ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ / ರಾಯಚೂರು
ಮಿಥುನ ಮಾಸ ಆರಂಭವಾಗಿ ಈ ವರ್ಷ ಮಳೆ ಪ್ರಮಾಣ ಕಡಿಮೆಯಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ 50 ಸಾವಿರಕ್ಕೂ ಅಧಿಕ ಭಕ್ತರು ಶನಿವಾರ ರಾತ್ರಿಯೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ದೇವಸ್ಥಾನ ರಥಬೀದಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಜನಸಂದಣಿ ಕಂಡುಬಂತು. ದೇವರ ದರ್ಶನಕ್ಕಾಗಿ ಭಕ್ತರು ರಥಬೀದಿಯವರೆಗೂ ಸರತಿ ಸಾಲಿನಲ್ಲಿ ನಿಂತಿದ್ದು, ವಾಹನ ಪಾರ್ಕಿಂಗ್ಗೆ ಸ್ಥಳಾವಕಾಶವಿಲ್ಲದೆ ಪರದಾಡುಂತಾಯಿತು. ಇದೇ ವೇಳೆ ಸಾಮಾನ್ಯವಾಗಿ ನಿತ್ಯ 2000-3000 ಭಕ್ತರು ಭೇಟಿ ನೀಡುವ ಕಟೀಲು ದುರ್ಗಾಪರಮೇಶ್ವರಿ ದೇಗುಲಕ್ಕೆ ಭಾನುವಾರ 15000 ಭಕ್ತರು ಆಗಮಿಸಿದ್ದಾಗಿ ತಿಳಿದುಬಂದಿದೆ.
ರಾಘವೇಂದ್ರ ಸ್ವಾಮಿ ಮಠದ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ:ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಆಸಗಮಿಸುವ ಭಕ್ತರು ಮಠದ ಕಾರಿಡಾರ್ನಲ್ಲಿ ಮಲಗುತ್ತಾರೆ. ಆದರೆ, ವಾರದ ರಜೆ ಹಿನ್ನೆಲೆಯಲ್ಲಿ ರಾಜ್ಯ ಸೇರಿದಂತೆ ವಿವಿಧ ಪ್ರದೇಶಗಳಿಂದ ಕುಟುಂಬ ಸಮೇತರಾಗಿ ಸಾವಿರಾರು ಜನರು ಶನಿವಾರ ಆಗಮಿಸಿದ್ದರು. ಈ ವೇಳೆ ಭಾರಿ ಮಳೆಯಾಗಿದ್ದು, ಭಕ್ತರು ಪರದಾಟ ನಡೆಸಿದರು. ತಕ್ಷಣ ಶ್ರೀಮಠವು ಭಕ್ತರನ್ನು ಎಚ್ಆರ್ಬಿ ಕಲ್ಯಾಣ ಮಂಟಪಕ್ಕೆ ಕಳುಹಿಸಿಕೊಟ್ಟು ಮಲುಗಲು ವ್ಯವಸ್ಥೆಯನ್ನು ಕಲ್ಪಿಸಿತು. ಇಡೀ ರಾತ್ರಿ ಮಳೆಯಾಗಿದ್ದರಿಂದ ಭಕ್ತರು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಚಳಿಯಲ್ಲಿ ನಡುಗುವಂತಾಯಿತು. ನಿಯಮ ಉಲ್ಲಂಘನೆ: