ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದ ಜಗದ್ಗುರು ಶ್ರೀ ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದಲ್ಲಿ ಏರ್ಪಡಿಡಿಸಿದ್ದ ಹರ್ಡೇಕರ ಮಂಜಪ್ಪ ಅವರ ಸ್ಮರಣೋತ್ಸವ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.
ಸ್ವತಃ ಗಾಂಧೀಜಿಯವರು ತಮ್ಮ ಮೇಲೆ ವಿಧಿಸಿಕೊಂಡಿದ್ದಕ್ಕಿಂತ ಹೆಚ್ಚಿನ ಶಿಸ್ತನ್ನು ಮಂಜಪ್ಪನವರು ತಮ್ಮ ವೈಯಕ್ತಿಕ ಜೀವನದಲ್ಲಿ ಅವಡಿಸಿಕೊಂಡಿದ್ದರು. ಚರಕದಿಂದ ನೂಲುವುದು ಮತ್ತು ಖಾದಿ ಬಟ್ಟೆಯ ನೇಯ್ಗೆಯನ್ನು ಸಹಾ ತಮ್ಮ ದಿನಚರಿಯಾಗಿಸಿಕೊಂಡ ಮಂಜಪ್ಪನವರು ತಮ್ಮ ಖಾದಿ ವಿಜಯ ಮಾಸ ಪತ್ರಿಕೆಯ ಮೂಲಕ ಖಾದಿ ಪ್ರಚಾರ ಕೈಗೊಂಡಿದ್ದರು ಎಂದು ಹೇಳಿದರು.ಖಾದಿಯ ವಿಜ್ಞಾನ ಎಂಬ ಗ್ರಂಥವನ್ನು ರಚಿಸಿದರು. ಆದ್ದರಿಂದಲೇ ಜನ ಇವರನ್ನು ಕರ್ನಾಟಕದ ಗಾಂಧಿ ಎಂದು ಕರೆದರು. ಮಂಜಪ್ಪನವರಿಗೆ ಬಸವ ತತ್ವವೇ ಅವರ ಉಸಿರು. ಬಸವ ತತ್ವಕ್ಕೆ ಶರಣಾಗಿ, ವಿಶ್ವದಲ್ಲೇ ಮೊಟ್ಟ ಮೊದಲ ಬಾರಿಗೆ 1913 ರಲ್ಲಿ ಬಸವ ಜಯಂತಿ ಆಚರಿಸಿದರು. ಬಸವ ಜಯಂತಿ ಆಚರಿಸುವ ಮೂಲಕ ವಿಶ್ವಕ್ಕೆ ಬಸವಣ್ಣನವರನ್ನು ಪರಿಚಯಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು.
ಸಮಾರಂಭದಲ್ಲಿ ರಾಜು, ವೆಂಕಟೇಶ, ಪಾಂಡು, ಗೋವಿಂದಪ್ಪ, ಯಂಕಣ್ಣ, ಮಾರುತಿ ಬಂಡಿವಡ್ಡರ, ಭರಮಪ್ಪ, ತಿಮ್ಮಣ್ಣ, ಕೊಲ್ಲಪ್ಪ, ಪಾಂಡು ನಾಗಪ್ಪ, ದುರ್ಗಪ್ಪ, ಅಶೋಕ ಜೈಕಾರ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.