ಮೂಲ್ಕಿ ತಾಲೂಕಿನಲ್ಲಿ ಬಿರುಸಿನ ಮಳೆ, ಕೆಲವೆಡೆ ಹಾನಿ

KannadaprabhaNewsNetwork |  
Published : Jun 12, 2024, 12:42 AM IST
ಮೂಲ್ಕಿ ತಾಲೂಕು ಬಿರುಸಿನ ಮಳೆ ಕೆಲವೆಡೆ ಹಾನಿ | Kannada Prabha

ಸಾರಾಂಶ

ಮೂಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಮಳೆಯಿಂದಾಗಿ ರಾಷ್ತ್ರೀಯ ಹೆದ್ದಾರಿ ಸೇರಿದಂತೆ ಒಳ ರಸ್ತೆಗಳಲ್ಲಿ ಕೂಡ ಮಳೆ ನೀರು ರಸ್ತೆಯಲ್ಲಿ ಹರಿದು ಸಂಚಾರಕ್ಕೆ ಸಮಸ್ಯೆಯಾಗಿದೆ.

ಕನ್ನಡಪ್ರಭ ವಾರ್ತೆ ಮೂಲ್ಕಿ

ಮೂಲ್ಕಿ ತಾಲೂಕಿನಾದ್ಯಂತ ಬಿರುಸಿನ ಮಳೆಯಾಗಿದ್ದು ಗಾಳಿ, ಮಳೆಗೆ ಕೆಲವೆಡೆ ಹಾನಿ ಸಂಭವಿಸಿದೆ. ಗಾಳಿಗೆ ಕುಬೆವೂರು ಶಿಮಂತೂರು ರಸ್ತೆಗೆ ಭಾರಿ ಗಾತ್ರದ ಮರ ಬಿದ್ದು ಸಂಚಾರ ವ್ಯತ್ಯಯ ಉಂಟಾಗಿದೆ. ಮರವು ವಿದ್ಯುತ್ ತಂತಿಯ ಮೇಲೆ ಬಿದ್ದು ಎರಡು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು ಸಮೀಪದಲ್ಲಿದ್ದ ಟ್ರಾನ್ಸ್‌ಫರ್ಮರ್‌ ಅಳವಡಿಸಿದ ವಿದ್ಯುತ್ ಕಂಬಕ್ಕೆ ಕೂಡ ಹಾನಿಯಾಗಿದ್ದು ಮೆಸ್ಕಾಂಗೆ ನಷ್ಟ ಸಂಭವಿಸಿದೆ.

ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು ಗುತ್ತಿಗೆದಾರರ ಮೂಲಕ ಮರವನ್ನು ಹಾಗೂ ಹಾನಿಗೀಡಾದ ವಿದ್ಯುತ್ ಕಂಬವನ್ನು ತೆರವುಗೊಳಿಸಲಾಗಿದೆ.

ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯ ಚಿತ್ರಾಪು ಎಣ್ಣೆ ಮಿಲ್ ಬಳಿ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ ವಾಲಿ ನಿಂತಿದ್ದು ಹೆಚ್ಚಿನ ಅಪಾಯ ತಪ್ಪಿದೆ. ಬಳಿಕ ದುರಸ್ತಿ ಪಡಿಸಲಾಗಿದೆ. ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯ ಚಿತ್ರಾಪು, ಮಾನಂಪಾಡಿ, ಬಪ್ಪನಾಡು ಸೇರಿದಂತೆ ಶಾಂಭವಿ ನದಿ ತೀರಗಳಲ್ಲಿ ಮಳೆಗೆ ನೀರು ಉಕ್ಕೇರುತ್ತಿದ್ದು ಎಚ್ಚರಿಕೆಯಿಂದ ಇರಲು ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಪಡುಪಣಂಬೂರು- ಚಿತ್ರಾಪು ರಸ್ತೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ.

ಮೂಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಮಳೆಯಿಂದಾಗಿ ರಾಷ್ತ್ರೀಯ ಹೆದ್ದಾರಿ ಸೇರಿದಂತೆ ಒಳ ರಸ್ತೆಗಳಲ್ಲಿ ಕೂಡ ಮಳೆ ನೀರು ರಸ್ತೆಯಲ್ಲಿ ಹರಿದು ಸಂಚಾರಕ್ಕೆ ಸಮಸ್ಯೆಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ
ಜಾಲಹಳ್ಳಿ ಕೆಳಸೇತುವೆ ನಿರ್ಮಾಣ ಸಂಬಂಧ ಶಾಸಕರ ಸಭೆ-ಮಿ. ಮುನಿ ಪ್ರಶ್ನೆಗೆ ಉತ್ತರಿಸಲ್ಲ: ಡಿಸಿಎಂ