ಕೌಟುಂಬಿಕ ಬದುಕಿನಲ್ಲಿ ಸಾಮರಸ್ಯ ಅಗತ್ಯ: ಡಾ.ಕಬ್ಬಿನಾಲೆ ಭಾರದ್ವಾಜ್ ಅಭಿಮತ

KannadaprabhaNewsNetwork |  
Published : May 17, 2024, 12:30 AM IST
25 | Kannada Prabha

ಸಾರಾಂಶ

ಸುಖವನ್ನು ಹಂಚಿಕೊಂಡಾಗ ಸಂತೋಷ ಹೆಚ್ಚುತ್ತದೆ. ದೇವರ ದಯೆ ಎಂಬುದು ಸಂಕಷ್ಟದ ಸ್ವರೂಪದಲ್ಲೂ ಬರುವ ಸಾಧ್ಯತೆ ಇದೆ. ಇಂದಿನ ಸಮಾಜದಲ್ಲಿ ಹಲವು ಪ್ರಲೋಭನೆಗಳು ಸಾಮರಸ್ಯದ ಮೇಲೆ ಪ್ರಭಾವ ಬೀರುತ್ತವೆ

ಕನ್ನಡಪ್ರಭ ವಾರ್ತೆ ಮೈಸೂರುಕೌಟುಂಬಿಕ ಬದುಕಿನಲ್ಲಿ ಸಾಮರಸ್ಯದಿಂದ ಕಷ್ಟಗಳನ್ನು ಎದುರಿಸಲು ಸಾಧ್ಯ ಎಂದು ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್‌ ಅಭಿಪ್ರಾಯಪಟ್ಟರು.ಬಿಳಿಗಿರಿರಂಗನ ಬೆಟ್ಟದ ಜೆಎಸ್‌ಎಸ್‌ ಆಶ್ರಮದಲ್ಲಿ ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ, ಜೆಎಸ್‌ಎಸ್ ಮಹಾವಿದ್ಯಾಪೀಠ ಹಾಗೂ ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿಗಳ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಏರ್ಪಡಿಸಿರುವ ಜೀವನೋತ್ಸಾಹ ಶಿಬಿರದ ನಾಲ್ಕನೇ ದಿನದ ಕೌಟುಂಬಿಕ ಸಾಮರಸ್ಯ ಕುರಿತು ಅವರು ಉಪನ್ಯಾಸ ನೀಡಿದರು.ಸುಖವನ್ನು ಹಂಚಿಕೊಂಡಾಗ ಸಂತೋಷ ಹೆಚ್ಚುತ್ತದೆ. ದೇವರ ದಯೆ ಎಂಬುದು ಸಂಕಷ್ಟದ ಸ್ವರೂಪದಲ್ಲೂ ಬರುವ ಸಾಧ್ಯತೆ ಇದೆ. ಇಂದಿನ ಸಮಾಜದಲ್ಲಿ ಹಲವು ಪ್ರಲೋಭನೆಗಳು ಸಾಮರಸ್ಯದ ಮೇಲೆ ಪ್ರಭಾವ ಬೀರುತ್ತವೆ. ಧಾರ್ಮಿಕ ವಿಧಿ- ವಿಧಾನಗಳ ನೆಲೆಯಲ್ಲಿ ನಮ್ಮ ಕೌಟುಂಬಿಕ ಸಾಮರಸ್ಯ ಅಡಗಿದೆ. ಸೇವೆ, ಪ್ರಾಮಾಣಿಕತೆ, ಸತ್ಯ, ನಿಷ್ಠೆ ಇವೆಲ್ಲವೂ ಸಾಮರಸ್ಯದ ಅಂಗಗಳು ಎಂದು ಅವರು ಹೇಳಿದರು.ತುಮಕೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಸ್ವಾಮಿ ವೀರೇಶಾನಂದಜೀ ಅವರು ಭಾರತೀಯ ಸಂಸ್ಕೃತಿ ಅತ್ಯುನ್ನತವಾದುದು. ಜಗತ್ತಿನಲ್ಲಿ ಎಲ್ಲಿಯೂ ಕಾಣದ ಶ್ರೀಮಂತ ಪರಂಪರೆ ನಮ್ಮದೆಂಬುದು ನಾವೆಲ್ಲರೂ ಹೆಮ್ಮೆ ಪಡಬೇಕಾದ ಸಂಗತಿ. ನಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಇಂದಿನ ಮಕ್ಕಳಿಗೆ ತಿಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಿಜವಾದ ಜೀವನ ಎಂದರೆ ಮೌಲ್ಯ ಪೂರ್ಣವಾದದ್ದು. ಜಗತ್ತಿನಲ್ಲಿ ಅಶಾಂತಿಗೆ ಕಾರಣರಾದವರು ಎಲ್ಲಿಯೂ ಸ್ಥಾನ ಪಡೆದಿಲ್ಲ. ಶಾಂತಿಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳು ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ ಎಂದು ಅವರು ತಿಳಿಸಿದರು.ಭಾರತೀಯ ವಿಜ್ಞಾನ ಸಂಸ್ಥೆಯ ಮುಖ್ಯ ಸಂಶೋಧನಾ ವಿಜ್ಞಾನಿ ಡಾ.ಎಸ್.ಎನ್. ಓಂಕಾರ್‌ ಅವರು ಎಲ್ಲಾ ಶುಭಕಾರ್ಯಗಳು ಮೊದಲಿಗೆ ಪ್ರಾರ್ಥನೆಯೊಂದಿಗೆ ಆರಂಭಗೊಳ್ಳುವುದು. ದೇವರು ಸರ್ವಾಂತರ್ಯಾಮಿ ಆ ಭಗವಂತನನ್ನುಕಾಣಲು ಪ್ರಾರ್ಥನೆ ಮುಖ್ಯವಾಗುತ್ತದೆ. ಪ್ರಾಮಾಣಿಕ ಪ್ರಾರ್ಥನೆ ಎಂದಿಗೂ ವಿಫಲವಾಗುವುದಿಲ್ಲ. ಸ್ವಾರ್ಥದ ಉದ್ದೇಶದಿಂದ ಪ್ರಾರ್ಥನೆ ಸಲ್ಲದು ಎಂದರು.ಶಿಬಿರಾರ್ಥಿಗಳು ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಯೋಗಾಭ್ಯಾಸ- ಧ್ಯಾನದಲ್ಲಿ ಪಾಲ್ಗೊಂಡಿದ್ದರು. ಸಂಜೆ ದೇಸಿ ಆಟಗಳನ್ನು ಆಡಿದರು. ಸಾಮೂಹಿಕ ಪ್ರಾರ್ಥನೆ ನಂತರ ಶಿಬಿರಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಶಿಬಿರದಲ್ಲಿ ತುಮಕೂರು, ಬೆಳಗಾವಿ, ಬೆಂಗಳೂರು, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಗಳಿಂದ 70ಕ್ಕೂ ಹೆಚ್ಚು ಶಿಬಿರಾರ್ಥಿಗಳು ಪಾಲ್ಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ