ಚಿಕ್ಕಬಳ್ಳಾಪುರ: ಪೊಲೀಸ್ ಠಾಣೆ ಆವರಣದಲ್ಲಿರುವ ವಸತಿಗೃಹದಲ್ಲೇ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ಬುಧವಾರ ಮದ್ಯಾಹ್ನ ನಡೆದಿದೆ.ಮೃತ ಕಾನ್ಸ್ಟೇಬಲ್ ಅನ್ನು 48 ವರ್ಷದ ರಾಜಶೇಖರ್ ಎಂದು ಗುರುತಿಸಲಾಗಿದೆ.
ರಾಜಶೇಖರ್ ಅವರು ಆನ್ಲೈನ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡು ಹತಾಶನಾಗಿದ್ದರು ಎನ್ನಲಾಗುತ್ತಿದೆ. ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡಿದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.ಮೃತ ರಾಜಶೇಖರ್ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಮೂಲದವರಾಗಿದ್ದು ಅವರ ಕುಟುಂಬ ಶಿಡ್ಲಘಟ್ಟದಲ್ಲೇ ನೆಲೆಸಿದ್ದಾರೆ. ಸ್ಥಳಕ್ಕೆ ಪೋಲಿಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಷೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸಿಕೆಬಿ-3 ರಾಜಶೇಖರ್