ಎಚ್‌ಡಿಕೆ ಹೊಂದಾಣಿಕೆ ರಾಜಕೀಯ ಮಾಡಲ್ಲ

KannadaprabhaNewsNetwork |  
Published : Sep 27, 2024, 01:19 AM IST
ಕುಮಾರಸ್ವಾಮಿ ಹೊಂದಾಣಿಕೆ ರಾಜಕೀಯ ಮಾಡಲ್ಲ| ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಹೇಳಿಕೆ | ನೋಂದಣಿ ಅಭಿಯಾನಕ್ಕೆ ಚಾಲನೆ | Kannada Prabha

ಸಾರಾಂಶ

ಕುಮಾರಸ್ವಾಮಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮಾಡಲ್ಲ. ಅವರು ಹೊಂದಾಣಿಕೆ ಮಾಡಿಕೊಂಡಿದ್ದರೆ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುತ್ತಿರಲಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಕುಮಾರಸ್ವಾಮಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮಾಡಲ್ಲ. ಅವರು ಹೊಂದಾಣಿಕೆ ಮಾಡಿಕೊಂಡಿದ್ದರೆ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುತ್ತಿರಲಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಇಲ್ಲಿನ ನವನಗರದ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ವಿರುದ್ಧ ಸ್ಪರ್ಧಿಸಿದ್ದ ಹನುಮಂತ ಮಾವಿನಮರದ ಪರವಾಗಿ ಸತತ ಪ್ರಚಾರ ಮಾಡಿದರೂ ಅಲ್ಪ ಮತಗಳಿಂದ ಸಿದ್ದರಾಮಯ್ಯ ಗೆದ್ದರು. ತಮ್ಮ ಜೀವನದಲ್ಲಿ ಹೊಂದಾಣಿಕೆ ರಾಜಕೀಯ ಕುಮಾರಸ್ವಾಮಿ ಮಾಡಿಲ್ಲ ಎಂದರು.

ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಬಳಿಕ ರಾಜ್ಯಕ್ಕೆ ಅವರ ಅನುಪಸ್ಥಿತಿ ಕಾಡುತ್ತಿದೆ. ಇದನ್ನು ಯಾರಿಂದಲೂ ಭರಿಸಲು ಸಾಧ್ಯವಿಲ್ಲ. ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ವರ್ಗದ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ದೇಶದ ಅಭಿವೃದ್ಧಿ ಬಗ್ಗೆ ಚಿಂತಿಸಿಯೇ ಎನ್‌ಡಿಎಗೆ ಬೆಂಬಲ ನೀಡಿದರು ಎಂದರು.

ಜೆಡಿಎಸ್ ಪಕ್ಷದ ಅಭಿಯಾನ ನೋಂದಣಿಯಲ್ಲಿ ಕಾರ್ಯಕರ್ತರು ವೇಗ ಕಳೆದುಕೊಳ್ಳಬಾರದು. ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿದಾಗ ಮಾತ್ರ ಮುಂಬರುವ ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆ ಗೆಲ್ಲಲು ಸಾಧ್ಯ. ನಂತರ ವಿಧಾನಸಭೆ ಹಾಗೂ ಸಂಸತ್ ಚುನಾವಣೆ ಗೆಲ್ಲಲು ಇದು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ದೇವೇಗೌಡರ ತಮ್ಮ 92 ವಯಸ್ಸಿನಲ್ಲೂ ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ರಾಜ್ಯ ಸುತ್ತುವ ಬಗ್ಗೆ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯುವಕರಾಗಿರುವ ನಾವುಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷದ ನೋಂದಣಿ ಅಭಿಯಾನದ ಜತೆಗೆ ಸಂಘಟನೆಗೆ ಒತ್ತು ನೀಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಶಾಸಕ ಸುರೇಶ ಬಾಬು ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿದ್ದುಕೊಂಡು ಜನರ ಮನೆಗಳಿಗೆ ತೆರಳಿ ಅಲ್ಲಿದ್ದು, ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುವ ಕೆಲಸವನ್ನು ದೇಶದಲ್ಲೇ ಮೊದಲ ಬಾರಿಗೆ ಮಾಡಿದವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ. ಇಂತಹ ಕಾರ್ಯವನ್ನು ಅನುಕರಣೆ ಮಾಡಲು ಮುಂದಾಗಿದ್ದ ರಾಹುಲ್ ಗಾಂಧಿಗೆ ಇದು ಸಾಧ್ಯವಾಗಲಿಲ್ಲ ಎಂದರು.

ಈ ವೇಳೆ ಶಾಸಕರಾದ ರಾಜುಗೌಡ ಪಾಟೀಲ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮುಖಂಡರಾದ ಆರ್.ಚೌಡಾರೆಡ್ಡಿ, ಹಾಲಕೋಡ ಹನುಮಂತಪ್ಪ, ಸಿದ್ದು ಬಂಡಿ, ವೆಂಕಟರಾವ ನಾಡಗೌಡ, ಬಿ.ಡಿ.ಪಾಟೀಲ ಹಾಗೂ ಯುವ ಮುಖಂಡ ಗೋಪಾಲ ಲಮಾಣಿ ಸೇರಿದಂತೆ ಅನೇಕರಿದ್ದರು.

---

ಬಾಕ್ಸ್

ಸಚಿವ ಜಮೀರ್ ವಿರುದ್ಧ ಆಕ್ರೋಶ

ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಬೆಳವಣಿಗೆಯನ್ನು ನೋಡಿದರೆ ಮುಂದಿನ ವಿಧಾನಸಭೆ ಚುನಾವಣೆಯನ್ನು ಸೆಂಟ್ರಲ್ ಜೈಲಿನಲ್ಲಿ ನಡೆಸಬೇಕಾಗಬಹುದು. ಮುಡಾ ಹಗರಣದ ತನಿಖೆ ಪೂರ್ಣಗೊಂಡು ಸಿದ್ದರಾಮಯ್ಯ ಆರೋಪ ಮುಕ್ತವಾಗುವವರೆಗೆ ಅವರು ಮೊಂಡುತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸದ್ಯ ಕೋರ್ಟ್‌ ತನಿಖೆಗೆ ಅಸ್ತು ಎಂದಿದೆ. ಕೋರ್ಟ್‌ ಇದನ್ನು ಹೇಳಿಕ ಬಳಿಕವೂ ಸಚಿವ ಜಮೀರ್ ಅಹಮ್ಮದ್ ಅವರು ಕಾನೂನು ಬಗ್ಗೆ ಕಿಂಚಿತ್ತು ಗೌರವ ಇಲ್ಲದಂತೆ ಮಾತನಾಡುತ್ತಿದ್ದಾರೆ ಎಂದು ವಿಪ ಸದಸ್ಯ ಟಿ.ಎ.ಶರವಣ್ ಆಕ್ರೋಶ ವ್ಯಕ್ತ ಪಡಿಸಿದರು.

---

ಬಿಜೆಪಿ ಮುಖಂಡರ ಮನವೊಲಿಸಿ ಅಭ್ಯರ್ಥಿಯಾಗುವೆ

ಈಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಪರವಾಗಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಕೆಲಸ ಮಾಡಿರುವ ಬಗ್ಗೆ ಬಿಜೆಪಿ ಮುಖಂಡರೇ ಮಾತನಾಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿಯಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಿಜೆಪಿಯ ಎಲ್ಲ ಮುಖಂಡರ ಮನವೋಲಿಸುತ್ತೇನೆ. ಇದಕ್ಕೆ ಕಾರ್ಯಕರ್ತರ ಬೆಂಬಲ ಹೆಚ್ಚಿನ ರೀತಿಯಲ್ಲಿ ಬೇಕಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!