ರಾಜ್ಯ ಸರ್ಕಾರವೂ ಮಾವಿಗೆ ಆರ್ಥಿಕ ನೆರವು ಘೋಷಿಸಲಿ

KannadaprabhaNewsNetwork |  
Published : Jun 27, 2026, 01:30 AM IST
೨೬ಕೆಎಲ್‌ಆರ್-೨ಮಾವಿಗೆ ಕೇಂದ್ರ ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆ ಸ್ವಾಗತಿಸಿ ಅದರಂತೆ ರಾಜ್ಯದ  ಸರ್ಕಾರವು ಕೂಡಲೇ ಬೆಂಬಲ ಬೆಲೆ ಘೋಷಣೆ ಮಾಡಿ, ಖರೀದಿ ಕೇಂದ್ರಗಳಲ್ಲಿ ದಲ್ಲಾಳಿಗಳ ಹಾವಳಿ ತಡೆಗಟ್ಟಿ ಆಂದ್ರಪ್ರದೇಶ ರಾಜ್ಯದಿಂದ ಮಾರುಕಟ್ಟೆಗೆ ಬರುವ ಮಾವನ್ನು ನಿಯಂತ್ರಣ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ಕೋಲಾರದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿರನ್ನು ರೈತ ಸಂಘದಿಂದ ಒತ್ತಾಯಿಸುತ್ತಿರುವುದು. | Kannada Prabha

ಸಾರಾಂಶ

ಮಾವಿಗೆ ಕೇಂದ್ರ ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆ ಸ್ವಾಗತಿಸಿರುವ ರೈತ ಸಂಘ ಕೇಂದ್ರದಂತೆ ರಾಜ್ಯದ ಸರ್ಕಾರವೂ ಕೂಡಲೇ ಆರ್ಥಿಕ ನೆರವು ಘೋಷಣೆ ಮಾಡಿ, ಖರೀದಿ ಕೇಂದ್ರಗಳಲ್ಲಿ ದಲ್ಲಾಳಿಗಳ ಹಾವಳಿ ತಡೆಗಟ್ಟಿ ಆಂಧ್ರಪ್ರದೇಶದಿಂದ ಮಾರುಕಟ್ಟೆಗೆ ಬರುವ ಮಾವನ್ನು ನಿಯಂತ್ರಣ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ಒತ್ತಾಯಿಸಿದೆ.

ಕನ್ನಡಪ್ರಭ ವಾರ್ತೆ ಕೋಲಾರ

ಮಾವಿಗೆ ಕೇಂದ್ರ ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆ ಸ್ವಾಗತಿಸಿರುವ ರೈತ ಸಂಘ ಕೇಂದ್ರದಂತೆ ರಾಜ್ಯದ ಸರ್ಕಾರವೂ ಕೂಡಲೇ ಆರ್ಥಿಕ ನೆರವು ಘೋಷಣೆ ಮಾಡಿ, ಖರೀದಿ ಕೇಂದ್ರಗಳಲ್ಲಿ ದಲ್ಲಾಳಿಗಳ ಹಾವಳಿ ತಡೆಗಟ್ಟಿ ಆಂಧ್ರಪ್ರದೇಶದಿಂದ ಮಾರುಕಟ್ಟೆಗೆ ಬರುವ ಮಾವನ್ನು ನಿಯಂತ್ರಣ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ಒತ್ತಾಯಿಸಿದೆ.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಅವರು ಮಾವು ಬೆಳೆಗಾರರ ಮತ್ತು ರೈತರ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸಿ ಮಾವು ಬೆಳೆಗಾರರಿಗೆ ನೆಮ್ಮದಿ ತಂದಿದ್ದಾರೆ. ಇದಕ್ಕಾಗಿ ಸಹಕರಿಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದರು.

ಜೊತೆಗೆ ರೈತರ ಸಮಸ್ಯೆಗಳನ್ನು ಆಲಿಸಿ ಮಾರುಕಟ್ಟೆ ಹಸ್ತಕ್ಷೇಪ ಹಾಗೂ ಖರೀದಿ ವ್ಯವಸ್ಥೆ ಕುರಿತಂತೆ ಕ್ರಮ ಕೈಗೊಳ್ಳಲು ಮುಂದಾಗಿರುವುದು ಸರ್ಕಾರದ ಜವಾಬ್ದಾರಿಯುತ ನಿಲುವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ಮಾವು ಬೆಳೆಗಾರರ ವಿಚಾರದಲ್ಲಿ ಸಕರಾತ್ಮಕ ನಿಲುವನ್ನು ತೋರಿದೆ. ಆದರೆ ಇದು ಕೇವಲ ತಾತ್ಕಾಲಿಕ ಪರಿಹಾರ ಅಷ್ಟೇ. ಇಂತಹ ಸಮಸ್ಯೆಗಳನ್ನು ಪ್ರತಿವರ್ಷ ಮರುಕಳಿಸದಂತೆ ಶಾಶ್ವತ ಪರಿಹಾರ ನೀಡಬೇಕೆಂದು ಅವರು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ಆಗ್ರಹಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಪಾಲಿನ ಬೆಂಬಲ ಬೆಲೆಯನ್ನು ಈ ಕೂಡಲೇ ಘೋಷಿಸಿ ರೈತರ ಕಷ್ಟಕ್ಕೆ ನಿಲ್ಲಬೇಕಾಗಿದೆ. ಮಾವು ಬೆಳೆಗಾರರು ಪ್ರತಿ ವರ್ಷ ಮಳೆ, ಗಾಳಿ ಸಮಸ್ಯೆಯ ಜೊತೆಗೆ ಬೆಲೆಯ ಸಮಸ್ಯೆಗಳನ್ನೂ ನಿರಂತರವಾಗಿ ಎದುರಿಸಬೇಕಾಗಿದ್ದು ಇದಕ್ಕಾಗಿ ಶಾಶ್ವತವಾದ ಪರಿಹಾರವನ್ನು ರೂಪಿಸಿ ಮಾವು ಬೆಳಗಾರರನ್ನು ರಕ್ಷಣೆ ಮಾಡಬೇಕಾಗಿದೆ ಎಂದು ನಾರಾಯಣಗೌಡ ಒತ್ತಾಯಿಸಿದರು,

೫ ಹಳ್ಳಿಗೊಂದು ಖರೀದಿ ಕೇಂದ್ರ:

ಜಿಲ್ಲೆಯ ಮಾವು ಬೆಳೆಗಾರರ ಸಂಕಷ್ಟವನ್ನು ಅರಿತು ರೈತಪರ ನಿಂತು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಅಂಕಿ ಅಂಶಗಳ ಪ್ರಕಾರ ಸರ್ಕಾರಕ್ಕೆ ಕಳುಹಿಸಿ ಬೆಂಬಲ ಬೆಲೆಗೆ ರೈತಪರ ಕಾಳಜಿ ವಹಿಸಿದ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೂ ರೈತ ಸಂಘದ ಪರವಾಗಿ ಅಭಿನಂದನೆ ಸಲ್ಲಿಸುವೆ. ಜೊತೆಗೆ ಮಾವು ಖರೀದಿ ಮಿತಿಯನ್ನು ಸಡಿಲ ಮಾಡಬೇಕು ಇಂದಿನಿಂದಲೇ ಬೆಂಬಲ ಬೆಲೆ ಯೋಜನೆಯಲ್ಲಿ ಮಾವು ಖರೀದಿ ಮಾಡಬೇಕು. ಜೊತೆಗೆ ಖರೀದಿ ಕೇಂದ್ರಗಳಲ್ಲಿ ಸಮಸ್ಯೆ ಆಗದಂತೆ ಕ್ರಮವಹಿಸಲು ಪ್ರತಿ ೫ ಹಳ್ಳಿಗೆ ಒಂದು ಖರೀದಿ ಕೇಂದ್ರ ತೆರೆಯಬೇಕೆಂದು ಒತ್ತಾಯಿಸಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಮಾವು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಇದು ರೈತ ಪರ ಹೋರಾಟಕ್ಕೆ ಸಂದ ಜಯ. ರಾಜ್ಯದ ರೈತರ ಪ್ರತಿ ಸಮಸ್ಯೆಗೂ ರೈತ ಸಂಘ ನಿರಂತರವಾಗಿ ನಿಲ್ಲುತ್ತದೆ. ಇದಕ್ಕೆ ೨ ವರ್ಷಗಳಿಂದ ಮಾವು ಬೆಳೆಗಾರರಿಗೆ ನೀಡುತ್ತಿರುವ ಬೆಂಬಲ ಬೆಲೆಯ ಆದೇಶವೇ ಉದಾಹರಣೆಯಾಗಿದೆ. ರೈತರು ಯಾವುದೇ ಸಮಸ್ಯೆಯಿದ್ದರೂ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ನ್ಯಾಯ ಸಿಗುತ್ತದೆ. ಜೊತೆಗೆ ಈಗಾಗಲೇ ಮಾವು ಸುಗ್ಗಿಕಾಲ ಮುಗಿಯುವ ಹಂತಕ್ಕೆ ಬಂದಿದ್ದು, ಈಗಾಗಲೇ ಕಟಾವು ಮಾಡಿರುವ ಮಾವಿಗೆ ಬೆಂಬಲ ಬೆಲೆ ಅನ್ವಯಿಸುವಂತೆ ಜಿಲ್ಲಾಧಿಕಾರಿ ಕ್ರಮ ವಹಿಸುವ ಜೊತೆಗೆ ರೈತರ ತೋಟದಲ್ಲಿರುವ ಎಲ್ಲಾ ಮಾವು ಪಸಲನ್ನು ಯಾವುದೇ ಷರತ್ತು ಇಲ್ಲದೇ ಖರೀದಿ ಮಾಡಬೇಕೆಂದು ಅಗ್ರಹಿಸಿದರು.

ಸಂಘದ ರಾಜ್ಯ ಮುಖಂಡ ಬಂಗವಾದಿ ನಾಗರಾಜ್‌ಗೌಡ, ಮಂಗಸಂದ್ರ ತಿಮ್ಮಣ್ಣ, ತಾಲೂಕು ಅಧ್ಯಕ್ಷ ತರಬನಹಳ್ಳಿ ಆಂಜಿನಪ್ಪ, ವಾನರಾಶಿ ವೀರಭದ್ರಪ್ಪ, ರಾಜೇಂದ್ರರೆಡ್ಡಿ, ಪುತ್ತೇರಿ ರಾಜು, ಗಿರೀಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾತಿ ಸಂಕೋಲೆಯಿಂದ ಸಮಾಜ ಬಿಡುಗಡೆಯಾಗಲಿ
ಭೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ