ಭಾರತೀ ಕಾಲೇಜಿನಲ್ಲಿ ಸುಗ್ಗಿ ಸಂಕ್ರಾಂತಿ ಸಂಭ್ರಮ: ರಾಶಿಗೆ ಪೂಜೆ

KannadaprabhaNewsNetwork |  
Published : Jan 13, 2024, 01:32 AM IST
12ಕೆಎಂಎನ್ ಡಿ16,17 | Kannada Prabha

ಸಾರಾಂಶ

ಕಾಲೇಜಿನ ಅಂಗಳದಲ್ಲಿ ಅಂಗಡಿಗಳ ನಿರ್ಮಾಣ, ಚಕ್ಕುಲಿ, ನಿಪ್ಪಟ್ಟು, ರವೆ ಉಂಡೆ, ಕಡಲೆಕಾಯಿ, ಸೋತೆಕಾಯಿ, ಬೇಯಿಸಿದ ಹಸಿರುಕಾಳು, ತರಕಾರಿ, ಪಾನಕ, ಮಜ್ಜಿಗೆ ಮೊದಲಾದ ದೇಶಿ ತಿಂಡಿ ಪದಾರ್ಥಗಳನ್ನು ಮಾರಾಟ, ವಿದ್ಯಾರ್ಥಿಗಳಿಗೆ ಕಜ್ಜಾಯದ ಬುಟ್ಟಿಯ ಮೂಲಕ ಬಹುಮಾನ ವಿತರಣೆ

ಕನ್ನಡಪ್ರಭ ವಾರ್ತೆ ಭಾರತೀನಗರ

ಭಾರತೀ ಕಾಲೇಜಿನಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್‌ನಿಂದ ಸಂಕ್ರಾಂತಿ ಸಂಭ್ರಮದ ರಾಶಿ ಪೂಜೆ ಮಾಡುವ ಮೂಲಕ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಯ್‌ ಮಧು ಚಾಲನೆ ನೀಡಿದರು.

ಟ್ರಸ್ಟ್ ಅಧ್ಯಕ್ಷ ಮಧು ಜಿ.ಮಾದೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಂಕ್ರಾಂತಿ ಸಂಭ್ರಮದ ವಿಶೇಷತೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕುಣಿದು ಕುಪ್ಪಳಿಸಿ ವಿಜೃಂಭಣೆಯಿಂದ ಆಚರಣೆ ಮಾಡಿದರು.

ಕಾಲೇಜು ಆವರಣ ಹಬ್ಬದ ವಾತಾವರಣದಿಂದ ನಿರ್ಮಾಣವಾಗಿತ್ತು. ಕಾಲೇಜಿನ ಎಲ್ಲ ಅಧ್ಯಾಪಕರು, ಅಧ್ಯಾಪಕೇತರರು, ವಿದ್ಯಾರ್ಥಿಗಳು ದೇಶಿ ಉಡುಗೆ ತೊಟ್ಟು ಪಾಲ್ಗೊಂಡಿದ್ದರು. ಪೂರ್ವಿಕರು ಹಾಡುತ್ತಿದ್ದ ಹಾಡು, ನೃತ್ಯ, ಗಾದೆ, ಒಗಟು ಹೇಳುವುದು, ಕೋಲಾಟ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ಅಂಗಳದಲ್ಲಿ ಅಂಗಡಿಗಳನ್ನು ನಿರ್ಮಿಸಿ ವಿದ್ಯಾರ್ಥಿಗಳು ಚಕ್ಕುಲಿ, ನಿಪ್ಪಟ್ಟು, ರವೆಉಂಡೆ, ಕಡಲೆಕಾಯಿ, ಸೋತೆಕಾಯಿ, ಬೇಯಿಸಿದ ಹಸಿರುಕಾಳು, ತರಕಾರಿ, ಪಾನಕ, ಮಜ್ಜಿಗೆ ಮೊದಲಾದ ದೇಶಿ ತಿಂಡಿ ಪದಾರ್ಥಗಳನ್ನು ಮಾರಾಟ ಮಾಡಿದರು. ಇದರಲ್ಲಿ ತಿಂಡಿಗಳನ್ನು ರುಚಿಕರವಾಗಿ ಮಾಡಿದಂತಹ ವಿದ್ಯಾರ್ಥಿಗಳಿಗೆ ಕಜ್ಜಾಯದ ಬುಟ್ಟಿಯ ಮೂಲಕ ಬಹುಮಾನ ನೀಡಲಾಯಿತು.

ಸ್ವದೇಶಿ ಬಳಸಿ ದೇಶ ಉಳಿಸಿ, ಜಾಗತೀಕರಣ ಸಾಕು ಭಾರತೀಕರಣ ಬೇಕು. ಸ್ವದೇಶಿಯಿಂದ ರಾಷ್ಟ್ರಜಾಗೃತಿ. ಆಚಾರವೇ ಔಷಧ ಎಂಬ ಘೋಷಣೆಗಳನ್ನು ಕಾಲೇಜಿನೊಳಗೆ ಮೊಳಗಿದ್ದು ಕಂಡುಬಂದಿತು.

ಅಲಂಕೃತಗೊಂಡ ಎತ್ತಿನಗಾಡಿಗಳಿಗೆ ಮತ್ತು ಸುಂದರವಾಗಿ ದೇಸಿ ವೇಷಭೂಷಣ ತೊಟ್ಟ ಇಬ್ಬರು ವಿದ್ಯಾರ್ಥಿ, ವಿದ್ಯಾರ್ಥಿನೀಯರಿಗೆ ದೇಶಿ ಚಲುವ ಮತ್ತು ದೇಶಿ ಚೆಲುವೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳು ರಾಸುಗಳನ್ನು ಕಿಚ್ಚುಹಾಯಿಸಿದರು.

ಕಾರ್ಯಕ್ರಮಕ್ಕೂ ಮೊದಲು ಉಪನ್ಯಾಸಕರು, ವಿದ್ಯಾರ್ಥಿಗಳು ಎತ್ತಿನ ಗಾಡಿಯ ಮೂಲಕ ಮದ್ದೂರು - ಮಳವಳ್ಳಿ ಮುಖ್ಯರಸ್ತೆಯಲ್ಲಿ ತಮಟೆ, ನಗಾರಿಗಳೊಂದಿಗೆ ಮೆರವಣಿಗೆ ನಡೆಸಿದರು. ಪೂಜಾಕುಣಿತ, ಪೂರ್ಣಕುಂಭ, ಅಲಂಕೃತ ಎತ್ತಿನ ಗಾಡಿಗಳು ಮೆರವಣಿಗೆಯ ಆಕರ್ಷಣೆಯಾಗಿದ್ದವು.

ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಧ್ಯಾಪಕಿಯರು ಒಬ್ಬರಿಗೊಬ್ಬರಿಗೂ ಹಬ್ಬದ ಶುಭಾಷಯ ವಿನಿಯಮ ಮಾಡಿಕೊಂಡು ಎಳ್ಳುಬೆಲ್ಲ ಹಂಚುವ ಮೂಲಕ ಹಬ್ಬವನ್ನು ಸಂಭ್ರಮಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ