ಜಿಪಂ ಸಭಾಂಗಣದಲ್ಲಿ ಉಪಲೋಕಾಯುಕ್ತರಿಂದ ಬಾಕಿ ಪ್ರಕರಣಗಳ ವಿಚಾರಣೆ

KannadaprabhaNewsNetwork |  
Published : Jun 16, 2024, 01:46 AM IST
ಗದಗ ಜಿಪಂ ಸಭಾಂಗಣದಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಸಾರ್ವಜನಿಕ ಅಹವಾಲು, ಕುಂದುಕೊರತೆ ಮರು ವಿಚಾರಣೆ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಪ್ರಕರಣಗಳ ಕುರಿತು ವಿಚಾರಣೆ ನಡೆಸಿದರು. | Kannada Prabha

ಸಾರಾಂಶ

ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸಾರ್ವಜನಿಕ ಅಹವಾಲು, ಕುಂದುಕೊರತೆ ಮರು ವಿಚಾರಣೆ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಪ್ರಕರಣಗಳ ಕುರಿತು ವಿಚಾರಣೆ ನಡೆಸಿದರು.

ಕನ್ನಡಪ್ರಭ ವಾರ್ತೆ ಗದಗ

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸಾರ್ವಜನಿಕ ಅಹವಾಲು, ಕುಂದುಕೊರತೆ ಮರು ವಿಚಾರಣೆ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಪ್ರಕರಣಗಳ ಕುರಿತು ವಿಚಾರಣೆ ನಡೆಸಿದರು.

ಮುಳಗುಂದದ ವಿರೂಪಾಕ್ಷಪ್ಪ ಅಕ್ಕಿ ಅವರು ತಮ್ಮ ಮನೆಯ ಹಿಂದೆ ಇರುವ ಸರ್ಕಾರಿ ರಸ್ತೆ ಒತ್ತುವರಿ ಕುರಿತು ದೂರು ಸಲ್ಲಿಸಿದ್ದು, ವಿಚಾರಣೆ ಕೈಗೆತ್ತಿಕೊಂಡ ಲೋಕಾಯುಕ್ತರು ಅಧಿಕಾರಿಗಳಿಂದ ಪ್ರಕರಣ ಕುರಿತು ವಿವರಣೆ ಪಡೆದರು. ಅಧಿಕಾರಿಗಳು ರಸ್ತೆಯ ಒತ್ತುವರಿ ತೆರವುಗೊಳಿಸಿದ್ದರ ಕುರಿತು ತಿಳಿಸಿದ್ದು ಪ್ರಕರಣ ಮುಕ್ತಾಯಗೊಳಿಸಲಾಯಿತು.

ಗದುಗಿನ ಹನುಮಂತಪ್ಪ ಚಲವಾದಿ ಅವರು, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರ ಕಾರ್ಯಾಲಯಕ್ಕೆ ನಗರಸಭೆಯ ವ್ಯಾಪ್ತಿಯ ಸರ್ವೇ ಉತಾರದ ಕುರಿತು ಮಾಹಿತಿ ಹಕ್ಕು ಅಧಿನಿಯಮದಡಿ ಮಾಹಿತಿ ಕೋರಿದ್ದು ಅವರು ನೀಡಿದ ಮಾಹಿತಿ ಸುಳ್ಳು ಎಂದು ಆರೋಪಿಸಿ ಪ್ರಕರಣ ದಾಖಲಾಗಿಸಲಾಗಿದೆ. ಈ ಕುರಿತು ಅರ್ಜಿದಾರರು ಮಾಹಿತಿ ಹಕ್ಕಿನಡಿ ಸಂಬಂಧಿಸಿದವರಿಗೆ ಮೇಲ್ಮನವಿ ಸಲ್ಲಿಸುವುದರ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿ ಅವರ ಪ್ರಕರಣವನ್ನು ವಜಾಗೊಳಿಸಲಾಯಿತು.

ಶಾಂತಗಿರಿಯ ಮಲ್ಲೇಶಪ್ಪ ಅವರು ಜೀವಂತವಿದ್ದರೂ ಗ್ರಾಮ ಲೆಕ್ಕಾಧಿಕಾರಿಗಳು ಸುಳ್ಳು ಮರಣ ಪ್ರಮಾಣ ಪತ್ರ ನೀಡಿರುತ್ತಾರೆ ಎಂದು ದೂರು ನೀಡಿದ್ದು, ಜನತಾ ದರ್ಶನ ಪ್ರಾರಂಭವಾದ ಮೇಲೆ ಅವರ ಪಿಂಚಣಿ ಮಂಜೂರಾತಿ ಮಾಡಲಾಗಿದೆ. ಈ ಕುರಿತು ಸೂಕ್ತ ಸಾಕ್ಷಾಧಾರಗಳನ್ನು ಅವರು ಒದಗಿಸಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ ನಿವೇಶನ ಹಂಚಿಕೆ, ನಿವೃತ್ತಿ ನಂತರ ಪಿಂಚಣಿ ನಿಗದಿ, ಶಾಲಾ ಆಟದ ಮೈದಾನದ ಒತ್ತುವರಿ, ಬೆಳೆ ಪರಿಹಾರ, ಕೆರೆ ಒತ್ತುವರಿ, ವೇತನ ಸ್ಥಗಿತ ಹೀಗೆ ಹಲವು ರೀತಿಯ ಪ್ರಕರಣಗಳ ವಿಚಾರಣೆ ನಡೆಸಿ ಹಲವು ಪ್ರಕರಣಗಳನ್ನು ಸ್ಥಳದಲ್ಲಿಯೇ ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಸಂಪನ್ಮೂಲ ಅಧಿಕಾರಿ ಪ್ರಕಾಶ ನಾಡಗೇರ, ಜಿಪಂ ಸಿಇಒ ಭರತ್ ಎಸ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಜಿ.ಎಸ್. ಪಲ್ಲೇದ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸತೀಶ ಚಿಟಗುಬ್ಬಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲವಂತದ ಮದ್ವೆ ಕಾರಣ ‘ಕೈ’ಗೆ ವಿಚ್ಛೇದನ: ಎಚ್‌.ಡಿ.ದೇವೇಗೌಡ
ಕೋಗಿಲು ಬಡಾವಣೆಯ ಸಂತ್ರಸ್ತ 12 ಕುಟುಂಬಕ್ಕೆ ಮನೆ ಹಂಚಿದ ರಾಜ್ಯ ಸರ್ಕಾರ