ಹಾವೇರಿ ಜಿಲ್ಲೆಯ ವಿವಿಧೆಡೆ ತಂಪೆರೆದ ಮಳೆ

KannadaprabhaNewsNetwork |  
Published : May 12, 2024, 01:20 AM IST
11ಎಚ್‌ವಿಆರ್‌4 | Kannada Prabha

ಸಾರಾಂಶ

ಜಿಲ್ಲೆಯ ವಿವಿಧೆಡೆ ಶನಿವಾರ ಮಳೆಯಾಗಿದ್ದು, ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಮಳೆಯು ತಂಪೆರೆದಿದೆ.

ಹಾವೇರಿ: ಜಿಲ್ಲೆಯ ವಿವಿಧೆಡೆ ಶನಿವಾರ ಮಳೆಯಾಗಿದ್ದು, ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಮಳೆಯು ತಂಪೆರೆದಿದೆ.

ಹಾವೇರಿ ನಗರದಲ್ಲಿ ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆ ಸುಮಾರು ಅರ್ಧ ತಾಸು ಸುರಿದಿದೆ. ಗುಡುಗು, ಮಿಂಚು ಸಹಿತವಾಗಿ ಮಳೆಯಾಗಿದ್ದು, ಕೆಲ ಸಮಯ ವಿದ್ಯುತ್‌ ವ್ಯತ್ಯಯವಾಗಿದೆ. ಶಿಗ್ಗಾಂವಿ, ಬ್ಯಾಡಗಿ, ಹಾನಗಲ್ಲ ತಾಲೂಕಿನಲ್ಲೂ ಗಾಳಿ, ಗುಡುಗು ಸಹಿತವಾಗಿ ಸಾಧಾರಣ ಮಳೆಯಾಗಿದೆ. ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪು ನೀಡಿದೆ. ಕಳೆದ ಕೆಲವು ದಿನಗಳಿಂದ ತಾಪಮಾನದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ ಸೆಕೆ ತಾಳಲಾರದೇ ಜನತೆ ಕಂಗೆಟ್ಟಿದ್ದರು. ಕೆಲವು ಭಾಗಗಳಲ್ಲಿ ಮಳೆಯಾಗದಿದ್ದರೂ ತಂಪನೆಯ ವಾತಾವರಣ ಉಂಟಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ