ರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಬಿಡದಿ ಟೌನ್ಶಿಪ್) ಯೋಜನೆ ಕುರಿತು ಚರ್ಚೆಗೆ ಬರುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿ ಬೈರಮಂಗಲ ವೃತ್ತಕ್ಕೆ ಆಗಮಿಸಿದಾಗ ಮತ್ತು ವಾಪಸ್ಸಾಗುವಾಗ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಟೌನ್ಶಿಪ್ ಯೋಜನೆ ಪರವಾಗಿರುವ ರೈತರು ಕೆಂಪು ಬಾವುಟ ಪ್ರದರ್ಶಿಸಿ ಮುತ್ತಿಗೆ ಹಾಕಲು ವಿಫಲ ಯತ್ನ ನಡೆಸಿದರು.
ಈ ವೇಳೆ ಕುಮಾರಸ್ವಾಮಿ ಅವರಿದ್ದ ಕಾರಿಗೆ ಮುತ್ತಿಗೆ ಹಾಕುವ ಕೆಲ ರೈತರ ಪ್ರಯತ್ನವನ್ನು ಬಂದೋಬಸ್ತಿನಲ್ಲಿದ್ದ ಪೊಲೀಸರು ವಿಫಲಗೊಳಿಸಿದರು. ಇದರಿಂದ ಮತ್ತಷ್ಟು ಸಿಡಿದೆದ್ದ ರೈತರು, ರೆಡ್ ಜೋನ್ ಮಾಡಿದ ಕುಮಾರಸ್ವಾಮಿಗೆ ಧಿಕ್ಕಾರ. ರೆಡ್ ಜೋನ್ ಪಿತಾಮಹ ಕುಮಾರಸ್ವಾಮಿ. ಯೋಜನೆ ಮಾಡಿ ಈಗ ಬೇಡಾ ಎನ್ನುವ ಕುಮಾರಣ್ಣನಿಗೆ ಧಿಕ್ಕಾರ. ಬೇಕೆ ಬೇಕು ಅಕ್ವೇರ್ ಬೇಕೆಂದು ರೈತರು ಘೋಷಣೆ ಕೂಗಿದರು.
ರೈತರನ್ನು ತಡೆದ ಪೊಲೀಸರು:ನಮ್ಮ ಸ್ಥಳಕ್ಕೆ ಕುಮಾರಸ್ವಾಮಿ ಬರಲೇಬೇಕು. ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕುಮಾರಸ್ವಾಮಿ ಪಲಾಯನ ಆಗಿದ್ದಾರೆ. ಪೊಲೀಸರ ರಕ್ಷಣೆಯಲ್ಲಿ ಅವರು ಓಡಿ ಹೋಗಿದ್ದಾರೆ. ಕುಮಾರಸ್ವಾಮಿ ಓಡಿ ಹೋಗಿರೋದೆ ನಮಗೆ ವಿಜಯ ಎಂದು ಪ್ರತಿಭಟನಾಕಾರರು ಲೇವಡಿ ಮಾಡಿದರು.
ಪ್ರತಿಭಟನಾ ಸ್ಥಳಕ್ಕೆ ಕುಮಾರಸ್ವಾಮಿ ಅವರನ್ನು ಕರೆದುಕೊಂಡು ಬನ್ನಿ. ನಾವು 10 ಮಂದಿ ಮುಖಂಡರು ಶಾಂತಿಯಿಂದ ಅವರೊಂದಿಗೆ ಮಾತನಾಡುತ್ತೇವೆ ಎಂದು ರೈತರು ಪಟ್ಟು ಹಿಡಿದಾಗ ಪೊಲೀಸ್ ಅಧಿಕಾರಿಗಳು, ಕುಮಾರಸ್ವಾಮಿ ಅವರನ್ನು ಕೇಳಿಕೊಂಡು ಬರುತ್ತೇವೆಂದು ಹೇಳಿ ಹೋದರು. ಪೊಲೀಸರು ಬರುವವರೆಗೂ ಶಾಂತಿಯಿಂದ ಇರುತ್ತೇವೆ. ಒಂದು ವೇಳೆ ಅವರು ಇಲ್ಲಿಗೆ ಬರಲು ಒಪ್ಪದಿದ್ದರೆ ಮುತ್ತಿಗೆ ಹಾಕುತ್ತೇವೆ. ಬೇಕಾದರೆ ಪೊಲೀಸರು ಗೋಲಿಬಾರ್ ಮಾಡಲಿ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಇದರಿಂದ ರೊಚ್ಚಿಗೆದ್ದ ರೈತರು ಕುಮಾರಸ್ವಾಮಿ ಅವರಿದ್ದ ಕಾರನ್ನು ಹಿಂಬಾಲಿಸಿದರು. ಇದೇ ಸಮಯಕ್ಕೆ ಬೈರಮಂಗಲ ಆಸ್ಪತ್ರೆ ಮುಂಭಾಗ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಮೂಡಲಗಿರಿಯಪ್ಪ ಉರುಫ್ ತಮ್ಮಯಣ್ಣ ಅವರನ್ನು ಕಂಡ ತಕ್ಷಣ ಕುಮಾರಸ್ವಾಮಿಯವರು ಕಾರು ನಿಲ್ಲಿಸಿ ಆರೋಗ್ಯ ವಿಚಾರಿಸಿದರು.
27ಕೆಆರ್ ಎಂಎನ್ 1,2,3,4.ಜೆಪಿಜಿ
4.ಬೈರಮಂಗಲ ವೃತ್ತದಿಂದ ತೆರಳುವಾಗ ಟೌನ್ ಶಿಪ್ ಯೋಜನೆ ಪರವಾಗಿರುವ ರೈತರು ಕೆಂಪು ಬಾವುಟ ತೋರಿಸಿ ಮುತ್ತಿಗೆ ವಿಫಲ ಯತ್ನ ನಡೆಸಿದರು.