ಹರಪನಹಳ್ಳಿ: ಸ್ಥಾಯಿ ಸಮಿತಿ ರಚನೆಗೆ ಪುರಸಭೆ ಒಪ್ಪಿಗೆ

KannadaprabhaNewsNetwork |  
Published : Nov 26, 2024, 12:46 AM IST
ಸ | Kannada Prabha

ಸಾರಾಂಶ

ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ೨೫ನೇ ವಾರ್ಡಿನ ಸದಸ್ಯ ವಕೀಲ ಟಿ.ವೆಂಕಟೇಶ ಅವಿರೋಧವಾಗಿ ಆಯ್ಕೆಯಾದರು.

ಹರಪನಹಳ್ಳಿ: ಪಟ್ಟಣದ ಪುರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಪುರಸಭೆಯ ನೂತನ ಸ್ಥಾಯಿ ಸಮಿತಿಯನ್ನು ರಚನೆ ಮಾಡಲಾಯಿತು.

ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ೨೫ನೇ ವಾರ್ಡಿನ ಸದಸ್ಯ ವಕೀಲ ಟಿ.ವೆಂಕಟೇಶ ಅವಿರೋಧವಾಗಿ ಆಯ್ಕೆಯಾದರು.

ಸ್ಥಾಯಿ ಸಮಿತಿ ಸದಸ್ಯರಾಗಿ ಅಬ್ದುಲ್‌ ರೆಹಮಾನ್, ಗೊಂಗಡಿ ನಾಗರಾಜ, ಉದ್ದಾರ ಗಣೇಶ, ತಾರಾ ಹನುಮಂತಪ್ಪ, ಲಾಟಿ ದಾದಾಪೀರ, ಜಾಕೀರ ಹುಸೇನ್‌ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಪುರಸಭೆ ಹಿರಿಯ ಸದಸ್ಯ ಎಂ.ವಿ. ಅಂಜಿನಪ್ಪ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರಿಗೆ ಅಭಿನಂದಿಸಿ ಮಾತನಾಡಿ, ಈ ಹಿಂದೆ ಪುರಸಭೆ ಅಧ್ಯಕ್ಷರ ಮೀಸಲಾತಿ ವಿಚಾರದಲ್ಲಿ ಸದಸ್ಯರು ಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದ ಸಂದರ್ಭದಲ್ಲಿ ಶಾಸಕರು ಮತ್ತು ನಮ್ಮ ಬಗ್ಗೆ ಪಕ್ಷದಲ್ಲಿನ ಕೆಲವರು ಟೀಕಿಸಿ ರಾಜೀನಾಮೆಗೆ ಒತ್ತಾಯಿಸಿದ್ದರು ಎಂದರು.

ರಾಜಕೀಯ ಮೀಸಲಾತಿ ಕೇಳುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಹಕ್ಕು ಇದೆ. ನಾವು ಅದನ್ನು ಪ್ರಶ್ನೆ ಮಾಡುವುದಕ್ಕೆ ಆಗಲ್ಲ ಎಂದ ಅವರು, ಕೋಟ್ ಮೊರೆ ಹೋಗಿದ್ದ ಸದಸ್ಯರು ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಕೇಸ್ ವಾಪಸ್ ಪಡೆದಿದ್ದರಿಂದ ತಡೆಯಾಜ್ಞೆ ತೆರವುಗೊಂಡಿತು. ಆಗ ಶಾಸಕರ ಮಾರ್ಗದರ್ಶನದಲ್ಲಿ ಅಲ್ಪಸಂಖ್ಯಾತರಿಗೆ ಆವಕಾಶ ಮಾಡಿ ಕೊಡಲಾಯಿತು ಎಂದರು.

ಈ ಹಿಂದೆ ಶಾಸಕರಾಗಿದ್ದಾಗ ಎಂ.ಪಿ. ರವೀಂದ್ರ ಪುರಸಭೆಗೆ ವಿಶೇಷ ಅನುದಾನ ನೀಡಿದ್ದು ಬಿಟ್ಟರೆ ಬೇರೆಯಾವ ಶಾಸಕರು ಈವರೆಗೆ ಯಾವುದೇ ವಿಶೇಷ ಅನುದಾನ ನೀಡಿಲ್ಲ. ಹಾಗಾಗಿ ಲತಾ ಮಲ್ಲಿಕಾರ್ಜುನ್‌ ಪುರಸಭೆಗೆ ವಿಶೇಷ ಅನುದಾನ ತಂದು ಪಟ್ಟಣದ ಹೆಚ್ಚಿನ ಅಭಿವೃದ್ಧಿ ಗೊಳಿಸಬೇಕೆಂದು ಮನವಿ ಮಾಡಿದರು.

ಈಗಾಗಲೇ ಪಟ್ಟಣಕ್ಕೆಎರಡನೇ ಹಂತದ ಕುಡಿಯುವ ನೀರಿನ ಯೋಜನೆ ಟೆಂಡರ್ ಹಂತಕ್ಕೆ ಬಂದಿರುವುದರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಅವರು ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದಾರ್ಜೆಗೆರಿಸಲು ಪ್ರಯತ್ನಿಸಬೇಕೆಂದು ಕೋರಿದರು.

ಪುರಸಭೆ ಸದಸ್ಯರಾದ ಅಬ್ದುಲ್‌ ರೆಹಮಾನ್, ಎಚ್.ಎಂ. ಅಶೋಕ ಮಾತನಾಡಿದರು.

ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್‌ ಪುರಸಭೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರಿಗೆ ಶುಭ ಕೋರಿದರು.

ಇದೇ ವೇಳೆ ಪುರಸಭೆ ನೂತನ ನಾಮನಿರ್ದೇಶಿತ ಸದಸ್ಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಎಂ.ಫಾತಿಮಾಬಿ ಶೇಕ್ಷಾವಲಿ, ಉಪಾಧ್ಯಕ್ಷ ಎಚ್.ಕೊಟ್ರೇಶ, ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ, ಪುರಸಭೆ ಸದಸ್ಯರು ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!