ಯಲಬುರ್ಗಾ: ಆಧುನಿಕ ಜೀವನ ಶೈಲಿ, ಆಹಾರ ಕ್ರಮದಿಂದ ಹಲವರು ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಪೋಷಕಾಂಶಯುಕ್ತ ಆಹಾರ ಪದ್ಧತಿಯಿಂದ ಆರೋಗ್ಯ ಸುಧಾರಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ನಟರಾಜ ಹೇಳಿದರು.
ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರ ಪದ್ಧತಿಯ ಬಗ್ಗೆ ಸಂಬಂಧಿಸಿದ ಇಲಾಖೆಗಳಿಂದ ಅರಿವು ಮೂಡಿಸಿದರೂ ನಿರೀಕ್ಷಿತ ಪ್ರಮಾಣದಲ್ಲಿ ಬದಲಾವಣೆ ಆಗದಿರುವುದು ವಿಷಾದನೀಯ ಎಂದರು.
ಸಿಡಿಪಿಒ ಬೆಟದೇಶ ಮಾಳೆಕೊಪ್ಪ ಮಾತನಾಡಿ, ಪೌಷ್ಟಿಕ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ಪೋಷಣ್ ಅಭಿಯಾನ ಯೋಜನೆ ರೂಪಿಸಲಾಗಿದೆ. ಭಾರತವನ್ನು ಕಾಡುತ್ತಿರುವ ಅಪೌಷ್ಟಿಕತೆ ತೊಡೆದು ಹಾಕಲು ೫ ಗುರಿ ಹೊಂದಿದ್ದು, ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು, ಕಿಶೋರಿಯರಲ್ಲಿ ಅಪೌಷ್ಟಿಕತೆ ನಿವಾರಣೆ, ರಕ್ತಹೀನತೆ ತಡೆಗಟ್ಟುವಿಕೆ, ಕುಂಠಿತ ಬೆಳವಣಿಗೆ, ಜನನ ತೂಕ ಕಡಿಮೆಯಾಗುವ ಸಮಸ್ಯೆ ನಿವಾರಿಸಲು ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ೨೦೨೫ನೇ ಸಾಲಿನಲ್ಲಿ ಹಲವು ಅಂಶ ಇರಿಸಿಕೊಂಡು ಅರಿವು ಮೂಡಿಸಲಾಗುತ್ತಿದೆ ಎಂದರು.ಗರ್ಭಿಣಿ, ಬಾಣಂತಿಯರಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.