ಮಾರಿಜಾತ್ರೆಯಲ್ಲಿ ಹೆಲಿಟೂರಿಸಂ, ಬೋಟಿಂಗ್ ವ್ಯವಸ್ಥೆ: ಶಾಸಕ ಬೇಳೂರು

KannadaprabhaNewsNetwork |  
Published : Jan 11, 2026, 01:30 AM IST
ಕ್ಯಾಲೆಂಡರ್ ಬಿಡುಗಡೆ ಮಾಡಿದರು | Kannada Prabha

ಸಾರಾಂಶ

ಮಾರಿಕಾಂಬಾ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ ಹಾಗೂ ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಕನ್ನಡಪ್ರಭ ವಾರ್ತೆ ಸಾಗರ

ಮಾರಿಕಾಂಬಾ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ ಹಾಗೂ ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಲ್ಲಿನ ಮಾರಿಕಾಂಬಾ ದೇವಸ್ಥಾನದಲ್ಲಿ ಶನಿವಾರ ಮಾರಿಕಾಂಬಾ ಜಾತ್ರೆ ಅಂಗವಾಗಿ ಹೊರತರಲಾಗಿರುವ ಮೂರು ವರ್ಷದ ಮಾಹಿತಿಯನ್ನು ಒಳಗೊಂಡ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಜಾತ್ರೆಯಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ಜೊತೆಗೆ ಇಂತಹ ಜನಾಕರ್ಷಕ ಚಟುವಟಿಕೆಗಳನ್ನು ಆಯೋಜಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಜಾತ್ರೆ ತಯಾರಿ ಭರದಿಂದ ನಡೆಯುತ್ತಿದ್ದು, ಎಲ್ಲ ಸಮಿತಿಗಳು ತಮ್ಮ ಕೆಲಸವನ್ನು ನಿರ್ವಹಿಸಿ ಜಾತ್ರೆ ಯಶಸ್ಸಿಗೆ ಟೊಂಕ ಕಟ್ಟಿ ಕೆಲಸ ಮಾಡುತ್ತಿವೆ. ಜಾತ್ರೆ ಹಿನ್ನೆಲೆಯಲ್ಲಿ ಸರ್ಕಾರಿ ಕಟ್ಟಡ ಹಾಗೂ ಖಾಸಗಿ ಕಟ್ಟಡಗಳ ಕಾಂಪೌಂಡ್‌ಗಳಿಗೆ ಸುಣ್ಣಬಣ್ಣ ಮಾಡಲಾಗುತ್ತಿದೆ. ಸಾರ್ವಜನಿಕರು ಸಹ ನಮ್ಮೊಂದಿಗೆ ಎಲ್ಲ ಕೆಲಸಗಳಿಗೆ ಸಹಕಾರ ನೀಡುತ್ತಿದ್ದಾರೆ. ಊರು ಪ್ರವೇಶ ಮಾಡುವ ಕಡೆಗಳಲ್ಲಿ ಬೃಹತ್ ಸ್ವಾಗತ ಕಮಾನುಗಳನ್ನು ಹಾಕುವ ನಿಟ್ಟಿನಲ್ಲಿ ಗಮನ ಹರಿಸಿದೆ ಎಂದು ಹೇಳಿದರು.

ನಗರಸಭೆ ವ್ಯಾಪ್ತಿಯಲ್ಲಿ ತುರ್ತು ರಸ್ತೆ ಕಾಮಗಾರಿಗಳು ನಡೆಯುತ್ತಿದೆ. ಪಾರ್ಕಿಂಗ್ ವ್ಯವಸ್ಥೆಗಾಗಿ ಕೆಲವು ಜಾಗಗಳನ್ನು ಗುರುತಿಸಿದ್ದು ಅವುಗಳನ್ನು ಅಭಿವೃದ್ದಿಪಡಿಸಿ ವಾಹನ ನಿಲ್ಲಿಸಲು ಸೌಲಭ್ಯ ಒದಗಿಸಲಾಗುತ್ತದೆ. ಜನರಿಗೆ ಹಾಗೂ ಹೊರ ಊರುಗಳಿಂದ ಬರುವ ಭಕ್ತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಸಮಿತಿಯ ನಾಗೇಂದ್ರ ಕೆ.ಎನ್., ಸುಂದರ ಸಿಂಗ್, ಗಿರಿಧರ ರಾವ್, ನಾಗೇಂದ್ರ ಕುಮಟಾ, ತಾರಾಮೂರ್ತಿ, ರವಿನಾಯ್ಡು, ಟಿ.ವಿ.ಪಾಂಡುರಂಗ, ಎಚ್.ಕೆ.ನಾಗಪ್ಪ, ಹೇಮಂತ್, ಗಣೇಶ್ ಶೇಟ್ ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರ ಜಾತ್ರೆಗೆ ರಾಜ್ಯದಿಂದ 25 ಸಾವಿರ ಭಕ್ತರು
ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗಲಿ: ಸಮ್ಮೇಳನಾಧ್ಯಕ್ಷ ಸುರೇಶ್ ಸಂಸ್ಕೃತಿ