ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ: ಹೊನ್ನಯ್ಯ

KannadaprabhaNewsNetwork |  
Published : Jul 25, 2024, 01:28 AM IST
ವಡಗೇರಾ ಪಟ್ಟಣದ ಡಿ.ಡಿ.ಯು ಶಿಕ್ಷಣ ಸಂಸ್ಥೆಯ ವತಿಯಿಂದ ಮಕ್ಕಳ ಭವಿಷ್ಯದ ಬದುಕಿಗೆ ಜ್ಞಾನದ ದೀವಿಗೆ ಹಚ್ಚೋಣ ಎಂಬ ವಿನೂತನ ಕಾರ್ಯಕ್ರಮ ಜರುಗಿತು. | Kannada Prabha

ಸಾರಾಂಶ

Hard work comes reward: principal Honnaia sugest to student

ಕನ್ನಡಪ್ರಭ ವಾರ್ತೆ ಯಾದಗಿರಿ

ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳು ಶಿಸ್ತು, ಸಮಯಕ್ಕೆಆದ್ಯತೆ ನೀಡಬೇಕೆಂದು ಡಿ.ಡಿ.ಯು ಕಾಲೇಜಿನ ಪ್ರಾಂಶುಪಾಲ ಹೊನ್ನಯ್ಯ ಕೊಂಕಲ್ ಹೇಳಿದರು. ವಡಗೇರಾ ಡಿ.ಡಿ.ಯು ಶಿಕ್ಷಣ ಸಂಸ್ಥೆ ಆಯೋಜಿಸಿದ್ದ ಮಕ್ಕಳ ಭವಿಷ್ಯದ ಬದುಕಿಗೆ ಜ್ಞಾನದ ದೀವಿಗೆ ಹಚ್ಚೋಣ ಎಂಬ ವಿನೂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿರುವಂತೆ ಸಲಹೆ ನೀಡಿದರು. ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿಯ ಎಸ್. ಏನ್. ಪಾಟೀಲ್ ಮತ್ತು ನಾಗರೆಡ್ಡಿ ಅವರು ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಉಪನ್ಯಾಸಕರಾದ ಅಂಬರೀಶ್, ನರಸಪ್ಪ, ಬಸವರಾಜ , ನಿಂಗಪ್ಪ , ರೇಷ್ಮಾ, ಆರತಿ, ಮಾಳ್ವಿಕಾ, ಶ್ರೀನಿವಾಸ, ಮಾಂತೇಶ, ಖಂಡಪ್ಪ ಇದ್ದರು.

-----

ಫೋಟೊ: 24ವೈಡಿಆರ್4: ವಡಗೇರಾ ಡಿ.ಡಿ.ಯು ಶಿಕ್ಷಣ ಸಂಸ್ಥೆಯ ವತಿಯಿಂದ ಮಕ್ಕಳ ಭವಿಷ್ಯದ ಬದುಕಿಗೆ ಜ್ಞಾನದ ದೀವಿಗೆ ಹಚ್ಚೋಣ ಎಂಬ ವಿನೂತನ ಕಾರ್ಯಕ್ರಮ ನಡಡೆಯಿತು.

------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನಬಸವ ಶ್ರೀ ಇಡೀ ಮನುಕುಲ ಪ್ರೀತಿಸುವ ಗುಣದವರು
ಮಕ್ಕಳಲ್ಲಿ ಪರಿಸರ ಜ್ಞಾನ ಮೂಡಿಸುತ್ತಿರುವ ಪ್ರಶಂಸಾರ್ಹ: ಎಂ.ಎನ್.ಪಾಟೀಲ