ಹೆಬ್ರಿ ಸರ್ಕಾರಿ ಕಾಲೇಜ್‌: ಉನ್ನತಿ ತರಬೇತಿ ಸಮಾರೋಪ ಸಮಾರಂಭ

KannadaprabhaNewsNetwork |  
Published : Aug 24, 2026, 03:00 AM IST
ಉನ್ನತಿ ತರಬೇತಿ ಸಮಾರೋಪ ಸಮಾರಂಭ | Kannada Prabha

ಸಾರಾಂಶ

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 15 ದಿನಗಳ ‘ಉನ್ನತಿ’ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಆ. 21ರಂದು ನಡೆಯಿತು.

ಉಡುಪಿ: ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 15 ದಿನಗಳ ‘ಉನ್ನತಿ’ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಆ. 21ರಂದು ನಡೆಯಿತು.ತರಬೇತಿಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡು, ತರಬೇತಿಯಿಂದ ವೇದಿಕೆಯಲ್ಲಿ ಮಾತನಾಡುವ ಆತ್ಮವಿಶ್ವಾಸ, ಇಂಗ್ಲಿಷ್ ಭಾಷಾ ಕೌಶಲ್ಯ, ತಂಡವಾಗಿ ಕಾರ್ಯನಿರ್ವಹಿಸುವ ಮನೋಭಾವ, ಸಮಯ ಮತ್ತು ಒತ್ತಡ ನಿರ್ವಹಣೆಯ ಕೌಶಲ್ಯಗಳು ಅಭಿವೃದ್ಧಿಯಾಗಿವೆ. ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ವಿದ್ಯಾಧರ ಹೆಗ್ಡೆ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ತರಬೇತುದಾರ ಗುರುಪ್ರಸಾದ್ ಭಟ್ ಅವರ ಕೊಡುಗೆಯನ್ನು ಶ್ಲಾಘಿಸಿದರು.

ಈ ಸಂದರ್ಭ ತರಬೇತುದಾರ ಗುರುಪ್ರಸಾದ್ ಭಟ್ ಅವರನ್ನು ಸನ್ಮಾನಿಸಲಾಯಿತು.

ಐಕ್ಯೂಎಸಿ ಸಂಯೋಜಕ ಡಾ. ಗಣೇಶ ಎಸ್., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಷ್ಮಾ ರಾವ್, ಪ್ಲೇಸ್‌ಮೆಂಟ್ ಸೆಲ್ ಸಂಯೋಜಕ ಡಾ. ಮಾವಿ ಮಿರಾಂಡಾ ಹಾಗೂ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು. ವರ್ಷಿತಾ ಶೆಟ್ಟಿ ನಿರೂಪಿಸಿದರು. ಸಂಕೇತ್ ಶೆಟ್ಟಿ ಸ್ವಾಗತಿಸಿ, ಶ್ರುತಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಕೆಶಿ ರಿಯಲ್‌ ಎಸ್ಟೇಟ್‌ ಮುಖ್ಯಮಂತ್ರಿ
ಮನಸೆಳೆದ ತಹಸೀಲ್ದಾರ ಕಚೇರಿ ಸಿಬ್ಬಂದಿ ಹಸಿರು ಪ್ರೇಮ