ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಮೋದಿ ಗೆಲವಿಗೆ ಕಾರ್ಯಕರ್ತರ ಶ್ರಮ: ಸಂಸದ ಪ್ರತಾಪ್‌ಸಿಂಹ ಕರೆ

KannadaprabhaNewsNetwork | Published : Nov 28, 2023 12:30 AM

ಮುಂಬರುವ ಲೋಕಸಭಾ ಚುನಾವಣೆಯು ನಮ್ಮ ಮುಂದಿರುವ ಸವಾಲಿನ ಚುನಾವಣೆಯಾಗಿದೆ. ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪಕ್ಷದ ಕಾರ್ಯಕರ್ತರು ಶ್ರಮ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ಸಿಂಹ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಗೋಣಿಕೊಪ್ಪಮುಂಬರುವ ಲೋಕಸಭಾ ಚುನಾವಣೆಯು ನಮ್ಮ ಮುಂದಿರುವ ಸವಾಲಿನ ಚುನಾವಣೆಯಾಗಿದೆ. ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪಕ್ಷದ ಕಾರ್ಯಕರ್ತರು ಶ್ರಮ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ಸಿಂಹ ಕರೆ ನೀಡಿದರು.ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ವಿರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನವಾಗಿ ವಿವಿಧ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದವರನ್ನು ಸನ್ಮಾನಿಸಿ ಮಾತನಾಡಿದರು.

ಸಹಕಾರ ಸಂಘಗಳಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲೆಯ 30 ಸಹಕಾರ ಸಂಘಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿ ನಿರ್ದೇಶಕರಾಗಿದ್ದಾರೆ. ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರ ಪಡೆ ಗಟ್ಟಿಯಾಗಿದೆ ಎಂದು ತಿಳಿಸಿದರು.

ವಿಧಾಸಭಾ ಸೋಲು ಮರೆಯೋಣ:

ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಸೋಲು ಕಂಡಿರುವುದನ್ನು ನಾವುಗಳು ಕಹಿ ಘಟನೆ ಎಂದು ಮರೆಯೋಣ. ಸೋಲಿಗೆ ಕಾರಣಗಳನ್ನು ಹೀಗಾಗಲೇ ಕಾರ್ಯಕರ್ತರಿಗೆ ಮನವರಿಕೆಯಾಗಿದೆ. ಸೂರ್ಯನಿಗೆ ಒಮ್ಮೆ ಗ್ರಹಣ ಬರುವುದು ಸಹಜ. ಅದೇ ರೀತಿಯಲ್ಲಿ ನಾವು ಒಂದು ಬಾರಿ ಸೋಲನ್ನು ಕಂಡಿದ್ದೇವೆ. ಮುಂದೆ ಸೋಲನ್ನು ಕಾಣುವ ಅವಕಾಶವೇ ಎದುರಾಗಬಾರದು. ಕಳೆದ ಬಾರಿ ನಡೆದ ಸೋಲಿನ ಸೇಡನ್ನು ಮುಂದಿನ ಲೋಕಸಭೆಯಲ್ಲಿ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಕೊಡಗು ಜಿಲ್ಲೆಯಲ್ಲಿ ಬಿಜೆಪಿಯ ಭದ್ರಕೋಟೆಯನ್ನು ಸಾಬೀತು ಮಾಡಬೇಕು. ಆ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ತಮ್ಮ ಜವಾಬ್ದಾರಿಯನ್ನು ಚಾಚೂತಪ್ಪದೆ ಪಾಲಿಸಬೇಕು ಎಂದರು.ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಪೊಲೀಸ್ ಮೊಕದ್ದಮೆ ದಾಖಲಿಸುವ ವಿಚಾರಗಳು ಈಗಾಗಲೇ ತಿಳಿದು ಬಂದಿದೆ. ಪಕ್ಷದ ನಾಯಕರು ಕಾರ್ಯಕರ್ತರೊಂದಿಗೆ ಸದಾ ಒಡನಾಟದಲ್ಲಿದ್ದಾರೆ. ಯಾವುದಕ್ಕೂ ಧೃತಿಗೆಡುವ ಅವಶ್ಯಕತೆ ಎದುರಾಗಬಾರದು. ಸಮಸ್ಯೆ ಎದುರಾದಾಗ ಯಾವುದೇ ಸಂದರ್ಭದಲ್ಲಿ ಪಕ್ಷದ ಜವಾಬ್ದಾರಿಯುತ ನಾಯಕರಿಗೆ ಸಂಪರ್ಕಿಸಬೇಕು. ಅಗತ್ಯವಿದ್ದಲ್ಲಿ ಹೋರಾಟಕ್ಕೆ ಧುಮುಕಬೇಕು ಎಂದರು.

ಈಗಾಗಲೇ ಕೊಡಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಬಗ್ಗೆ ವಿವರ ನೀಡಿದ್ದೇನೆ. ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಕೇವಲ ಸುಳ್ಳಿನ ಸರಮಾಲೆಯನ್ನೇ ಜನರ ಮುಂದಿಟ್ಟು ಗೆಲವು ಸಾಧಿಸಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದರು.ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ವಿಧಾನಸಭೆಯಲ್ಲಿ ಸೋಲು ಕಂಡಿದ್ದೇವೆ. ಇದನ್ನು ಕಹಿ ಘಟನೆ ಎಂದು ಮರೆಯೋಣ. ಇದೇ ವಿಚಾರವನ್ನು ಮನಸ್ಸಿನಲ್ಲಿಟ್ಟುಕೊಂಡು ನೋವು ಅನುಭವಿಸುವುದು ಉಚಿತವಲ್ಲ. ಕೊಡಗಿನಲ್ಲಿ ಬಿಜೆಪಿ ಭದ್ರಕೋಟೆಯನ್ನು ಮುಂದೆ ಬರುವ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಸಾಬೀತುಪಡಿಸಬೇಕು. ಕೇಂದ್ರ ಸರ್ಕಾರವು ಜನತೆಗೆ ನೀಡಿರುವ ಯೋಜನೆಗಳ ಬಗ್ಗೆ ಮನೆ ಮನೆಗೆ ತೆರಳಿ ಮನವರಿಕೆ ಮಾಡಿಕೊಡಬೇಕು ಎಂದರು.

ಸರ್ಕಾರ ಬಂದು ಆರು ತಿಂಗಳು ಕಳೆದರೂ ಕೊಡಗಿನ ಅಭಿವೃದ್ಧಿಗೆ ಯಾವುದೇ ಅನುದಾನ ಮಂಜೂರಾಗಿಲ್ಲ. ಈಗಾಗಲೇ ಕ್ಷೇತ್ರದಲ್ಲಿ ಶಾಸಕರು ನಡೆಸುತ್ತಿರುವ ಗುದ್ದಲಿ ಪೂಜಾ ಕಾರ್ಯಕ್ರಮವು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭ ಮಂಜೂರಾಗಿರುವ ಅನುದಾನವಾಗಿದೆ. ಈಗಿನ ಸಿದ್ದರಾಮಯ್ಯ ಸರ್ಕಾರ ಕೊಡಗಿನ ಅಭಿವೃದ್ಧಿಗೆ ಬಿಡಿಗಾಸನ್ನು ನೀಡಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ಕೇಂದ್ರ ಸರ್ಕಾರ ಯೋಜನೆಯನ್ನು ರಾಜ್ಯ ಸರ್ಕಾರ ಯೋಜನೆ ಎಂದು ಬಿಂಬಿಸುವ ಕೆಲಸ ನಡೆಯುತ್ತಿದೆ. ಇದನ್ನು ಸ್ಥಳೀಯ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಬೇಕು. ಯಾವುದೇ ಕಾರ್ಯಕರ್ತರು ಭಯಪಡುವ ಅವಶ್ಯಕತೆಯಿಲ್ಲ. ಕಾರ್ಯಕರ್ತರ ಪರವಾಗಿ ನಾವಿದ್ದೇವ ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬುವ ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ನೆಲ್ಲೀರ ಚಲನ್, ಪ್ರತಿ ಚುನಾವಣೆಯಲ್ಲಿಯೂ ಬಿಜೆಪಿ ಪಕ್ಷ ಪ್ರತಿ ಬೂತ್‌ನಲ್ಲಿಯೂ ಹೆಚ್ಚಿನ ಮತ ನೀಡುವ ಕಾರ್ಯ ಮುಂದುವರಿಸಿದೆ. ಮುಂದಿನ ಚುನಾವಣೆಯಲ್ಲಿ ಇದನ್ನು ಮತ್ತಷ್ಟು ಹೆಚ್ಚು ಮಾಡಲಾಗುತ್ತಿದೆ. ಕಾರ್ಯಕರ್ತರು ಸಕ್ರೀಯವಾಗಿದ್ದು, ಪಕ್ಷದ ಚಟುವಟಿಕೆಯಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.

ಪ್ರತಿಷ್ಠಿತ ಪೊನ್ನಂಪೇಟೆಯ ಎಪಿಸಿಎಂಎಸ್ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ತೀವ್ರ ಪೈಪೋಟಿ ನಡುವೆ ಬಿಜೆಪಿಯ 13 ಮಂದಿ ನಿರ್ದೇಶಕರು ಆಯ್ಕೆ ಆಗಿರುವುದನ್ನು ಪರಿಗಣಿಸಿ ಎಲ್ಲ ನಿರ್ದೇಶಕರನ್ನು ಅತಿಥಿಗಳು ಸನ್ಮಾನಿಸಿದರು.ಪಕ್ಷದ ಮುಖಂಡರಾದ ಮಾಚಿಮಾಡ ರವೀಂದ್ರ, ಗುಮ್ಮಟ್ಟೀರ ಕಿಲನ್ ಗಣಪತಿ ಮತ್ತಿತರರಿದ್ದರು.