ಕನ್ನಡಪ್ರಭ ವಾರ್ತೆ ಉಡುಪಿಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮಂಗಳವಾರ ರಾತ್ರಿಯಿಂದ ಮತ್ತೆ ಜೋರಾಗಿ ಸುರಿಯಲಾರಂಭಿಸಿದೆ. ಬುಧವಾರ ರಾತ್ರಿ ಭಾರೀ ಗಾಳಿ ಮಳೆಯಾಗಿದ್ದು, ಬುಧವಾರ ಹಗಲಿನಲ್ಲಿಯೂ ಉತ್ತಮ ಮಳೆಯಾಗಿದೆ.
ಬುಧವಾರ ರಾತ್ರಿ ಜಿಲ್ಲೆಯಲ್ಲಿ ಸರಾಸರಿ 22 ಮಿ.ಮೀ. ಮಳೆ ದಾಖಲಾಗಿದೆ. ಕಾಪು ತಾಲೂಕಿನ ಉಳಿಯಾರಗೋಳಿ
ಗ್ರಾಮದ ವಾಸುದೇವ ಆಚಾರ್ಯ ಅವರ ಮನೆ ಗಾಳಿ ಮಳೆಗೆ ಭಾಗಶಃ ಹಾನಿಗೊಂಡು 62,000 ರು.ಗಳಷ್ಟು ಹಾನಿಯಾಗಿದೆ.ಅಧಿಕಾರಿಗಳಿಗೆ ಡಿಸಿ ಸೂಚನೆ: ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಪ್ರಕೃತಿ ವಿಕೋಪ ನಿರ್ವಹಣೆಗೆ ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚಿಸಿದ್ದಾರೆ.ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ತುರ್ತುಕರೆಗಾಗಿ ಅಥವಾ ಹೆಚ್ಚಿನ ಮಾಹಿತಿಗಳಿಗಾಗಿ ಈ ಕೆಳಗಿನ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಮ್, ನಗರಸಭೆ ಅಥವಾ ತಾಲೂಕು ತಹಶೀಲ್ದಾರ್ ಕಚೇರಿಗೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ತುರ್ತುಸೇವೆಗೆ ಶುಲ್ಕರಹಿತ: 1077ದೂರವಾಣಿ ಸಂಖ್ಯೆ 0820-2574802
ತಹಶೀಲ್ದಾರ್ ಕಚೇರಿ ಸಹಾಯವಾಣಿ ಸಂಖ್ಯೆಉಡುಪಿ 0820-2520417
ಕುಂದಾಪುರ 08254-230357ಕಾರ್ಕಳ 08258-230201
ಕಾಪು 0820-2551444ಬ್ರಹ್ಮಾವರ 0820-2560494
ಬೈಂದೂರು 08254-251657ಹೆಬ್ರಿ 08253-250201
ಉಡುಪಿ ನಗರಸಭೆ 0820-2593366, 0820-2520306