ಶಾಲೆಯಲ್ಲಿ ಕುಡಿಯುವ ನೀರು ವ್ಯವಸ್ಥೆಗೆ ₹ 1 ಲಕ್ಷ ದೇಣಿಗೆ

KannadaprabhaNewsNetwork |  
Published : Sep 21, 2024, 01:51 AM IST
20ಕೆಪಿಎಲ್26 ಅಳವಂಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾಗಿ ಅಧಿಕಾರ ವಹಿಸಿಕೊಂಡ ಯಲ್ಲಪ್ಪ ಬಂಡಿ ಅವರನ್ನು ಸನ್ಮಾನಿಸುತ್ತಿರುವುದು. | Kannada Prabha

ಸಾರಾಂಶ

ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುದುಕನಗೌಡ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಮುಖ್ಯಾಧ್ಯಾಪಕರಾಗಿ ಅಧಿಕಾರ ವಹಿಸಿಕೊಂಡ ಯಲ್ಲಪ್ಪ ಬಂಡಿ ಅವರು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.

ಕೊಪ್ಪಳ: ತಾಲೂಕಿನ ಅಳವಂಡಿ ಗ್ರಾಮದ ಮುದುಕನಗೌಡ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ

ಯಲ್ಲಪ್ಪ ಬಂಡಿ ಅವರು ವಿದ್ಯಾರ್ಥಿಗಳ ಕುಡಿಯುವ ನೀರಿನ ವ್ಯವಸ್ಥೆಗಾಗಿ ₹ 1 ಲಕ್ಷ ದೇಣಿಗೆ ನೀಡಿ ಗಮನ ಸೆಳೆದಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯರಾಗಿ ಅಧಿಕಾರ ವಹಿಸಿಕೊಂಡ ತಕ್ಷಣ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರು ವ್ಯವಸ್ಥೆ ಇಲ್ಲ ಎನ್ನುವುದು ಗೊತ್ತಾಗುತ್ತಿದ್ದಂತೆ ತಮ್ಮ ತಂದೆ ಸಣ್ಣ ಭೀಮಪ್ಪ ಅವರ ಸ್ಮರಣಾರ್ಥವಾಗಿ ₹1 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಮುಖ್ಯೋಪಾಧ್ಯಾಯರಾಗಿ ಬಡ್ತಿ: ತಾಲೂಕಿನ ನೀರಲಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಂಗ್ಲಭಾಷೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಈಗ ಅವರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿಯಾಗಿದೆ. ಹೀಗಾಗಿ, ತಾಲೂಕಿನ ಅಳವಂಡಿಯ ಈ ಪ್ರೌಢಶಾಲೆಯಲ್ಲಿ ಶುಕ್ರವಾರ ಅಧಿಕಾರಿ ವಹಿಸಿಕೊಂಡರು. ಬಳಿಕ ಸನ್ಮಾನ ಸ್ವೀಕಾರ ಮಾಡಿ ಮಾತನಾಡುವ ವೇಳೆಯಲ್ಲಿ ಈ ಘೋಷಣೆ ಮಾಡಿದರು.

ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಜಾಕೀರಹುಸೇನ್ ಕುಕನೂರು, ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಶಂಕರಗೌಡ ಮಾಲಿಪಾಟೀಲ್, ಮಾರ್ತಂಡರಾವ್ ದೇಸಾಯಿ, ರಾಮಣ್ಣ ಬಾರಕೇರ, ಶಿವಾನಂದಯ್ಯ, ಮೈಲಾರಗೌಡ , ಭೀಮನಗೌಡ ಪೊಲೀಸ್ ಪಾಟೀಲ್, ದೇವಪ್ಪ ಭಚಕ್ಕನವರು, ಎಸ್‌ಡಿಎಂಸಿ ಶಂಕರಪ್ಪ ಕರಡಿ, ಗ್ಯಾನಪ್ಪ ಹಳ್ಳಿಕೇರಿ, ಗುರುಬಸವರಾಜ ವಕೀಲರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ