ಕನ್ನಡಪ್ರಭ ವಾರ್ತೆ ಕಾರ್ಕಳ
ಅವರು ಹೆಬ್ರಿ ನಾರಾಯಣ ಗುರು ಸಭಾಭವನದಲ್ಲಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ವತಿಯಿಂದ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಭಂಡಾರಿಯವರ ಜೀವನ ಚರಿತ್ರೆ ಪುಸ್ತಕ ಬಿಡುಗಡೆಗೊಳಿಸಿ, ಭಂಡಾರಿಯವರು ಸರ್ವಧರ್ಮ ಸೌಹಾರ್ದತೆ ಪಾಲಿಸಿದ ರಾಜಕೀಯ ನಾಯಕ. ಅವರ ಮೌಲ್ಯಾಧಾರಿತ ಜೀವನ ಇಂದಿನ ಯುವಕರಿಗೆ ಪ್ರೇರಣೆಯಾಗಬೇಕು ಎಂದರು.ಶಾಸಕ ವಿ. ಸುನೀಲ್ ಕುಮಾರ್, ಗೋಪಾಲ ಭಂಡಾರಿ ಅವರ ಸರಳತೆ, ಪಕ್ಷ ನಿಷ್ಠೆ, ವ್ಯಕ್ತಿನಿಷ್ಠೆಯ ಬಗ್ಗೆ ಮಾತನಾಡಿದರು.
ಮಾಜಿ ಸಚಿವ ಅಭಯಚಂದ್ರ, ಸಹನಾ ಗ್ರೂಪ್ನ ಸುರೇಂದ್ರ ಶೆಟ್ಟಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ನ ಶುಭದರಾವ್, ಮುದ್ರಾಡಿ ಮಂಜುನಾಥ ಪೂಜಾರಿ, ಹೆಬ್ರಿ ಗ್ರಾ.ಪಂ. ಅಧ್ಯಕ್ಷ ತಾರನಾಥ ಬಂಗೇರ, ಮೊಳಹಳ್ಳಿ ದಿನೇಶ್, ಗೋಪಾಲ ಭಂಡಾರಿ ಅವರ ಪತ್ನಿ ಪ್ರಕಾಶಿನಿ ಭಂಡಾರಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್ ಮುನಿಯಾಲು, ದಿನೇಶ್ ಶೆಟ್ಟಿ ಹುತ್ತುರ್ಕೆ, ಎಸ್ಕೆಡಿಆರ್ಡಿಪಿ ಕಾರ್ಯನಿರ್ವಾಹಕಧಿಕಾರಿ ಲೀಲಾವತಿ, ಅಶೊಕ್ ಕೊಡವೂರು, ಜ್ಞಾನ ಸುಧಾ ಶಿಕ್ಷಣ ಸಂಸ್ಥೆಗೆಳ ಅಧ್ಯಕ್ಷ ಸುಧಾಕರ ಶೆಟ್ಟಿ, ಉದ್ಯಮಿಗಳಾದ ಪ್ರವೀಣ್ ಬಳ್ಳಾಲ್, ವಾದಿರಾಜ ಶೆಟ್ಟಿ, ನಾಗರಾಜಶೆಟ್ಟಿ ಉಪಸ್ಥಿತರಿದ್ದರು.
ನವೀನ್ ಅಡ್ಯಂತಾಯ ಸ್ವಾಗತಿಸಿದರು. ಪ್ರಕಾಶ್ ಪೂಜಾರಿ ಮಾತಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು.