಯಾಪಾರ ಮಾಡಲು ಪ್ರತ್ಯೇಕ ವಿಂಡ್ಸ್ ಸ್ಟ್ರೀಟ್ ಮಾಡಿಕೊಡಲಾಗುವುದು ಎಂದು ಹೇಳಿದರು.

ಪಟ್ಟಣ ಸೇರಿದಂತೆ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ. ನಿಮ್ಮ ಸಹಕಾರ ಬೇಕು ಎಂದು ಹೇಳಿದರು.

ಪುರಸಭಾ ಹಿರಿಯ ಸದಸ್ಯ ಎಂ.ವಿ. ಅಂಜಿನಪ್ಪ ಮಾತನಾಡಿ, ಹರಪನಹಳ್ಳಿ ಪಟ್ಟಣದಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರೇ ಹೆಚ್ಚು ಇದ್ದು, ಹಿಂದಿನ ಶಾಸಕರು ತಕ್ಕ ಮಟ್ಟಿಗೆ ಕೆಲಸ ಮಾಡಿದ್ದಾರೆ. ಮಾಜಿ ಶಾಸಕ ದಿ.ಎಂ.ಪಿ. ರವೀಂದ್ರ ಸಹ ಅನೇಕ ಅಭಿವೃದ್ದಿ ಕೆಲಸ ಮಾಡಿದರು. ಈಗಿನ ಶಾಸಕಿ ಎಂ.ಪಿ. ಲತಾ ಸಹ ₹80 ಲಕ್ಷ ದಲ್ಲಿ ನೂತನ ಡಿವೈಡರ್‌ ನಿರ್ಮಿಸಿ ದೀಪ ಅಳವಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಹರಪನಹಳ್ಳಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದ್ದಾರೆ. ಅಯ್ಯನ ಕೆರೆ ಪುನರುಜ್ಜೀವನ ಕಾಮಗಾರಿ ₹80 ಲಕ್ಷಗಳಲ್ಲಿ ಆಗುತ್ತದೆ. ಪಟ್ಟಣಕ್ಕೆ ತುಂಗಭದ್ರ ನದಿ ನೀರು ಸರಬರಾಜು ಎರಡನೇ ಹಂತದ ಯೋಜನೆ ಮಂಜೂರಾತಿ ಆಗಿದೆ ಎಂದು ಹೇಳಿದರು.

ಇನ್ನೊಬ್ಬ ಹಿರಿಯ ಸದಸ್ಯ ಅಬ್ದುಲ್‌ ರಹಿಮಾನ್‌ ಮಾತನಾಡಿ, ಶಾಸಕರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮುಂದೆ ಸಹ ನಾವು ಅಭಿವೃದ್ಧಿ ಕೆಲಸಗಳಿಗೆ ಸಹಕರಿಸುತ್ತೇವೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮಾತನಾಡಿ, ಸರ್ಕಾರದಿಂದ ಜಾರಿಯಾದ ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜೈನ ಅಭಿವೃದ್ಧಿ ಯೋಜನೆಯಲ್ಲಿ ಪಟ್ಟಣದ ಶಾಂತಿನಾಥ ದಿಗಂಬರ ಜೈನ ಜೀರ್ಣೋದ್ದಾರಕ್ಕೆ ₹8 ಲಕ್ಷ ಚೆಕ್ ನ್ನು ಹಾಗೂ 3 ಜನ ಜೈನ ಅರ್ಚಕರಿಗೆ ಗೌರ‍ಧನದ ಚೆಕ್‌ ನ್ನು ಈ ಸಂದರ್ಭದಲ್ಲಿ ಶಾಸಕರು ವಿತರಿಸಿದರು.

ಕರ್ನಾಟಕ ಮೌಲಾನ ಅಜಾದ್‌ ಪಬ್ಲಿಕ್‌ ಶಾಲೆ ಪಟ್ಟಣಕ್ಕೆ ಶಾಸಕರು ಮಂಜೂರು ಮಾಡಿಸಿದ್ದಾರೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದರು.

ಪುರಸಭಾ ಅಧ್ಯಕ್ಷೆ ಎಂ.ಪಾತೀಮಾಬೀ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ವೆಂಕಟೇಶ, ಸದಸ್ಯರಾದ ಲಾಟಿ ದಾದಾಪೀರ, ಗೊಂಗಡಿ ನಾಗರಾಜ, ಉದ್ದಾರ ಗಣೇಶ, ಮಂಜುನಾಥ ಇಜಂತಕರ್, ಜಾಕೀರ ಹುಸೇನ್, ಟಿ.ವಸಂತಪ್ಪ, ಭೀಮವ್ವ , ಭರತೇಶ, ಜಾವೇದ್, ಕಿರಣ್ ಶಾನ್ ಬಾಗ್, ಹನುಮಕ್ಕ, ಶೋಭಾ, ಗುಡಿ ನಾಗರಾಜ, ಹೇಮಣ್ಣ ಮೋರಗೇರಿ, ಅಲೀಂ, ಗೌಳಿ ವಿನಾಯಕ, ಬಿಇಒ ಎಚ್.ಲೇಪಾಕ್ಷಪ್ಪ, ಮುಖ್ಯಾಧಿಕಾರಿ ರೇಣುಕಾ ಎಸ್.ದೇಸಾಯಿ ಉಪಸ್ಥಿತರಿದ್ದರು.

PREV

Recommended Stories

ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ