ಧಾರವಾಡ:
ಎಸ್ಡಿಎಂ ವಿವಿ ಉಪಕುಲಪತಿ ಡಾ. ನಿರಂಜನ್ ಕುಮಾರ ಮಾತನಾಡಿ, ದಂತ ಕಾಲೇಜಿನ ಈ ವಿಭಾಗವು ಧಾರವಾಡದ ಸುತ್ತಮುತ್ತಲಿನ 17 ತಾಲೂಕುಗಳಲ್ಲಿ ಸಂಚಾರಿ ಚಿಕಿತ್ಸಾಲಯದ ಮೂಲಕ ಬಾಯಿಯ ಆರೋಗ್ಯದ ಕುರಿತು ಜಾಗೃತಿ, ಚಿಕಿತ್ಸೆ ನೀಡಿದೆ. ಇತ್ತೀಚಿಗೆ 75 ಶಿಬಿರಗಳಲ್ಲಿ 12 ಸಾವಿರಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಸಮತೋಲನ ಆಹಾರದ ಮೇಲೆ ಅದರಲ್ಲೂ ಗರ್ಭಿಣಿಯರಿಗೆ ಆಶಾ ಕಾರ್ಯಕರ್ತೆಯರು ವಿಶೇಷವಾಗಿ ಅವರ ಆರೋಗ್ಯದ ಉನ್ನತಿಗಾಗಿ ಗಮನಹರಿಸುತ್ತಾರೆ. ಆಶಾ ಕಾರ್ಯಕರ್ತೆಯರು ಸಮುದಾಯದಲ್ಲಿ ತಂಬಾಕು ಸೇವನೆಯಿಂದ ಆಗುವ ಸಮಸ್ಯೆಗಳನ್ನು ಪತ್ತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದರು.ಕಾರ್ಯನಿರ್ವಾಹಕ ನಿರ್ದೇಶಕಿ ಪದ್ಮಲತಾ ನಿರಂಜನ್, ಡಾ. ಶೋದನ, ಡಾ. ಹೇಮಾ ತಂಬಾಕ ಸೇವನೆಯಿಂದಾಗುವ ದುಷ್ಪರಿಣಾಮ ವಿವರಿಸಿದರು. ಡಾ. ಜೆಬಾ ಶೇಖ್ ನಿರೂಪಿಸಿದರು. ವಿಭಾಗದ ಮುಖ್ಯಸ್ಥ ಡಾ. ರವಿ ಶಿರಹಟ್ಟಿ ಸ್ವಾಗತಿಸಿದರು. ಡಾ. ಅಕ್ಷತಾ ಅಗ್ನಿಹೋತ್ರಿ ಪರಿಚಯಿಸಿದರು. ಡಾ. ಪ್ರೀತಾ ಶೆಟ್ಟಿ ವಂದಿಸಿದರು. 150ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.