ಚಿತ್ರದುರ್ಗ: 2028ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಜಯ ಸಾಧಿಸಿ ಮತ್ತೆ ಕರ್ನಾಟಕದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಹೇಳಿದರು.ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿರವರ 66ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿ ಅವರು ಮಾತನಾಡಿದರು.
ಎಚ್.ಡಿ.ಕುಮಾರಸ್ವಾಮಿರವರು ರಾಜಕೀಯ ಜೀವನದುದ್ದಕ್ಕೂ ಸರಳತೆ ಮೈಗೂಡಿಸಿಕೊಂಡಿದ್ದಾರೆ. ಎಂದಿಗೂ ಅಧಿಕಾರದ ದರ್ಪ ಚಲಾಯಿಸಿದವರಲ್ಲ. ಅಂತಹ ಸಜ್ಜನ ರಾಜಕಾರಣಿ ಕರ್ನಾಟಕ ರಾಜ್ಯಕ್ಕೆ ಬೇಕಾಗಿರುವುದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜನ ಆಶೀರ್ವದಿಸಿ ಮತ್ತೊಮ್ಮೆ ಅಧಿಕಾರ ನೀಡುವಂತೆ ಎಂ.ಜಯಣ್ಣ ಮನವಿ ಮಾಡಿದರು.
ನಂತರ ಉಚ್ಚಂಗಿಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆ ಮಾಡಿಸಿದ ತರವಾಯ ಕಬೀರಾನಂದಾಶ್ರಮದಲ್ಲಿರುವ ವೃದ್ಧರಿಗೆ ಹಾಗೂ ಶಾಲಾ ಮಕ್ಕಳಿಗೆ ಹಣ್ಣುಗಳನ್ನು ವಿತರಿಸಲಾಯಿತು. ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿನಾಯಕ, ತಾಲೂಕು ಅಧ್ಯಕ್ಷ ತಿಮ್ಮಣ್ಣ, ಯುವ ಘಟಕದ ಅಧ್ಯಕ್ಷ ಓ.ಪ್ರತಾಪ್ಜೋಗಿ, ಚಿದಾನಂದ್, ಶಂಕರಮೂರ್ತಿ, ಎಂ.ಎಸ್.ಮಂಜುನಾಥ್, ನಾಗರಾಜು, ಗೀತಮ್ಮ, ಶಿವಪ್ರಸಾದ್ಗೌಡ, ಗೀತ, ಸೋಮು ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.