ಹಾವೇರಿ: ಕೋಟ್ಯಾಧಿಪತಿ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

KannadaprabhaNewsNetwork |  
Published : Apr 16, 2024, 01:01 AM IST
ಆನಂದಸ್ವಾಮಿ ಗಡ್ಡದೇವರಮಠ | Kannada Prabha

ಸಾರಾಂಶ

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ತಾವು ₹ 55.67 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಸೋಮವಾರ ನಾಮಪತ್ರದೊಂದಿಗೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ.

ಹಾವೇರಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ತಾವು ₹ 55.67 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಸೋಮವಾರ ನಾಮಪತ್ರದೊಂದಿಗೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ.

ಆನಂದಸ್ವಾಮಿ ಗಡ್ಡದೇವರಮಠ ಅವರ ಬಳಿ ₹೫೦ ಸಾವಿರ ನಗದು, ಬ್ಯಾಂಕ್‌ ಮತ್ತು ಫೈನಾನ್ಸ್‌ಗಳಲ್ಲಿ ೧.೬೯ ಕೋಟಿ, ವಿಮೆ, ಅಂಚೆ ಕಚೇರಿ ಇತ್ಯಾದಿಗಳಲ್ಲಿ ₹೭.೭೬ ಕೋಟಿ ಠೇವಣಿ ಹೊಂದಿದ್ದಾರೆ. ವಿವಿಧ ಸಂಸ್ಥೆ, ಫರ್ಮ್ಸ್‌, ಟ್ರಸ್ಟ್‌ಗಳು ಹಾಗೂ ವೈಯಕ್ತಿಕ ಸಾಲವಾಗಿ ₹ ೫.೧೫ ಕೋಟಿ ತೊಡಗಿಸಿದ್ದಾರೆ. ಒಂದು ಹೊಂಡಾ ಸಿಟಿ ಕಾರು, ಇನ್ನೋವಾ ಕ್ರಿಸ್ಟಾ, ಇನ್ನೋವಾ ಹೈಬ್ರಿಡ್ ಹಾಗೂ ಒಂದು ಬೈಕ್ ಸೇರಿದಂತೆ ₹ 50.54 ಲಕ್ಷ ಮೌಲ್ಯದ ವಾಹನಗಳನ್ನು ಇವರು ಹೊಂದಿದ್ದಾರೆ. ₹7.80 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು ₹19.16 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ.

₹6.20 ಕೋಟಿ ಮೌಲ್ಯದ ೫೬ ಎಕರೆ ಕೃಷಿ ಜಮೀನು ಹೊಂದಿದ್ದು, ₹೧೬.೮೭ ಕೋಟಿ ಮೌಲ್ಯದ ವಾಣಿಜ್ಯ ಕಟ್ಟಡ ಹೊಂದಿದ್ದಾರೆ. ಬೆಳಗಾವಿ, ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ೧೨.೧೫ ಕೋಟಿ ಮೌಲ್ಯದ ವಾಸದ ಮನೆ ಹೊಂದಿದ್ದಾರೆ. ಅಲ್ಲದೇ ಬೆಳಗಾವಿ, ಮೈಸೂರು ಜಿಲ್ಲೆಯಲ್ಲಿ ₹೧.೨೭ ಕೋಟಿ ಮೌಲ್ಯದ ಆಸ್ತಿ ಸೇರಿದಂತೆ ಒಟ್ಟು ₹19.16 ಕೋಟಿ ಮೌಲ್ಯದ ಚರಾಸ್ತಿ ಮತ್ತು ₹ 36.51 ಕೋಟಿ ಮೌಲ್ಯದ ಸ್ಥಿರಾಸ್ತಿ ಸೇರಿದಂತೆ ಒಟ್ಟು ₹55.67 ಕೋಟಿ ಮೌಲ್ಯದ ಆಸ್ತಿಪಾಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಅವರು ₹೨೨.೪೬ ಕೋಟಿ ಸಾಲ ಹೊಂದಿದ್ದಾರೆ.

ನಾಲ್ಕು ಮಕ್ಕಳಿದ್ದು, ಓರ್ವ ಪುತ್ರ, ಮೂವರು ಪುತ್ರಿಯರು ಇದ್ದಾರೆ.

ಚಿನ್ನಾಭರಣ: ೨ ಕೆಜಿ ಬಂಗಾರ ಪಿತ್ರಾರ್ಜಿತವಾಗಿ ಬಂದಿದ್ದು, ೯೨ ಗ್ರಾಂ ಚಿನ್ನ, ೪ ಕೆಜಿ ಬೆಳ್ಳಿ ಸೇರಿ ಒಟ್ಟು ₹ ೭.೮೦ ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಪತ್ನಿ ಬಳಿ ೭೫೦ ಗ್ರಾಂ ಚಿನ್ನ, ೧ ಕೆಜಿ ಬೆಳ್ಳಿ ಸೇರಿದಂತೆ ಒಟ್ಟು ೮೦ ಲಕ್ಷ ಮೌಲ್ಯದ ಚಿನ್ನಾಭರಣವಿದೆ. ಅವರ ಪತ್ನಿ ಬಳಿ ₹ ೬೦ ಸಾವಿರ ನಗದು ಸೇರಿದಂತೆ ೬.೮೦ ಲಕ್ಷ ಮೌಲ್ಯದ ಚರಾಸ್ತಿ ಇದ್ದು, ಮೊದಲ ಪುತ್ರಿ ಬಳಿ ₹ ೩೦.೨೯ ಲಕ್ಷ, ಎರಡನೇ ಪುತ್ರಿ ಬಳಿ ₹ ೧೦.೨೮ ಲಕ್ಷ, ಮೂರನೇ ಪುತ್ರಿ ಬಳಿ ₹೧೦.೦೮ ಲಕ್ಷ ಹಾಗೂ ಪುತ್ರನ ಬಳಿ ₹ ೬.೭೨ ಲಕ್ಷ ಮೌಲ್ಯದ ಚರಾಸ್ತಿ ಇದೆ. ಪತ್ನಿ ಬಳಿ ₹ ೪೯.೭೨ ಲಕ್ಷ ಮೌಲ್ಯದ ಸ್ಥಿರಾಸ್ತಿಯಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಲೆನಾಡಿನ ರೈತರ ಸಮಸ್ಯೆ ಬಗೆಹರಿಸಲು ಸರ್ವ ಪ್ರಯತ್ನ: ವಿಶ್ವನಾಥ್ ಗದ್ದೆಮನೆ
ಕಸವನಹಳ್ಳಿ ಕೆರೆಯ ಒತ್ತುವರಿತಡೆಯುವಂತೆ ಜನರ ಆಗ್ರಹ