ಕೊಡಗು ಮೆಡಿಕಲ್ ಕಾಲೇಜಿನಲ್ಲಿ ಹೃದ್ರೋಗ ಚಿಕಿತ್ಸೆ ಶೀಘ್ರ: ಡಾ.ಮಂತರ್ ಗೌಡ

KannadaprabhaNewsNetwork |  
Published : Mar 29, 2025, 12:33 AM IST
ಚಿತ್ರ : 27ಎಂಡಿಕೆ4 : ಬೃಹತ್ ಆರೋಗ್ಯ ಪ್ರದರ್ಶನ ಮೇಳ ಕಾರ್ಯಕ್ರಮವನ್ನು  ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.  | Kannada Prabha

ಸಾರಾಂಶ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸದ್ಯದಲ್ಲಿಯೇ ಹೃದ್ರೋಗ ಚಿಕಿತ್ಸೆ ಲಭ್ಯವಾಗಲಿದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ (ಕೊಡಗು ಜಿಲ್ಲಾ ಆಸ್ಪತ್ರೆ ಮಡಿಕೇರಿ)ಯಲ್ಲಿ ಸದ್ಯದಲ್ಲಿಯೇ ಹೃದ್ರೋಗ ಚಿಕಿತ್ಸೆ ಲಭ್ಯವಾಗಲಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಾಹಿತಿ ನೀಡಿದ್ದಾರೆ.

ಕಾಲೇಜು ಸ್ಥಾಪನೆಯಾಗಿ 10 ವರ್ಷ ಪೂರೈಸಿದ ಹಿನ್ನಲೆಯಲ್ಲಿ ‘ಅವೆನ್ಸಿಸ್ 2025’ ಎಂಬ ಬೃಹತ್ ಆರೋಗ್ಯ ಪ್ರದರ್ಶನ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಆಸ್ಪತ್ರೆಯನ್ನು ಅತ್ಯಂತ ಸುಸಜ್ಜಿತ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲು ತಾವು ಬದ್ಧರಾಗಿದ್ದು, ಪ್ರಸ್ತುತ ಹೃದ್ರೋಗ ಚಿಕಿತ್ಸೆ ಕೇಂದ್ರ ಸ್ಥಾಪನೆಗೆ ಸರ್ಕಾರ ಒಪ್ಪಿದೆ ಎಂದು ತಿಳಿಸಿದರು.

ಮೆಡಿಕಲ್ ವಿದ್ಯಾರ್ಥಿಗಳ ಕಲಿಕೆಗೆ ಆರೋಗ್ಯ ಪ್ರದರ್ಶನ ಮೇಳ ಅತ್ಯಂತ ಅಗತ್ಯ ಕಾರ್ಯಕ್ರಮವಾಗಿದ್ದು ಸಾರ್ವಜನಿಕರು ಕೂಡ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.

ದಸರಾ ಸಾಂಸ್ಕೃತಿಕ ಸಮಿತಿಯ ಸಂಚಾಲಕ ತೆನ್ನಿರ ಮೈನಾ ಮಾತನಾಡಿ, ಜನರ ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ರೂಪಿಸಿದ ಮೆಡಿಕಲ್ ಕಾಲೇಜಿನ ಆಡಳಿತ ವರ್ಗ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು.

ಕೊಡಗು ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ.ಲೋಕೇಶ್ ಮಾತನಾಡಿ, ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಆರೋಗ್ಯಕ್ಕೆ ಸಂಬಂಧಿಸಿದ ಉಪಯುಕ್ತ ಕಾರ್ಯಕ್ರಮ ನೀಡಲಾಗುವುದು ಎಂದು ವಿವರಿಸಿದರು.

ಎಚ್.ಒ.ಡಿ. ಡಾ.ಪುರುಷೋತ್ತಮ ಮಾತನಾಡಿ, ಮೆಡಿಕಲ್ ಕಾಲೇಜಿನ ವಿಚಾರದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಸಂಪೂರ್ಣ ನೆರವು ನೀಡುತ್ತಿದ್ದು, ಅದಕ್ಕೆ ಸಂಸ್ಥೆ ಅಭಾರಿಯಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಯ ಮುಖ್ಯಸ್ಥ ಡಾ.ವಿಶಾಲ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ಹಂಸ, ಡಾ.ಸೋಮಶೇಖರ್, ಡಾ. ಮಂಜುನಾಥ್, ಕಾರ್ಯನಿರ್ವಾಹಕ ಅಧಿಕಾರಿ ರೋಹಿಣಿ, ನಗರಸಭಾ ಮಾಜಿ ಸದಸ್ಯ ಕೆ.ಜಿ.ಪೀಟರ್ ಉಪಸ್ಥಿತರಿದ್ದರು.

ಪ್ರಮುಖರಾದ ಪುಲಿಯಂಡ ಜಗದೀಶ್,ಪ್ರಭು ರೈ,ವಿ.ಜಿ ಮೋಹನ್, ಚಂದ್ರಶೇಖರ್, ಕಾಲೇಜಿನ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ