ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್‌ನಲ್ಲಿ ಬಂದ ಶಾಸಕ ಸುರೇಶ್ ಕುಮಾರ್

KannadaprabhaNewsNetwork |  
Published : Nov 12, 2023, 01:01 AM IST
ಸೈಕಲ್ | Kannada Prabha

ಸಾರಾಂಶ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ಲ್‌ನಲ್ಲಿ ಬಂದ ಶಾಸಕ ಸುರೇಶ್ಶ್‌ ಕುಮಾರ್ರ್‌

ಬೆಳ್ತಂಗಡಿ: ಬೆಂಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹಾಗೂ ರಾಜಾಜಿನಗರದ ಶಾಸಕ ಸುರೇಶ ಕುಮಾರ್ ಅವರು ಸೈಕಲ್ ಯಾತ್ರೆ ಕೈಗೊಂಡು ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ಬುಧವಾರ ಮುಂಜಾನೆ ಬೆಂಗಳೂರಿನಿಂದ ಹೊರಟ ಅವರು ನ.10ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿ ತನ್ನ ಸೈಕಲ್ ಯಾತ್ರೆಯನ್ನು ಸಮಾಪ್ತಿಗೊಳಿಸಿದ್ದಾರೆ. ದಿ ರಾಜಾಜಿನಗರ ಪೆಡಲ್ ಪವರ್ ತಂಡದ ಮೂಲಕ ಎಂಟು ಜನ ಸಹಸವಾರರ ಜತೆಗೆ ಮೂರು ದಿನಗಳ ಸೈಕಲ್ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದ ಶಾಸಕ ಸುರೇಶ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿ ಶ್ರೀ ಸ್ವಾಮಿಯ ಸೇವೆಗೈದಿದ್ದಾರೆ. ಸುರೇಶ ಕುಮಾರ್ ಜತೆಗೆ ಅಯ್ಯಪ್ಪ, ಸಾಗರ್ ನಾಯ್ಡು, ಹರೀಶ್, ರಾಘವ್, ದಿವಾಕರ್, ಮೋಹನ್, ಬಾಲು ಮತ್ತು ಕಿರಣ್ ಸಹಸವಾರರಾಗಿ ಪಾಲ್ಗೊಂಡಿದ್ದರು.

2014ರ ನವೆಬರ್‌ನಲ್ಲಿ ಶಾಸಕ ಸುರೇಶ್ ಕುಮಾರ್, ಎಂಟು ದಿನಗಳ ಕಾಲ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯುತ್ರೆ ಮೂಲಕ ಸಾಗಿ ಬಂದಿದ್ದರು.ರೇಶ ಕುಮಾರ್ )

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ