ಕ್ರೀಡೆಗಳಿಂದ ಆರೋಗ್ಯ ವೃದ್ಧಿ

KannadaprabhaNewsNetwork |  
Published : Jul 25, 2024, 01:24 AM IST
ಕ್ರೀಡಾಕೂಟವನ್ನು ಉದ್ದೇಶಿಸಿ ಡಾ.ಜಗದೀಶ ಶಿರೋಳ ಮಾತನಾಡಿದರು.  | Kannada Prabha

ಸಾರಾಂಶ

ಜಂಕ್‌ಫುಡ್ ಆಹಾರ ಪದ್ಧತಿಯ ಜೀವನ ಶೈಲಿ, ಅತಿಯಾದ ಮೊಬೈಲ್‌ ಬಳಕೆಯಿಂದ ಕಡಿಮೆ ವಯಸ್ಸಿನ ಯುವಕ, ಯುವತಿಯರಲ್ಲಿ ಮಧುಮೇಹ, ರಕ್ತದೊತ್ತಡ, ಹೃದಯದ ಕಾಯಿಲೆ ಕಂಡುಬರುತ್ತಿವೆ. ದೈಹಿಕ ಚಟುವಟಿಕೆಯಲ್ಲಿ ತೊಡಗುವುದರಿಂದ ನಾವೆಲ್ಲರು‌ ಮಾನಸಿಕ ನೆಮ್ಮದಿಯಿಂದ ಜೀವನ ನಡೆಸಬಹುದು

ಗದಗ: ನಿಯಮಿತವಾಗಿ ವ್ಯಾಯಾಮ ಹಾಗೂ ಕ್ರೀಡೆಗಳಿಂದ ಆರೋಗ್ಯವಂತರಾಗಿರಬಹುದು ಎಂದು ವೈದ್ಯ ಡಾ. ಜಗದೀಶ ಶಿರೋಳ ಹೇಳಿದರು.

ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗದಗ ವಿಭಾಗದ ನೌಕರರ ಕ್ರೀಡಾಕೂಟದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಯುವ ಪೀಳಿಗೆ ಕ್ರೀಡೆಗಳಿಂದ ದೂರ ಉಳಿದಿದ್ದು, ಜಂಕ್‌ಫುಡ್ ಆಹಾರ ಪದ್ಧತಿಯ ಜೀವನ ಶೈಲಿ, ಅತಿಯಾದ ಮೊಬೈಲ್‌ ಬಳಕೆಯಿಂದ ಕಡಿಮೆ ವಯಸ್ಸಿನ ಯುವಕ, ಯುವತಿಯರಲ್ಲಿ ಮಧುಮೇಹ, ರಕ್ತದೊತ್ತಡ, ಹೃದಯದ ಕಾಯಿಲೆ ಕಂಡುಬರುತ್ತಿವೆ. ದೈಹಿಕ ಚಟುವಟಿಕೆಯಲ್ಲಿ ತೊಡಗುವುದರಿಂದ ನಾವೆಲ್ಲರು‌ ಮಾನಸಿಕ ನೆಮ್ಮದಿಯಿಂದ ಜೀವನ ನಡೆಸಬಹುದು. ಅಲ್ಲದೇ ದೈಹಿಕ ಚಟುವಟಿಕೆಗಳು‌ ನಮ್ಮನ್ನು ಇನ್ನಷ್ಟು ಆಸಕ್ತಿಯಿಂದ ಜೀವಿಸಲು ಸಹಕಾರಿಯಾಗಿವೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎಂ.ದೇವರಾಜ, ಪ್ರತಿವರ್ಷ ಸಂಸ್ಥೆಯ ನೌಕರರಿಗೆ ಕ್ರೀಡಾ ಮನೋಭಾವನೆ ಬೆಳೆಸುವ ದೃಷ್ಟಿಯಿಂದ ಹಾಗೂ ಒತ್ತಡದ ಕೆಲಸ ಕಾರ್ಯದಿಂದ ಹೊರಬರಲು ಸಂಸ್ಥೆಯ ನೌಕರರಿಗೆ ಕ್ರೀಡೆ ಹಾಗೂ ಕಲಾ ಚಟುವಟಿಕೆ ಆಯೋಜಿಸಲಾಗಿದೆ. ಯೋಗ, ಧ್ಯಾನ ಮಾಡುವದರೊಂದಿಗೆ ಪ್ರತಿ ದಿನ ಕ್ರೀಡೆಗಳಲ್ಲಿ ತೊಡಗಿಕೊಳ್ಳುವದರ ಮೂಲಕ ದಿನವಿಡಿ ಚೈತನ್ಯದಿಂದ ಕೂಡಿರಬಹುದೆಂದು ಎಂದರು.

ಕ್ರೀಡೆಯಲ್ಲಿ ವಿಭಾಗದ ಘಟಕಗಳಿಂದ ಚಾಲಕ, ನಿರ್ವಾಹಕ, ತಾಂತ್ರಿಕ ಹಾಗೂ ಆಡಳಿತ ಸಿಬ್ಬಂದಿಗಳು ಭಾಗವಹಿಸಿದ್ದರು. ಇಲ್ಲಿ ಆಯ್ಕೆಯಾದ ವಿಜೇತರು ಕೇಂದ್ರ ಮಟ್ಟದಲ್ಲಿ ಆಯ್ಕೆಯಾಗುತ್ತಾರೆ.

ಕಾರ್ಯಕ್ರಮದಲ್ಲಿ ಅಧಿಕಾರಿಗಳಾದ ಪಿ.ವೈ.ಗಡೇದ, ದೇವಕ್ಕಾ ನಾಯ್ಕ, ಬಿ.ಎಲ್. ಗೆಣ್ಣೂರ, ರೀಟಾ ಮಿರಜಕರ, ಆರ್.ಎಸ್. ಕಾಶೀಗೌಡ್ರ, ಕಾರ್ಮಿಕ ಮುಖಂಡರಾದ ಶಾಂತಣ್ಣ ಮುಳವಾಡ, ಸಂಗಣ್ಣವರ, ಅಮೃತೇಶ ಹೊಸಳ್ಳಿ ಹಾಗೂ ಕ್ರೀಡಾಪಟುಗಳು, ಸಿಬ್ಬಂದಿಗಳು ಹಾಜರಿದ್ದರು. ಆರ್.ಎಸ್. ಕಾಶಿಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು, ಬಿ.ಎಲ್. ಗೆಣ್ಣೂರ ವಂದಿಸಿದರು. ಎಸ್.ಟಿ. ದಾಮೋದರ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೊಲೀಸ್‌ ಠಾಣೆಗಳಿಗೆ ಬೆರಳ ತುದಿಯಲ್ಲೇ ಉಗ್ರರ ಮಾಹಿತಿ
ಕೆಆರ್‌ಎಸ್‌ನಿಂದಲೇ ನಗರಕ್ಕೆ ನೀರು ತರಲು ಸ್ಕೀಂ