ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಡೀಸಿಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿ.ಸಿ.ರಾಯ್ ಸಭಾಂಗಣದಲ್ಲಿ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಂತೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಸೂಚಿಸಿದರು.
ಮಗು ಹುಟ್ಟಿದ ನಂತರ ಕಾಲಕಾಲಕ್ಕೆ ನಿಗದಿತ ಅವಧಿಯೊಳಗೆ ಲಸಿಕೆ ಹಾಕಿಸಲು ಪೋಷಕರು ನಿಗಾವಹಿಸಬೇಕು ಎಂದು ತಿಳಿವಳಿಕೆ ನೀಡುವಂತೆ ತಿಳಿಸಿದರು. ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು. ಪ್ರತಿಯೊಂದು ತಾಯಿ ಮರಣದ ಪ್ರಕರಣಗಳ ಬಗ್ಗೆ ಡೆತ್ ಅಡಿಟ್ ಮಾಡಿಸುವಂತೆ ಸೂಚಿಸಿದರು.ಆಸ್ಪತ್ರೆಗೆ ಹೋದರೆ ಜೀವ ಉಳಿಯುತ್ತದೆ ಎಂಬ ಭರವಸೆ ಮೂಡಬೇಕು. ಜೀವಕ್ಕೆ ಬೆಲೆ ಕಟ್ಟಲಾಗದು. ಈ ನಿಟ್ಟಿನಲ್ಲಿ ವೈದ್ಯರು ಎಚ್ಚರವಹಿಸುವಂತೆ ತಿಳಿಸಿದರು. ಆರೋಗ್ಯ ಇಲಾಖೆಯಲ್ಲಿ ವಿವಿಧ ಯೋಜನೆಗಳಿವೆ ವಾರಕ್ಕೆ ಒಮ್ಮೆ ವಿಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗುರಿ ಸಾಧಿಸಲು ಸಾಧ್ಯವಾಗುತ್ತದೆ ಜೊತೆಗೆ ಆರೋಗ್ಯ ಸೌಲಭ್ಯ ಪ್ರತಿಯೊಬ್ಬರಿಗೂ ಒದಗಿಸಲು ಸಹಕಾರಿಯಾಗುತ್ತದೆ ಎಂದರು.
ತಾಯಿ ಕಾರ್ಡ್ನಲ್ಲಿ ಮಗುವಿಗೆ ಲಸಿಕೆ ಹಾಕಿಸಲಾಗಿದೆಯಾ ಪರಿಶೀಲನೆ ಮಾಡಿ ಎಂದು ತಿಳಿಸಿದರು. ಲಸಿಕೆ ಹಾಕಿಸಲು ಪೋಷಕರಿಗೆ ಅರಿವು ಮೂಡಿಸಲು ತಿಳಿಸಿದರಲ್ಲದೆ, ಮಗುವಿಗೆ ಲಸಿಕೆ ಹಾಕಿಸಿದ್ದಾರೆ ರೋಗಗಳು ಬಾರದಂತೆ ತಡೆಯಲು ಸಹಕಾರಿಯಾಗುತ್ತದೆ ಎಂದು ಮನವರಿಕೆ ಮಾಡಲು ತಿಳಿಸಿದರು.
ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ದಂಡ ವಿಧಿಸುವಂತೆ ತಿಳಿಸಿದರು. ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸಲು ತಿಳಿಸಿದರು.