ಉತ್ತರ ಕನ್ನಡದಲ್ಲಿ ಭಾರಿ ಮಳೆ : ಕೊಡಸಳ್ಳಿ ಬಳಿ ಗುಡ್ಡ ಕುಸಿತ

KannadaprabhaNewsNetwork |  
Published : Jul 03, 2025, 11:52 PM ISTUpdated : Jul 04, 2025, 01:48 PM IST
ಕೊಡಸಳ್ಳಿ ರಸ್ತೆಯ ಮೇಲೆ ಗುಡ್ಡ ಕುಸಿತ | Kannada Prabha

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ಕಾರವಾರ ತಾಲೂಕಿನ ಕದ್ರಾದಿಂದ ಕೊಡಸಳ್ಳಿ ಡ್ಯಾಂಗೆ ಹೋಗುವ ರಸ್ತೆಯ ಮೇಲೆ ಗುಡ್ಡ ಕುಸಿದು ಸಂಚಾರ ಸ್ಥಗಿತಗೊಂಡಿದೆ. ಈ ರಸ್ತೆಯಲ್ಲಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ಕಾರವಾರ ತಾಲೂಕಿನ ಕದ್ರಾದಿಂದ ಕೊಡಸಳ್ಳಿ ಡ್ಯಾಂಗೆ ಹೋಗುವ ರಸ್ತೆಯ ಮೇಲೆ ಗುಡ್ಡ ಕುಸಿದು ಸಂಚಾರ ಸ್ಥಗಿತಗೊಂಡಿದೆ. ಈ ರಸ್ತೆಯಲ್ಲಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಗುರುವಾರ ನಸುಕಿನಲ್ಲಿ ಕದ್ರಾದಿಂದ ಕೊಡಸಳ್ಳಿ ಅಣೆಕಟ್ಟೆಗೆ ತೆರಳುವ ರಸ್ತೆಯ ಮೇಲೆ ಗುಡ್ಡ ಕುಸಿದು ಸುಮಾರು 30 ಅಡಿ ಉದ್ದಕ್ಕೂ ಕಲ್ಲು- ಮಣ್ಣಿನ ರಾಶಿ ಹರಡಿದೆ. ಇದರಿಂದ ಸಂಚಾರ ಸ್ಥಗಿತಗೊಂಡಿದೆ. ಈ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಂಚಾರ ಸಾಧ್ಯವಾಗದೇ ಸುಳಗೇರಿ ಹಾಗೂ ಸುತ್ತಮುತ್ತಲಿನ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. ಕೊಡಸಳ್ಳಿ ಡ್ಯಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿಗೂ ಓಡಾಟಕ್ಕೆ ತೊಂದರೆ ಉಂಟಾಗಿದೆ.

ಭಟ್ಕಳದಲ್ಲಿ ಬೆಳಗ್ಗೆಯಿಂದ ಸಂಜೆ ತನಕ ಬಿರುಗಾಳಿಯೊಂದಿಗೆ ಭಾರಿ ಮಳೆ ಸುರಿದಿದೆ. ಕುಮಟಾ, ಹೊನ್ನಾವರ, ಅಂಕೋಲಾ, ಕಾರವಾರದಲ್ಲೂ ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ವ್ಯಾಪಕ ಮಳೆಯಾಗಿದೆ. ಸಂಜೆಯಾಗುತ್ತಿದ್ದಂತೆ ಮಳೆಯ ಪ್ರಮಾಣದಲ್ಲಿ ಇಳಿಮುಖವಾಗಿದೆ.

ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ, ಯಲ್ಲಾಪುರ, ಸಿದ್ದಾಪುರ, ಮುಂಡಗೋಡದಲ್ಲಿ ಭಾರಿ ಮಳೆಯಾಗಿದೆ. ಜೋಯಿಡಾ, ದಾಂಡೇಲಿಗಳಲ್ಲಿ ಸಾಧಾರಣ ಮಳೆಯಾಗಿದೆ. ಆದರೂ ಒಮ್ಮೊಮ್ಮೆ ಭಾರಿ ಮಳೆಯಾಗಿದೆ.

ಕೆಲ ದಿನಗಳಿಂದ ಮಳೆ ಇಳಿಮುಖವಾಗಿತ್ತು. ಗುರುವಾರ ನಸುಕಿನಿಂದಲೇ ದಟ್ಟವಾದ ಮೋಡ ಕವಿದ ವಾತಾವರಣದೊಂದಿಗೆ ಅಬ್ಬರದ ಮಳೆ ಆರಂಭವಾಯಿತು. ಗುರುವಾರ ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ