ಕನ್ನಡಪ್ರಭ ವಾರ್ತೆ ಮಡಿಕೇರಿ
ಮೂರು ದಿನಗಳವರೆಗೆ ನಡೆದ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಹಾತೂರು ವಲಯ ತಂಡವು ಹಾಲುಗುಂದ ವಲಯ ತಂಡದ ವಿರುದ್ಧ 2 ರನ್ಳಿಂದ ಜಯಭೇರಿ ಬಾರಿಸುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು. ಗೆಲುವಿಗಾಗಿ ಉತ್ತಮ ಹೋರಾಟ ನೀಡಿದ ಹಾಲುಗುಂದ ತಂಡ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಟಾಸ್ ಗೆದ್ದು ಹಾಲುಗುಂದ ತಂಡ ಕ್ಷೇತ್ರ ರಕ್ಷಣೆ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದುಕೊಂಡ ಹಾತೂರು ತಂಡ ನಿಗದಿತ 8 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿತು. ನಿತಿನ್ 28 , ಸಚಿನ್ 30 ರನ್ ಗಳಿಸಿ ಮಿಂಚಿದರು. ಹಾಲುಗುಂದ ಪರ ಸುಜನ್ 1 ವಿಕೆಟ್ ಪಡೆದರು. ಗೆಲ್ಲಲು 73 ರನ್ಗಳ ಗುರಿ ಬೆನ್ನಟ್ಟಿದ ಹಾಲುಗುಂದ ತಂಡ ನಿಗದಿತ ಓವರ್ ಗಳಲ್ಲಿ 70 ರನ್ ಗಳಿಸಿ ಸೋಲನುಭವಿಸುವ ಮೂಲಕ ರನ್ನರ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ತಂಡದ ಪರ ಶ್ರೇಯಸ್ 22, ಅವಿನಾಶ್ 20 ರನ್ ಗಳಿಸಿದರು. ವಿಜೇತ ತಂಡದ ಪರ ಜತನ್ ಮತ್ತು ಪವನ್ ತಲಾ 1 ವಿಕೆಟ್ ಪಡೆದುಕೊಂಡರು.ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಕೊಂಗೆಪಂಡ ಸಚಿನ್, ಬೆಸ್ಟ್ ಬ್ಯಾಟ್ಸ್ ಮನ್ ಆಗಿ ಕೊಂಗೆಪಂಡ ನಿತಿನ್, ಬೆಸ್ಟ್ ಬೌಲರ್ ಆಗಿ ಪಂದಿಕಂಡ ಶ್ರೇಯಸ್ ಪ್ರಶಸ್ತಿ ಪಡೆದುಕೊಂಡರು.ಥ್ರೋಬಾಲ್: ಮಹಿಳೆಯರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಬಿಟ್ಟಂಗಾಲ ತಂಡ, ಪಾರಾಣೆ ತಂಡದ ವಿರುದ್ಧ ಜಯ ಸಾಧಿಸಿ ವಿನ್ನರ್ಸ್ ಸ್ಥಾನ ಪಡೆದು ಕೊಂಡರೆ, ಪಾರಾಣೆ ತಂಡ ರನ್ನರ್ಸ್ ಆಫ್ ಸ್ಥಾನ ಪಡೆದು ಕೊಂಡಿತು.
ಮಹಿಳೆಯರ ಹಗ್ಗ ಜಗ್ಗಾಟ ಫೈನಲ್ ನಲ್ಲಿ ಒಂಟಿಯಂಗಡಿ ತಂಡ ಬೆಟ್ಟಗೇರಿ ತಂಡದ ವಿರುದ್ಧ ಜಯಸಾಧಿಸಿ ವಿನ್ನರ್ಸ್ ಸ್ಥಾನ ಪಡೆದು ಕೊಂಡಿತು. ಬೆಟ್ಟಗೇರಿ ತಂಡ ರನ್ನರ್ಸ್ ಸ್ಥಾನ ಪಡೆಯಿತು.
ಮುಖ್ಯ ಅತಿಥಿ ಹಾಲುಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಂದಿಕಂಡ ದಿನೇಶ್ ಮಾತನಾಡಿ, ಜನಾಂಗದ ಒಗ್ಗಟ್ಟನ್ನು ಕಾಪಾಡುವುದು ಕ್ರೀಡೆಯ ಉದ್ದೇಶವಾಗಿದ್ದು, ಜನಾಂಗದ ಹೆಚ್ಚು ಹೆಚ್ಚು ಜನರು ಇಂತಹ ಕಾರ್ಯಕ್ರಮಕ್ಕೆ ಸೇರುವ ಮೂಲಕ ನಮ್ಮ ಜನಾಂಗವನ್ನು ಗುರುತಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಖಜಾಂಚಿ ಪಾನಿಕುಟ್ಟಿರ ಕುಟ್ಟಪ್ಪ, ನಿರ್ದೇಶಕರಾದ ಕೊಕ್ಕೆರ ಜಗನ್ನಾಥ್, ಚರ್ಮಂಡ ಅಪ್ಪುಣು ಪೂವಯ್ಯ, ಕೊಪ್ಪಡ ಪಟ್ಟು ಪಳಂಗಪ್ಪ, ಕೊಂಗೆಪಂಡ ರವಿ, ಮಳ್ಳಡ ಸುತ, ಚಳಿಯಂಡ ಕಮಲ ಉತ್ತಯ್ಯ, ಮೂರಿರ ಶಾಂತಿ, ಪುದಿಯತಂಡ ಜಾಲಿ ಬೆಳ್ಯಪ್ಪ, ಮೂರಿರ ಕುಶಾಲಪ್ಪ, ಕ್ರೀಡಾ ಸಮಿತಿ ನಿರ್ದೇಶಕರಾದ ಕೊಂಗೆಪಂಡ ಕುಟ್ಟಪ್ಪ, ತೋರೆರ ವಿನೀಶ್, ಇನ್ನಿತರ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಇದ್ದರು.