ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಗ್ರಾಮದ ಸುಗ್ಗಿಕಟ್ಟೆಯಲ್ಲಿ ದೇವಿಗೆ ಮಡೆ ಇಟ್ಟ ಗ್ರಾಮಸ್ಥರು ಊರಿನ ಸಮೃದ್ಧಿ ಹಾಗೂ ಮಳೆ ಬೆಳೆಗಾಗಿ ಸಾಮೂಹಿಕ ಪೂಜೆ ಸಲ್ಲಿಸಿ, ಸಹ ಭೋಜನ ನೆರವೇರಿತು. ಗ್ರಾಮದ ದೇವರಬಾವಿಯಲ್ಲಿ ಬಸವಣ್ಣ ದೇವರ ಗಂಗಾಸ್ನಾನ ನಡೆಯಿತು. ಬಸವಣ್ಣ ದೇವರನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಪ್ರತಿ ಮನೆಯವರು ಈಡುಗಾಯಿಯೊಂದಿಗೆ ಪೂಜೆ ಸಲ್ಲಿಸಿದರು. ಅಡ್ಡೆಹೊತ್ತವರ ಕುಣಿತವನ್ನು ಜನರು ವೀಕ್ಷಿಸಿದರು. ಸುಗ್ಗಿಕಟ್ಟೆಯಲ್ಲಿ ಗ್ರಾಮಸ್ಥರ ಸಾಮೂಹಿಕ ಕುಣಿತದೊಂದಿಗೆ, ದೇವತಕ್ಕರ ಮೆರವಣಿ ನಡೆಯಿತು. ಭಾನುವಾರ ಮಲ್ಲಸುಗ್ಗಿ, ಸೋಮವಾರ ಹಗಲು ಸುಗ್ಗಿ, ಮಂಗಳವಾರ ಮಾರಿ ಕಳುಹಿಸುವ ಕಾರ್ಯದೊಂದಿಗೆ ೧೩ ದಿನಗಳ ಸುಗ್ಗಿ ಉತ್ಸವ ಮುಕ್ತಾಯಗೊಳ್ಳಲಿದೆ.
ಯಡೂರು ಗ್ರಾಮಾಭಿವೃದ್ಧಿ ಮಂಡಳಿ ನಿಯೋಜಿತ ಅಧ್ಯಕ್ಷ ಡಿ.ಡಿ. ಮುತ್ತಣ್ಣ, ಕಾರ್ಯದರ್ಶಿ ಸುದೀರ್, ಉಪಾಧ್ಯಕ್ಷ ಲೋಕೇಶ್, ದೇವರ ಒಡೆಕಾರರು ಸುಗ್ಗಿ ಉತ್ಸವದ ಜವಾಬ್ದಾರಿ ವಹಿಸಿದ್ದರು.