ಸಹಕಾರಿಗಳ ಸ್ವಾಗತಕ್ಕೆ ಸಜ್ಜುಗೊಂಡ ಹಾವೇರಿ

KannadaprabhaNewsNetwork |  
Published : Nov 18, 2025, 01:00 AM IST
ಪೋಟೋ ಇದೆ. | Kannada Prabha

ಸಾರಾಂಶ

ರಾಜ್ಯದ ವಿವಿಧ ಸಹಕಾರ ಮಹಾ ಮಂಡಳಗಳ, ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಸಹಯೋಗದಲ್ಲಿ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025 ಅನ್ನು ನಗರದ ರಜನಿ ಸಭಾಂಗಣದಲ್ಲಿ ನ.18ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದ್ದು, ರಾಜ್ಯದ ಸಹಕಾರಿಗಳ ಸ್ವಾಗತಕ್ಕೆ ಹಾವೇರಿ ಸಜ್ಜಾಗಿದೆ.

ಹಾವೇರಿ: ರಾಜ್ಯದ ವಿವಿಧ ಸಹಕಾರ ಮಹಾ ಮಂಡಳಗಳ, ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಸಹಯೋಗದಲ್ಲಿ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025 ಅನ್ನು ನಗರದ ರಜನಿ ಸಭಾಂಗಣದಲ್ಲಿ ನ.18ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದ್ದು, ರಾಜ್ಯದ ಸಹಕಾರಿಗಳ ಸ್ವಾಗತಕ್ಕೆ ಹಾವೇರಿ ಸಜ್ಜಾಗಿದೆ.ಈ ವರ್ಷ `ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು'''''''' ಎಂಬ ಧ್ಯೇಯ ವಾಕ್ಯದೊಂದಿಗೆ, `ಸಹಕಾರ ಉದ್ಯಮಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ'''''''' ಎಂಬ ವಿಷಯವನ್ನಿಟ್ಟುಕೊಂಡು ಸಪ್ತಾಹ ಆಚರಿಸಲಾಗುತ್ತಿದೆ. ಪ್ರತಿಯೊಂದು ವಿಭಾಗದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೆಳಗಾವಿ ವಿಭಾಗದ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಹಾವೇರಿಯಲ್ಲಿ ಆಯೋಜಿಸಲಾಗಿದ್ದು, 3 ಸಾವಿರಕ್ಕೂ ಅಧಿಕ ಸಹಕಾರಿಗಳು ಆಗಮಿಸಲಿದ್ದಾರೆ.ಸಹಕಾರಿ ಕ್ಷೇತ್ರಕ್ಕೆ ಜಿಲ್ಲೆಯ ಕೊಡುಗೆ: ಸಹಕಾರಿ ಕ್ಷೇತ್ರಕ್ಕೆ ಜಿಲ್ಲೆ ವಿಶಿಷ್ಟ ಕೊಡುಗೆ ನೀಡಿದೆ. ಸಹಕಾರ ಸಂಘಗಳ ಕಾಯ್ದೆಯಡಿ ಜಿಲ್ಲೆಯಲ್ಲಿ ಒಟ್ಟಾರೆ 1423 ಸಹಕಾರ ಸಂಘಗಳಿದ್ದು, 9,14,316 ಜನರು ಸದಸ್ಯತ್ವ ಹೊಂದಿದ್ದಾರೆ. ಸಂಘಗಳ ನೋಂದಣಿ ಕಾಯ್ದೆಯಡಿಯಲ್ಲಿ ಒಟ್ಟು 22,412 ಸಂಘ, ಸಂಸ್ಥೆ (ಎನ್‌ಜಿಒ) ನೋಂದಾಯಿಸಲ್ಪಟ್ಟಿವೆ. ಜಿಲ್ಲೆಯಲ್ಲಿ 1 ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದೆ. 483 ಹಾಲು ಉತ್ಪಾದಕರ ಸಹಕಾರ ಸಂಘಗಳು, 1 ಹಾಲು ಉತ್ಪಾದಕರ ಸಹಕಾರ ಒಕ್ಕೂಟ ಕಾರ್ಯನಿರ್ವಹಿಸುತ್ತಿದೆ. 2023-24ನೇ ಸಾಲಿನಲ್ಲಿ 3,94,04,808 ಲೀಟರ್ ಹಾಲು ಸರಬರಾಜು ಮಾಡಿದ್ದು, ಈ ಪೈಕಿ ರೈತರಿಗೆ ಸರ್ಕಾರದಿಂದ 19.49 ಕೋಟಿ ರು. ಪ್ರೋತ್ಸಾಹ ಧನ ವಿತರಣೆ ಮಾಡಲಾಗಿದೆ. 2024-25ನೇ ಸಾಲಿನಲ್ಲಿ 4,76,71,141 ಲೀಟರ್ ಹಾಲು ಸರಬರಾಜು ಮಾಡಿದ್ದು, ಈ ಪೈಕಿ ರೈತರಿಗೆ ಸರ್ಕಾರದಿಂದ 16.50 ಕೋಟಿ ಪ್ರೋತ್ಸಾಹ ಧನ ವಿತರಣೆ ಮಾಡಲಾಗಿದೆ. ಜಿಲ್ಲೆಯಲ್ಲಿ 3 ನೂಲಿನ ಗಿರಣಿಗಳು, 21 ಕೆಸಿಸಿ ಬ್ಯಾಂಕ್ ಶಾಖೆಗಳು ಕಾರ್ಯನಿರ್ವಹಿಸುತ್ತವೆ. ಇದರಲ್ಲಿ 2024-25ನೇ ಸಾಲಿನಲ್ಲಿ 32,995 ಸದಸ್ಯರಿಗೆ 228ಕೋಟಿ ರು. ಅಲ್ಪಾವಧಿ ಸಾಲ ವಿತರಿಸಲಾಗಿದೆ. 449 ಸದಸ್ಯರಿಗೆ 35.89 ಲಕ್ಷ ರು. ಮಧ್ಯಮಾವಧಿ ಕೃಷಿ ಸಾಲ ವಿತರಿಸಲಾಗಿದೆ. ಸನ್ 2025-26ನೇ ಸಾಲಿನಲ್ಲಿ 17747 ಸದಸ್ಯರಿಗೆ 135.00 ಕೋಟಿ ರು. ಅಲ್ಪಾವಧಿ ಸಾಲ ವಿತರಿಸಲಾಗಿದೆ. 314 ಸದಸ್ಯರಿಗೆ 19ಕೋಟಿ ರು. ಮಧ್ಯಮಾವಧಿ ಕೃಷಿ ಸಾಲ ವಿತರಿಸಲಾಗಿದೆ.ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮಹಿಳೆಯರು, ವಿಕಲಚೇತರು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಜನರನ್ನು ವಿವಿಧ ಸಹಕಾರ ಸಂಘಗಳಲ್ಲಿ ಸದಸ್ಯರನ್ನಾಗಿ ನೋಂದಾಯಿಸುವ ಯೋಜನೆಯಡಿ ಒಟ್ಟಾರೆ 590 ಜನರನ್ನು ಸದಸ್ಯರನ್ನಾಗಿ ನೋಂದಾಯಿಸುವ ಗುರಿ ಹೊಂದಲಾಗಿದೆ.

PREV

Recommended Stories

ಹುಬ್ಬಳ್ಳಿ ವಿಮಾನ ನಿಲ್ದಾಣ ಪಾರ್ಕಿಂಗ್‌ ಖಾಸಗೀಕರಣ
ಅಂಗವಿಕಲರ ವಿಶೇಷ ನಿಧಿ ಅನುದಾನ ಹೆಚ್ಚಳಕ್ಕೆ ಪಿಐಎಲ್ ದಾಖಲು