ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಶಿಬಿರ: ಶಾಸಕ ಯೋಗೇಶ್ವರ್

KannadaprabhaNewsNetwork |  
Published : May 28, 2025, 12:16 AM IST
ಪೊಟೋ೨೬ಸಿಪಿಟಿ೧: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ  ಆಯೋಜಿಸಿದ್ದ ಉಚಿತ ರೋಬೋಟಿಕ್ ಜಾಯಿಂಟ್ ಬದಲಿ ಶಸ್ತ್ರಚಿಕಿತ್ಸೆ ಹಾಗೂ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗಿಯಾದ ವೈದ್ಯರು ಹಾಗೂ ಸಿಬ್ಬಂದಿಯನ್ನು ಶಾಸಕ ಯೋಗೇಶ್ವರ್ ಸನ್ಮಾನಿಸಿದರು. | Kannada Prabha

ಸಾರಾಂಶ

ಆರೋಗ್ಯ ಶಿಬಿರದಲ್ಲಿ ಬಿಪಿ, ಶುಗರ್, ಸಾಮಾನ್ಯ ರೋಗ ತಪಾಸಣೆ, ಹೃದಯ ರೋಗ, ಇಎನ್ಟಿ, ಸ್ತ್ರೀ ರೋಗ, ಮಕ್ಕಳ ರೋಗ ತಪಾಸಣೆ, ಶ್ವಾಸಕೋಸ ತಪಾಸಣೆ, ಮಾನಸಿಕ ರೋಗ , ಚರ್ಮ ರೋಗದ ಬಗ್ಗೆ ತಪಾಸಣೆ ನಡೆಸಲಾಯಿತು. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನ ಆರೋಗ್ಯ ಶಿಬಿರದಲ್ಲಿ ಭಾಗಿಯಾಗಿದ್ದರು.

ಚನ್ನಪಟ್ಟಣ: ಇತ್ತೀಚೆಗೆ ಮಂಡಿನೋವು ಎಂಬುದು ಬಹುತೇಕರನ್ನು ಕಾಡುತ್ತಿದ್ದು, ಅದರಲ್ಲೂ ರೈತಾಪಿ ವರ್ಗದವರು ಮಂಡಿನೋವಿನಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶ ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಸೋಮವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಯೋಗೇಶ್ವರ್ ಚಾರಿಟಬಲ್ ಟ್ರಸ್ಟ್, ರೋಟರಿ ಸಂಸ್ಥೆ, ಕಾವೇರಿ ಹಾಸ್ಪಿಟಲ್ ಬೆಂ., ಬಿಜಿಎಸ್ ಗ್ಲೋಬಲ್ ವೈದ್ಯಕೀಯ ಮಹಾ ವಿದ್ಯಾಲಯ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ರೋಬೋಟಿಕ್ ಜಾಯಿಂಟ್ ಬದಲಿ ಶಸ್ತ್ರಚಿಕಿತ್ಸೆ ಹಾಗೂ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಚಿಕಿತ್ಸಾ ವೆಚ್ಚಗಳು ದುಬಾರಿಯಾಗಿವೆ. ಗ್ರಾಮೀಣ ಪ್ರದೇಶದ ಜನ ಇದಕ್ಕೆ ಅಂಜಿ ಆರೋಗ್ಯ ತಪಾಸಣೆಗಳಿಗೆ ಒಳಗಾಗದೇ ದೂರ ಉಳಿಯುತ್ತಿದ್ದಾರೆ. ಅದರಲ್ಲೂ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಸಮಸ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ. ತಾಲೂಕಿನ ಜನರ ಹಿತದೃಷ್ಟಿಯಿಂದ ಈ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಆರೋಗ್ಯ ಶಿಬಿರದಲ್ಲಿ ಬಿಪಿ, ಶುಗರ್, ಸಾಮಾನ್ಯ ರೋಗ ತಪಾಸಣೆ, ಹೃದಯ ರೋಗ, ಇಎನ್ಟಿ, ಸ್ತ್ರೀ ರೋಗ, ಮಕ್ಕಳ ರೋಗ ತಪಾಸಣೆ, ಶ್ವಾಸಕೋಸ ತಪಾಸಣೆ, ಮಾನಸಿಕ ರೋಗ , ಚರ್ಮ ರೋಗದ ಬಗ್ಗೆ ತಪಾಸಣೆ ನಡೆಸಲಾಯಿತು. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನ ಆರೋಗ್ಯ ಶಿಬಿರದಲ್ಲಿ ಭಾಗಿಯಾಗಿದ್ದರು.

ಸುಮಾರು 65 ಜನ ಮಂಡಿ ನೋವು ತಪಾಸಣೆಗೆ ಒಳಗಾಗಿದ್ದು, ಅವರಲ್ಲಿ 45 ಮಂದಿ ರೋಬೋಟಿಕ್ ಜಾಯಿಂಟ್ ಬದಲಿ ಶಸ್ತ್ರಚಿಕಿತ್ಸೆಗೆ ನೋಂದಣಿ ಮಾಡಿಸಿದರು. 252 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು. 60 ಜನರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.

ಬಮೂಲ್ ನಿರ್ದೇಶಕ ಎಸ್.ಲಿಂಗೇಶ್‌ಕುಮಾರ್, ನಗರಸಭೆ ಅಧ್ಯಕ್ಷ ವಾಸೀಲ್ ಅಲಿಖಾನ್, ಮುಖಂಡರಾದ ವಿ.ಬಿ. ಚಂದ್ರು, ಬ್ರಹ್ಮಣಿಪುರ ಪ್ರಸನ್ನ, ಕುಳ್ಳಪ್ಪ, ಕಾವೇರಿ ಹಾಸ್ಪಿಟಲ್ ಬೆಂ., ಬಿಜಿಎಸ್ ಗ್ಲೋಬಲ್ ವೈದ್ಯಕೀಯ ಮಹಾ ವಿದ್ಯಾಲಯ ವೈದ್ಯರಾದ ಡಾ. ಮೋಹನ್, ಕಾರ್ತಿಕ್, ಕೋಆರ್ಡಿನೇಟರ್ ನವೀನ್ ಕುಮಾರ್, ಆನಂದ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ