ಕನ್ನಡಪ್ರಭ ವಾರ್ತೆ ಮದ್ದೂರು
ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕದಳದ ತಂಡ ಮರದ ಅಡಿಯಲ್ಲಿ ಸಿಲುಕಿದ್ದ ಪತ್ನಿಯನ್ನು ಸುಮಾರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸುವ ಮೂಲಕ ಹೊರ ತೆಗೆದು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಗುಡಿಸಲಿನಲ್ಲಿ ಸಿಲುಕಿದ್ದ ಭಾಗ್ಯಮ್ಮ (58) ಎಂಬುವರೇ ಗಾಯಗೊಂಡವರಾಗಿದ್ದು, ಈಕೆಯ ಪತಿ ರಾಜೀವ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಜೀವ್ ಮತ್ತು ಭಾಗ್ಯಮ್ಮ ವಾಸಿಸುತ್ತಿದ್ದ ಗುಡಿಸಲಿನ ಮೇಲೆ ಮರ ಬಿದ್ದ ರಭಸಕ್ಕೆ ರೆಂಬೆ ಮುರಿದು ಭಾಗ್ಯಮ್ಮಳ ಎದೆಗೆ ತೀವ್ರವಾಗಿ ಗಾಯಗಳಾಗಿತ್ತು. ನಂತರ ಆಕೆಯನ್ನು ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಗ್ನಿ ಶಾಮಕದಳದ ಅಧಿಕಾರಿ ವಿ.ಕೃಷ್ಣಪ್ಪ, ಯಮನಪ್ಪ ಕರಿಕಟ್ಟೆ, ಮಾದೇಗೌಡ, ಉತ್ತಮ್, ರಾಜೀವ್, ಜಗದೀಶ್, ಬಾಬು ಅವರುಗಳು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದಾಗಿ ಗುಡಿಸಲಿನಲ್ಲಿದ್ದ ದಿನಬಳಕೆ ವಸ್ತುಗಳಿಗೆ ಹಾನಿಯಾಗಿದೆ.
ಸೋಮೇಗೌಡರ ಬೀದಿ, ಮುಸ್ಲಿಂ ಬ್ಲಾಕ್, ವಿವಿ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಕಂಬಗಳು ಧರೆಗುರುಳಿದಿವೆ. ಇದರಿಂದ 2 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ.