ಎಚ್‌ಡಿಕೆ ವರ್ಸಸ್‌ ಸಿದ್ದು ಅಭಿಮನ್ಯು ಕಾಳಗ!

KannadaprabhaNewsNetwork |  
Published : Oct 28, 2024, 12:54 AM IST
ಎಚ್‌ಡಿಕೆ | Kannada Prabha

ಸಾರಾಂಶ

ಚನ್ನಪಟ್ಟಣದ ಜನರು ನನ್ನ ಮಗನನ್ನು ಅಭಿಮನ್ಯು ಮಾಡುವುದಿಲ್ಲ.

ಚನ್ನಪಟ್ಟಣ ಜನ ನಿಖಿಲ್‌ನನ್ನು ಅಭಿಮನ್ಯು ಮಾಡಲ್ಲ: ಎಚ್‌ಡಿಕೆಕನ್ನಡಪ್ರಭ ವಾರ್ತೆ ಹಾಸನಚನ್ನಪಟ್ಟಣದ ಜನರು ನನ್ನ ಮಗನನ್ನು ಅಭಿಮನ್ಯು ಮಾಡುವುದಿಲ್ಲ. ಅರ್ಜುನನ ಪಾತ್ರ ಕೊಡ್ತಾರೆ. ಯಾರೇ, ಏನೇ ಕುತಂತ್ರ ಮಾಡಿದರೂ ಜನರು ನಿಖಿಲ್‌ನನ್ನು ಗೆಲ್ಲಿಸುತ್ತಾರೆ. ಚನ್ನಪಟ್ಟಣದಿಂದ ಕಾಂಗ್ರೆಸ್ ಅವನತಿ ಶುರುವಾಗಲಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಭಾನುವಾರ ಹಾಸನಾಂಬ ದೇವಿ ದರ್ಶನ ಪಡೆದು, ಬಳಿಕ ಶಾಸಕ ಎಚ್‌.ಪಿ.ಸ್ವರೂಪ್ ಅವರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಬಾರಿ ನನ್ನ ಮಗ ಚುನಾವಣೆಗೆ ನಿಂತಿದ್ದಾನೆ. ಕೆಲ ಕಾರಣಗಳಿಂದ ಕಳೆದ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದ. ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸುವಂತೆ ಹಾಸನಾಂಬೆಯಲ್ಲಿ ಬೇಡಿದ್ದೇನೆ ಎಂದರು. ನನ್ನ ಮಗನನ್ನು ಮುಗಿಸಲು ಕಾಂಗ್ರೆಸ್ ನಾಯಕರು ಏನೇ ಕುತಂತ್ರ ಮಾಡಿದರೂ ಸೋಲಿಸಲು ಸಾಧ್ಯವಿಲ್ಲ. ಈ ಬಾರಿ ಚನ್ನಪಟ್ಟಣದಿಂದ ಕಾಂಗ್ರೆಸ್ ಅವನತಿ ಆರಂಭವಾಗುತ್ತದೆ. ಹಾಸನಾಂಬೆ ದರ್ಶನ ಮಾಡಿ ಹೇಳ್ತಾ ಇದೀನಿ, ಇದನ್ನು ಬರೆದಿಟ್ಟುಕೊಳ್ಳಿ ಎಂದು ಸವಾಲು ಹಾಕಿದರು.

------

ಆಗ ಸೋತು ಅಭಿಮನ್ಯು ಆಗಿದ್ದವರು ಈಗ ಏಕಾಏಕಿ ಅರ್ಜುನ ಆಗ್ತಾರಾ: ಸಿದ್ದು

ಕನ್ನಡಪ್ರಭ ವಾರ್ತೆ ಬೆಂಗಳೂರು

ಹಿಂದೆ ಮಂಡ್ಯ ಲೋಕಸಭೆ ಮತ್ತು ರಾಮನಗರ ವಿಧಾನಸಭಾ ಚುನಾವಣೆಯಲ್ಲಿ ಸೋತಾಗ ನಿಖಿಲ್‌ ಕುಮಾರಸ್ವಾಮಿ ಅಭಿಮನ್ಯು ಆಗಿರಲಿಲ್ಲವೇ? ಈಗ ಉಪಚುನಾವಣೆಯಲ್ಲಿ ಇದ್ದಕ್ಕಿದ್ದಂತೆ ಅರ್ಜುನ ಆಗ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗಲೇ ಮಂಡ್ಯದಲ್ಲಿ, ನಂತರ ರಾಮನಗರದಲ್ಲಿ ನಿಖಿಲ್‌ ಸೋತಿದ್ದರು. ಆಗ ಅಭಿಮನ್ಯು ಆಗಿರಲಿಲ್ಲವೇ? ಈಗ ಇದ್ದಕ್ಕಿದ್ದಂತೆ ಅರ್ಜುನ ಆಗ್ತಾರಾ ಎಂದರು.ಸಚಿವ, ಶಾಸಕರೊಂದಿಗಿನ ಸಭೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಉಪಚುನಾವಣೆ ಸಿದ್ಧತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಬೆಳಗ್ಗೆ ಸಚಿವರು, ಸಂಸದರು, ಶಾಸಕರೊಂದಿಗೆ ಸಭೆ ನಡೆಸಲಾಯಿತು. ಎಲ್ಲ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸುವಂತೆ ತಿಳಿಸಲಾಯಿತು ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯನಗರ ಪಾಲಿಕೆ ಬಜಾರ್‌ ಮಳಿಗೆಗಳ ಇ-ಹರಾಜು ಮೂಲಕ ವಿತರಿಸಿ: ಮಹೇಶ್ವರ್ ರಾವ್ ಸೂಚನೆ
ರಸ್ತೆ ಅಪಘಾತ ಸೈಕಲ್‌ ಸವಾರ ಸಾವು