ಕನ್ನಡಪ್ರಭ ವಾರ್ತೆ ಮಂಡ್ಯ
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಭೆ ನಡೆಸಿ ಮಾತನಾಡಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆಯುವವರು ಬಡ ಕುಟುಂಬದವರು ಹಾಗೂ ಅವರು ಸಾಲ ಪಡೆಯುವುದು ಕೇವಲ ಒಂದರಿಂದ ಎರಡು ಲಕ್ಷ ಆಗಿರುತ್ತದೆ. ಅವರು ಸಾಲದ ಕಂತು ಪಾವತಿ ಕೇವಲ ಸಾವಿರ ಇರುತ್ತದೆ. ಅವರನ್ನು ಸಾಲ ಮರುಪಾವತಿ ಮಾಡಿಲ್ಲ ಎಂದು ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದನಿಂದನೆ ಮಾಡುವುದು, ದಬ್ಬಾಳಿಕೆ ಮಾಡುವುದರಿಂದ ಅವಮಾನಕ್ಕೆ ಒಳಗಾಗಿ ಆತ್ಮಹತ್ಯೆಯಂತಹ ಕೃತ್ಯ ಸಂಭವಿಸುತ್ತಿಸೆ. ಇದು ನಾಗರೀಕ ಸಮಾಜ ತಲೆ ತಗ್ಗಿಸುವ ರೀತಿ ಮಾಡುತ್ತಿದೆ ಎಂದರು.
ಆರ್ಬಿಐ ನಿಯಮ ಪಾಲಿಸಿ ಆರ್ಬಿಐನಲ್ಲಿ ಸಾಲ ವಸೂಲಾತಿ ಮಾಡಲು ಸಮಯ ನಿಗದಿಯಾಗಿರುತ್ತದೆ. ನಿಗದಿ ಪಡಿಸಿರುವ ಸಮಯದಲ್ಲಿ ಮಾತ್ರ ಸಿಬ್ಬಂದಿ ಸಾಲದ ಕಂತು ಪಡೆಯಲು ಮನೆಗಳಿಗೆ ತೆರಳಬೇಕು ಎಂದು ಸೂಚಿಸಿದರು.ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಿ:
ಬಡ್ಡಿಯ ಬಗ್ಗೆ ಮಾಹಿತಿ ನೀಡಿ:
ಸಾಲದ ಕಂತು ಮರುಪಾವತಿ ಮಾಡಲು ತಡ ಮಾಡಿದರೆ ಲಿಖಿತವಾಗಿ ನೊಟೀಸ್ ಜಾರಿ ಮಾಡಿ. ಅವರ ಕಷ್ಟಗಳ ಬಗ್ಗೆ ತಿಳಿದುಕೊಂಡು ಸಮಯಾವಕಾಶ ನೀಡುವಂತೆ ತಿಳಿಸಿದರು.
ಮೈಕ್ರೋ ಫೈನಾನ್ಸ್ ಕುರಿತು ಹಲವಾರು ದೂರುಗಳು ಜಿಲ್ಲಾಡಳಿತಕ್ಕೆ ಬರುತ್ತದೆ. ಅವುಗಳನ್ನು ಪರಿಶೀಲಿಸಲು ಜಿಲ್ಲಾ ಮಟ್ಟದಲ್ಲಿ ಒಂದು ದೂರು ಕೇಂದ್ರ ಹಾಗೂ ತಾಲೂಕು ಮಟ್ಟದಲ್ಲಿ ಒಬ್ಬರು ನೋಡಲ್ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದರು.
ಸಾಲ ವಸೂಲಾತಿ ಮಾಡುವಾಗ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವ ಬಗ್ಗೆ ತರಬೇತಿ ನೀಡಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು ಎಂದರು.
ಮುಖಂಡರಾದ ವೆಂಕಟಗಿರಿಯಯ್ಯ ಮಾತನಾಡಿ, ಸಾಲ ನೀಡುವಾಗ ಅವರಿಗೆ ಮರುಪಾವತಿ ಮಾಡುವ ಶಕ್ತಿಯನ್ನು ಪರಿಶೀಲಿಸದೆ ಸಾಲ ನೀಡುವುದು. 4-5 ಮೈಕ್ರೋ ಫೈನಾನ್ಸ್ ಗಳು ಒಬ್ಬರಿಗೆ ಸಾಲ ನೀಡುವುದು. ನಂತರ ದಬ್ಬಾಳಿಕೆಯ ಅಸ್ತ್ರ ಪ್ರಯೋಗಿಸುವುದು ಕಂಡುಬರುತ್ತಿದೆ. ಇವುಗಳನ್ನು ಸರಿಪಡಿಸಿಕೊಂಡು ಸಾರ್ವಜನಿಕರಿಗೆ ಸಹಾಯಕವಾಗುವ ರೀತಿ ಕಾರ್ಯನಿರ್ವಹಿಸಿ ಎಂದರು.