ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಅರ್ಚನಾ (27) ಕೊಲೆಯಾದ ನತದೃಷ್ಟ ಸೇಹಿತೆ. ಸ್ನೇಹಿತರಾದ ರಾಕೇಶ್, ನವೀನ್, ನಿಹಾರಿಕಾ ಮತ್ತು ಅಂಜಲಿ ಕೊಲೆ ಮಾಡಿದ ಆರೋಪಿಗಳು.
ಆಗಸ್ಟ್ 16 ರಂದು ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆಯ ನ್ಯಾಮಗೊಂಡ್ಲು ಗ್ರಾಮದ ಸೇತುವೆಯೊಂದರ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿತ್ತು. ಅಪರಿಚಿತ ಶವ ಪ್ರಕರಣ ಬೆನ್ನತ್ತಿದ್ದ ಪೊಲೀಸರಿಗೆ ಆಕೆ ಆಂಧ್ರದ ಸತ್ಯಸಾಯಿ ಜಿಲ್ಲೆಯ ಹಿಂದೂಪುರ ನಿವಾಸಿಯಾದ ಅರ್ಚನಾ ಎಂಬುದು ಗೊತ್ತಾಗಿತ್ತು. ಹಿಂದೂಪುರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಪ್ರಕರಣ ದಾಖಲಾಗಿತ್ತು. ಅರ್ಚನಾ ಬಿಡುವಿನ ವೇಳೆಯಲ್ಲಿ ಮದುವೆ ಮನೆಗಳಲ್ಲಿ ಸ್ವಾಗತಕಾರಳಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಮದುವೆಯಾಗಿ ಇಬ್ಬರು ಮಕ್ಕಳು ಇದ್ದಾರೆ. ಅರ್ಚನಾ ಆಗಸ್ಟ್ 14 ರಂದು ಸ್ನೇಹಿತರ ಜೊತೆ ಚಿಕ್ಕಬಳ್ಳಾಪುರದ ಈಶಾ ಫೌಂಡೇಷನ್ಗೆ ಹೋಗಿ ಬರುವುದಾಗಿ ಮನೆಯಿಂದ ಹೊರ ಬಂದವರು ವಾಪಸ್ ಹೋಗಿರಲಿಲ್ಲ.ಗೌರಿಬಿದನೂರು ಸಿಪಿಐ ಸತ್ಯನಾರಾಯಣ್ ಹಾಗೂ ಮಂಚೇನಹಳ್ಳಿ ಪಿಎಸ್ಐ ಆಕೆಯ ಮೊಬೈಲ್ ನ ಸಿಡಿಆರ್ ಪರಿಶೀಲನೆ ಮಾಡಿದಾಗ ಕಾಣೆಯಾದ ದಿನದಂದು ಆರ್ಚನಾಳಿಗೆ ರಾಕೇಶ್ ಎಂಬಾತ ಹಲವು ಬಾರಿ ಕರೆ ಮಾಡಿರುವುದು ಗೊತ್ತಾಗಿದೆ. ಹೀಗಾಗಿ ಮೂಲತಃ ಗೌರಿಬಿದನೂರಿನ ವಿರೂಪಸಂದ್ರದ ಬೆಂಗಳೂರಿನಲ್ಲಿ ಆಟೋ ಚಾಲಕನಾಗಿರುವ ರಾಕೇಶ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆಟೋ ಚಾಲಕ ರಾಕೇಶ್ ತನ್ನ ಆಟೋ ಸಾಲದ ಕಂತು ಮೂರು ತಿಂಗಳಿಂದ ಕಟ್ಟಿರಲಿಲ್ಲ ಹಾಗೂ ಬೈಕ್ ಮೇಲೆ 30,000 ರು. ಸಾಲ ಮಾಡಿ, ತೀರಿಸಲು ಸ್ನೇಹಿತೆಯನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.
ಕೊಲೆ ಆರೋಪಿ ಆಟೋ ಚಾಲಕ ಹಲವು ವರ್ಷಗಳ ಹಿಂದೆ ಮದುವೆ ಮನೆಗಳಲ್ಲಿ ಆಡುಗೆ ಕೆಲಸ ಮಾಡಿಕೊಂಡಿದ್ದ ಆ ವೇಳೆ ಶುಭ ಸಮಾರಂಭದಲ್ಲಿ ಸ್ವಾಗತಕಾರರಾಗಿದ್ದ ಅರ್ಚನಾ ಪರಿಚಯವಾಗಿ, ಸ್ನೇಹಿತರಾಗಿದ್ದರು ಎನ್ನಲಾಗಿದೆ.
ನಿಹಾರಿಕಾ ತನ್ನ ಬದಲು ತನ್ನ ಮತ್ತೊಬ್ಬ ಸ್ನೇಹಿತೆ ಅಂಜಲಿಯನ್ನು ಕಳಿಸಿಕೊಟ್ಟಿದ್ದಾಳೆ.
ಅರ್ಚನಾಳನ್ನು ಕೊಲೆ ಮಾಡಿ ಕದ್ದಿದ್ದ ಮಾಂಗಲ್ಯ ಸರ ಹಾಗೂ ಬಂಗಾರದ ಕಿವಿಯ ಒಲೆಯನ್ನು ಫೈನಾನ್ಸ್ ಒಂದರಲ್ಲಿ 2.19 ಲಕ್ಷ ರು.ಗೆ ಅಡಮಾನ ಇಟ್ಟು ಬಂದ ಹಣದಿಂದ ಆಟೋ ಸಾಲದ ಕಂತು ಹಾಗೂ ಕೈ ಸಾಲ ತೀರಿಸಿ ಉಳಿದ ಹಣದಲ್ಲಿ ಎಲ್ಲರೂ ಮೋಜು ಮಸ್ತಿ ಮಾಡಿಕೊಂಡಿದ್ದರು.