ಹೆಗಡೆ, ಸಿದ್ದು ಯಾರೂ ಏಕವಚನ ಬಳಸಬಾರದು: ರೇಣುಕಾಚಾರ್ಯ

KannadaprabhaNewsNetwork |  
Published : Jan 16, 2024, 01:47 AM IST
15ಕೆಡಿವಿಜಿ4-ದಾವಣಗೆರೆ ತಾ. ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ ನಿವಾಸಕ್ಕೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಭೇಟಿ ನೀಡಿದ್ದರು. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಲೋಕಿಕೆರೆ ನಾಗರಾಜ, ಮಾಡಾಳ ಮಲ್ಲಿಕಾರ್ಜುನ, ಡಾ.ಟಿ.ಜಿ.ರವಿಕುಮಾರ ಇತರರು ಇದ್ದರು.  | Kannada Prabha

ಸಾರಾಂಶ

ಬೆಳಗಾವಿ, ಹಾವೇರಿ ಘಟನೆಗಳು ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲವೆಂಬುದು ಸಾಬೀತುಪಡಿಸಿವೆ. ಹಾನಗಲ್‌ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬೆಳಗಾವಿ ನಂತರ ಹಾನಗಲ್ ಘಟನೆ ಮರುಕಳಿಸಿದೆ. ಇಂತಹ ದುಷ್ಕರ್ಮಿಗಳ ಎನ್‌ಕೌಂಟರ್ ಮಾಡಿ, ಬಿಸಾಡಬೇಕು. ಗಲ್ಲಿಗೇರಿಸಬೇಕು.

ಆರೋಗ್ಯಕರ ಟೀಕೆ, ಟಿಪ್ಪಣಿ ಇರಲಿ: ಮಾಜಿ ಸಚಿವ ಕಿವಿಮಾತು

ಕನ್ನಡಪ್ರಭ ವಾರ್ತೆ ದಾವಣಗೆರೆ

ಅನಂತಕುಮಾರ ಹೆಗಡೆ ಏಕವಚನ ಬಳಸಿದ್ದನ್ನು ನಾನು ಒಪ್ಪಲ್ಲ. ಹಾಗೆಂದು ಸಿಎಂ ಸಿದ್ದರಾಮಯ್ಯ ಹಿಂದೆ ಏಕವಚನ ಬಳಸಿದ್ದನ್ನೂ ಒಪ್ಪಲ್ಲ. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಇದೇ ಸಿದ್ದರಾಮಯ್ಯ ಏಕವಚನದಲ್ಲೇ ಮಾತನಾಡಿದ್ದರು. ಯಾರೂ ಹೀಗೆ ಮಾತನಾಡಬಾರದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿಗೆ ಒಂದು ಸಿದ್ಧಾಂತವಿದೆ. ಪಕ್ಷವು ನಮಗೆ ಸಂಸ್ಕಾರ ಕಲಿಸಿದೆ. ಅನಂತಕುಮಾರ ಹೆಗಡೆ ಆಗಲಿ, ಸಿದ್ದರಾಮಯ್ಯನವರೇ ಆಗಿರಲಿ ಯಾರೇ ಆಗಿದ್ದರೂ ಯಾರ ಬಗ್ಗೆಯೂ ಏಕವಚನದಲ್ಲಿ ಮಾತನಾಡಬಾರದು. ಆರೋಗ್ಯಕರ ಟೀಕೆ, ಟಿಪ್ಪಣಿ ಇರಲಿ ಎಂದು ಸಲಹೆ ನೀಡಿದರು.

ದುಷ್ಕರ್ಮಿಗಳ ಎನ್‌ಕೌಂಟರ್‌ ಮಾಡಿ:

ಬೆಳಗಾವಿ, ಹಾವೇರಿ ಘಟನೆಗಳು ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲವೆಂಬುದು ಸಾಬೀತುಪಡಿಸಿವೆ. ಹಾನಗಲ್‌ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬೆಳಗಾವಿ ನಂತರ ಹಾನಗಲ್ ಘಟನೆ ಮರುಕಳಿಸಿದೆ. ಇಂತಹ ದುಷ್ಕರ್ಮಿಗಳ ಎನ್‌ಕೌಂಟರ್ ಮಾಡಿ, ಬಿಸಾಡಬೇಕು. ಗಲ್ಲಿಗೇರಿಸಬೇಕು ಎಂದು ಹರಿಹಾಯ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ, ಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾನಗಲ್, ಬೆಳಗಾವಿಗೆ ಭೇಟಿ ನೀಡಿ, ಸಂತ್ರಸ್ಥರಿಗೆ ಧೈರ್ಯ, ಸಾಂತ್ವನ ಹೇಳಬೇಕು. ಮಹಿಳೆಯ ಮೇಲೆ ಗುಂಪು ಅತ್ಯಾಚಾರ ಎಸಗಿದ ದುಷ್ಕರ್ಮಿಗಳನ್ನು ಎನ್‌ಕೌಂಟರ್ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಮುಂದೆ ಇಂತಹ ಘಟನೆಗಳು ಮರು ಕಳಿಸದಂತೆ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆನಂದಪುರ : ಮರದ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವು
ಅಪಘಾತದಿಂದ ಕೆಲ್ಸ ಕಳ್ಕೊಂಡ ಮಹಿಳೆ ನೆರವಿಗೆ ಕೋರ್ಟ್‌