ಗಾಳಿ ಸಹಿತ ಬಿರುಸಿನ ಮಳೆ

KannadaprabhaNewsNetwork |  
Published : May 25, 2025, 03:02 AM ISTUpdated : May 25, 2025, 03:03 AM IST
ಧರೆಗೆ | Kannada Prabha

ಸಾರಾಂಶ

ಹೋಬಳಿ ವ್ಯಾಪ್ತಿ ಬಿರುಸಿನ ಮಳೆಯಾಗಿದೆ. ಹಲವೆಡೆ ವಿದ್ಯುತ್‌ ಕಡಿತ ಉಂಟಾಗಿದೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಹೋಬಳಿ ವ್ಯಾಪ್ತಿಯಲ್ಲಿ ಶನಿವಾರ ಬಿರುಸಿನ ಮಳೆಯಾಗಿದೆ. ನಡು ನಡುವೆ ಬಿಡುವು ಕೊಟ್ಟು ಗಾಳಿ ಸಹಿತ ಬಿರುಸಿನಿಂದ ಮಳೆ ಸುರಿಯಿತು.

ಅಲ್ಲಲ್ಲಿ ಮರದ ರೆಂಬೆಗಳು ಮುರಿದು ಬಿದ್ದ ಪರಿಣಾಮ ಹೋಬಳಿ ವ್ಯಾಪ್ತಿಯ ಹಲವೆಡೆ ವಿದ್ಯುತ್ ಕಡಿತ ಉಂಟಾಗಿದೆ. ಸಮೀಪದ ಕಕ್ಕಬೆಯ ನಾಲಾಡಿ ಗ್ರಾಮದ ಕೋಡಿಮನಿಯಂಡ ರಸ್ತೆಯಲ್ಲಿ ಮರ ಒಂದು ವಿದ್ಯುತ್ ತಂತಿಗಳ ಮೇಲೆ ಮುರಿದು ಬಿದ್ದ ಪರಿಣಾಮ ಮೂರು ಲೈಟ್ ಕಂಬಗಳು ಮುರಿದು ಬಿದ್ದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಹೊದ್ದೂರು ಗ್ರಾಮದ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬಗಳ ಮೇಲೆ ಮಳೆ ಗಾಳಿಗೆ ಮರ ಮುರಿದು ಬಿದ್ದು ಕೆಲವು ವಿದ್ಯುತ್ ಕಂಬಗಳು ಮುರಿದು ವಿದ್ಯುತ್ ಸಂಪರ್ಕಕ್ಕೆ ತೊಡಕಾಗಿದೆ.ಕಕ್ಕಬ್ಬೆ ಪ್ರೌಢ ಶಾಲೆಯ ಮುಖ್ಯದ್ವಾರದ ಬಳಿ ಹೈ ಟೆನ್ಶನ್ ತಂತಿಗಳ ಮೇಲೆ ಗಾಳಿ ಮಳೆಗೆ ಮರ ಮುರಿದು ಬಿದ್ದುವಿದ್ಯುತ್ ಸಂಪರ್ಕ ಕಡಿತಗೊಂಡು ಅಪಾಯ ಮಟ್ಟದಲ್ಲಿದ್ದು ಆತಂಕಕ್ಕೆ ಕಾರಣವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''