ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಪರಿಸರ ಸ್ವಚ್ಛತೆಗೆ ಆದ್ಯತೆ
ಗಾಂಧೀಜಿಯು ದೇಶವನ್ನು ಬೆಳಕಿನೆಡೆಗೆ ಕೊಂಡೊಯ್ದ ಆದರ್ಶ ಪುರುಷರಾಗಿದ್ದಾರೆ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸ್ವಚ್ಛತಾ ಕಾರ್ಯದಲ್ಲಿ ಪ್ರತಿಯೊಬ್ಬರು ತೊಡಗಬೇಕು. ಗಾಂಧೀಜಿಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದ್ದರು. ಇಡೀ ದೇಶವೆಲ್ಲಾ ಸ್ವಚ್ಛವಾಗಿರಬೇಕು ಎಂಬ ಕನಸು ಕಂಡಿದ್ದರು. ಅವರ ಕನಸನ್ನು ನಾವೆಲ್ಲರೂ ನನಸು ಮಾಡಿ ಅವರಿಗೆ ನಿಜವಾದ ಅರ್ಥದಲ್ಲಿ ಗೌರವ ಸಲ್ಲಿಸಬೇಕಿದೆ. ನಾವು ವಾಸಿಸುವ ಸುತ್ತಮುತ್ತಲ ಪರಿಸರ ಶುಚಿತ್ವದಿಂದ ಕೂಡಿದ್ದಾಗ ಮಾತ್ರ ಲವಲವಿಕೆಯಿಂದ ಕ್ರಿಯಾಶೀಲರಾಗಿ ಕೆಲಸ ಮಾಡಿ ಆರೋಗ್ಯವಾಗಿರಲು ಸಾಧ್ಯ ಎಂದರು.ಆದ್ದರಿಂದ ಕಸವನ್ನು ಮನೆಯಿಂದಲೇ ಅಂದರೆ ಮೂಲದಲ್ಲೇ ಹಸಿ ಮತ್ತು ಒಣಕಸವನ್ನಾಗಿ ಬೇರ್ಪಡಿಸಿ ನಗರಸಭೆಯ ಕಸಸಂಗ್ರಹ ವಾಹನಕ್ಕೆ ನೀಡಬೇಕು. ರಸ್ತೆಗಳು, ಮಾರುಕಟ್ಟೆ,ಬಸ್ ನಿಲ್ದಾಣ,ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳನ್ನು ತಮ್ಮ ಮನೆಗಳ ರೀತಿಯೇ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.ಸಸಿ ನೆಟ್ಟು ಪೋಷಣೆ ಮಾಡಿ
ಅಲ್ಲದೇ ನಗರಸಭೆ ಪೌರಕಾರ್ಮಿಕರು ಬಂದಾಗ ಅವರಿಗೆ ಹಸಿಕಸ-ಒಣಕಸ ವಿಂಗಡಿಸಿ ನೀಡಿದರೆ ಸಹಕಾರಿಯಾಗುತ್ತದೆ. ಸಾರ್ವಜನಿಕರು ತಮ್ಮ ಜವಾಬ್ದಾರಿ ಮರೆತು ಕಸ ಎಲ್ಲೆಂದರಲ್ಲಿ ಎಸೆದು ನಗರವನ್ನು ಮಾಲಿನ್ಯ ಮಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರಲ್ಲದೇ, ಸ್ವಚ್ಛತೆ ಎಲ್ಲಿರುತ್ತದೆಯೋ ಅಲ್ಲಿ ಆರೋಗ್ಯವಿರುತ್ತದೆ. ಸ್ವಚ್ಛತೆ ಎನ್ನುವುದು ಒಂದು ದಿನಕ್ಕೆ ಸೀಮಿತವಾಗದೇ ನಿರಂತರವಾಗಿರಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಕಸಮುಕ್ತವಾಗಿಸಲು ಸ್ಥಳೀಯ ಸಂಸ್ಥೆಗಳೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಪೌರಕಾರ್ಮಿಕರನ್ನು ಗೌರವಿಸಿನಗರಸಭೆ ಪೌರಾಯುಕ್ತ ಮನ್ಸೂರ್ ಆಲಿ ಮಾತನಾಡಿ, ಸ್ವಚ್ಛತೆ ಎನ್ನುವುದು ನಮ್ಮ ಮನೆಯಿಂದಲೇ ಪ್ರಾರಂಭವಾಗಬೇಕು. ನಗರದ ಸ್ವಚ್ಛತೆ ಮಾಡುವ ಪೌರ ಕಾರ್ಮಿಕರು ಬಡಾವಣೆಗೆ ಬಂದಾಗ ಗೌರವದಿಂದ ಕಾಣಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ , ವಕೀಲರ ಸಂಘದ ಜಿಲ್ಲಾಧ್ಯಕ್ಷ ಅಭಿಲಾಶ್, ಎಪಿಎಂಸಿ ಕಾರ್ಯದರ್ಶಿ ಉಮಾ, ವಕೀಲರ ಸಂಘದ ಸದಸ್ಯರು ಪದಾಧಿಕಾರಿಗಳು, ನ್ಯಾಯಾಂಗ ಇಲಾಖೆ, ನಗರಸಭೆ, ಅಧಿಕಾರಿಗಳು ಮತ್ತು ಸಿಬ್ಬಂದಿ, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ವರ್ತಕರು, ರೈತರು, ಪೌರಕಾರ್ಮಿಕರು ಇದ್ದರು.