ಶ್ರವಣ ದೋಷ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು: ಗುಡಿಮನಿ

KannadaprabhaNewsNetwork |  
Published : Mar 06, 2024, 02:18 AM ISTUpdated : Mar 06, 2024, 02:19 AM IST
ಕಾರ್ಯಕ್ರಮದಲ್ಲಿ ಶರಣಬಸಪ್ಪ ಗುಡಿಮನಿ ಮಾತನಾಡಿದರು. | Kannada Prabha

ಸಾರಾಂಶ

ಶ್ರವಣ ಎಂದರೆ ಕೇಳು, ಮನನ ಮಾಡಿಕೊಳ್ಳುವದು. ಆದರೆ ಕೆಲವು ಮುಗ್ದ ಮಕ್ಕಳು ಬಾಲ್ಯದಲ್ಲಿಯೇ ಕೇಳುವ ಮಾತನಾಡುವ ಸಾಮರ್ಥ್ಯ ಕಳೆದುಕೊಂಡು ಮೌನಿಗಳಾಗುತ್ತಾರೆ. ಇಂಥಹ ಮಕ್ಕಳಿಗೆ ಪ್ರೇರಣೆ ಹಾಗೂ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳಿಗೆ ಸ್ಪೂರ್ತಿ ತುಂಬಬೇಕೆಂದು ರೋಟರಿ ಕ್ಲಬ್‌ನ ಡಿಸ್ಟ್ರೀಕ್ಟ್ ಅಸಿಸ್ಟಂಟ್ ಗೌರ್ನರ್ ಶರಣಬಸಪ್ಪ ಗುಡಿಮನಿ ಹೇಳಿದರು.

ಗದಗ: ಶ್ರವಣ ಎಂದರೆ ಕೇಳು, ಮನನ ಮಾಡಿಕೊಳ್ಳುವದು. ಆದರೆ ಕೆಲವು ಮುಗ್ದ ಮಕ್ಕಳು ಬಾಲ್ಯದಲ್ಲಿಯೇ ಕೇಳುವ ಮಾತನಾಡುವ ಸಾಮರ್ಥ್ಯ ಕಳೆದುಕೊಂಡು ಮೌನಿಗಳಾಗುತ್ತಾರೆ. ಇಂಥಹ ಮಕ್ಕಳಿಗೆ ಪ್ರೇರಣೆ ಹಾಗೂ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳಿಗೆ ಸ್ಪೂರ್ತಿ ತುಂಬಬೇಕೆಂದು ರೋಟರಿ ಕ್ಲಬ್‌ನ ಡಿಸ್ಟ್ರೀಕ್ಟ್ ಅಸಿಸ್ಟಂಟ್ ಗೌರ್ನರ್ ಶರಣಬಸಪ್ಪ ಗುಡಿಮನಿ ಹೇಳಿದರು.

ನಗರದ ಸ್ಪಂದನ ಕಿವುಡ ಹಾಗೂ ಮೂಕ ಮಕ್ಕಳ ಶಾಲೆಯಲ್ಲಿ ರೋಟರಿ ಸೆಂಟ್ರಲ್ ಕ್ಲಬ್‌ದಿಂದ ಜರುಗಿದ ವಿಶ್ವ ಶ್ರವಣ ದಿನ ಹಾಗೂ ಪಂ.ಪುಟ್ಟರಾಜ ಕವಿ ಗವಾಯಿಗಳ ಅವರ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಲ್ಯವೆಂದರೆ ಆಟಪಾಠಗಳನ್ನು ಮಿತ್ರರೊಡನೆ ಕಳೆಯಬೇಕು. ಆದರೆ ಈ ಮಕ್ಕಳು ಯಾವುದೇ ತಪ್ಪು ಮಾಡದೇ ಇಂತಹ ನೋವು ಅನುಭವಿಸಬೇಕಾಗುತ್ತದೆ, ನಾವು ಇಂತಹ ಮಕ್ಕಳನ್ನು ಪ್ರೋತ್ಸಾಹಿಸಬೇಕು. ಲಕ್ಷ್ಮೇಶ್ವರದ ಕಿವುಡ ಮೂಗರ ಶಾಲೆಗೆ ರೋಟರಿ ಕ್ಲಬ್ ನೀಡಿದ ದೊಡ್ಡ ಮೊತ್ತದ ಕೊಡುಗೆಯನ್ನು ಸ್ಮರಿಸಿದರು.

ಕ್ಲಬ್ ಅಧ್ಯಕ್ಷ ವಿಜಯಕುಮಾರ ಹಿರೇಮಠ ಮಾತನಾಡಿ, ಶ್ರವಣ ಹಾಗೂ ಮಾತಿನ ವಿಕಲತೆ ಇರುವ ಮಕ್ಕಳನ್ನು ಸ್ವಾವಲಂಬಿಗಳನ್ನಾಗಿ ಮಾಡುವಲ್ಲಿ ನಾವು ಶ್ರಮಿಸಬೇಕೆಂದರು.

ಕ್ಲಬ್ ಕಾರ್ಯದರ್ಶಿ ಸಂತೋಷ ತೋಟಗಂಟಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಇಂಥಹ ಮಕ್ಕಳು ಸಮಾಜದಲ್ಲಿ ಪ್ರತಿನಿತ್ಯ ಕ್ಲಿಷ್ಟಕರ ಸಮಸ್ಯೆಗಳನ್ನು ಎದುರಿಸುತ್ತಾರೆ. ವೈಜ್ಞಾನಿಕವಾಗಿ ಈ ಮಕ್ಕಳಿಗೆ ಸೌಲಭ್ಯ ಒದಗಿಸುವ ಕಾರ್ಯ ನಡೆಯಬೇಕಿದೆ ಎಂದರು.

ಈ ವೇಳೆ ಎಸ್.ಎಫ್.ದ್ಯಾಪನಗೌಡ್ರ, ಸೋಮಶೇಖರ ಚಿಕ್ಕಮಠ, ವಿದ್ಯಾಶ್ರೀ ಪೂಜಾರ, ಸವಿತಾ ಗಚ್ಚಮ್ಮನವರ, ಪ್ರಭಾವತಿ ಮೆಣಸಿನಕಾಯಿ, ಶಿವಲೀಲಾ ಶೇಗಣಿ, ರೇಣುಕಾ ಗಡಗಿ, ಮಲ್ಲಮ್ಮ ಪಾಟೀಲ, ನಿರಂಜನ ಸಂಪಣ್ಣವರ, ರವೀಂದ್ರ ಮೊರಬದ ಉಪಸ್ಥಿತರಿದ್ದರು. ದೀಪಾ ಮಸಾಳೆ, ಪೂಜಾ ದೊಡ್ಡಮನಿ ಪ್ರಾರ್ಥಿಸಿದರು, ಕವಿತಾ ದಂಡಿನ ಸ್ವಾಗತಿಸಿದರು. ಮುಖ್ಯೋಪಾಧ್ಯಾಯನಿ ಲಲಿತಾ ಪಾಟೀಲ ಪರಿಚಯಿಸಿದರು. ಶಾಂತಾ ಗದಗ ನಿರೂಪಿಸಿದರು. ಚಂದ್ರಮ್ಮ ಕೊಟಗಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ