ಕನ್ನಡಪ್ರಭ ವಾರ್ತೆ ಸಾಗರ
ಇಲ್ಲಿನ ಮಾರಿಕಾಂಬಾ ದೇವಸ್ಥಾನದಲ್ಲಿ ಶನಿವಾರ ಮಾರಿಕಾಂಬಾ ಜಾತ್ರೆ ಅಂಗವಾಗಿ ಹೊರತರಲಾಗಿರುವ ಮೂರು ವರ್ಷದ ಮಾಹಿತಿಯನ್ನು ಒಳಗೊಂಡ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಜಾತ್ರೆಯಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ಜೊತೆಗೆ ಇಂತಹ ಜನಾಕರ್ಷಕ ಚಟುವಟಿಕೆಗಳನ್ನು ಆಯೋಜಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಜಾತ್ರೆ ತಯಾರಿ ಭರದಿಂದ ನಡೆಯುತ್ತಿದ್ದು, ಎಲ್ಲ ಸಮಿತಿಗಳು ತಮ್ಮ ಕೆಲಸವನ್ನು ನಿರ್ವಹಿಸಿ ಜಾತ್ರೆ ಯಶಸ್ಸಿಗೆ ಟೊಂಕ ಕಟ್ಟಿ ಕೆಲಸ ಮಾಡುತ್ತಿವೆ. ಜಾತ್ರೆ ಹಿನ್ನೆಲೆಯಲ್ಲಿ ಸರ್ಕಾರಿ ಕಟ್ಟಡ ಹಾಗೂ ಖಾಸಗಿ ಕಟ್ಟಡಗಳ ಕಾಂಪೌಂಡ್ಗಳಿಗೆ ಸುಣ್ಣಬಣ್ಣ ಮಾಡಲಾಗುತ್ತಿದೆ. ಸಾರ್ವಜನಿಕರು ಸಹ ನಮ್ಮೊಂದಿಗೆ ಎಲ್ಲ ಕೆಲಸಗಳಿಗೆ ಸಹಕಾರ ನೀಡುತ್ತಿದ್ದಾರೆ. ಊರು ಪ್ರವೇಶ ಮಾಡುವ ಕಡೆಗಳಲ್ಲಿ ಬೃಹತ್ ಸ್ವಾಗತ ಕಮಾನುಗಳನ್ನು ಹಾಕುವ ನಿಟ್ಟಿನಲ್ಲಿ ಗಮನ ಹರಿಸಿದೆ ಎಂದು ಹೇಳಿದರು.ನಗರಸಭೆ ವ್ಯಾಪ್ತಿಯಲ್ಲಿ ತುರ್ತು ರಸ್ತೆ ಕಾಮಗಾರಿಗಳು ನಡೆಯುತ್ತಿದೆ. ಪಾರ್ಕಿಂಗ್ ವ್ಯವಸ್ಥೆಗಾಗಿ ಕೆಲವು ಜಾಗಗಳನ್ನು ಗುರುತಿಸಿದ್ದು ಅವುಗಳನ್ನು ಅಭಿವೃದ್ದಿಪಡಿಸಿ ವಾಹನ ನಿಲ್ಲಿಸಲು ಸೌಲಭ್ಯ ಒದಗಿಸಲಾಗುತ್ತದೆ. ಜನರಿಗೆ ಹಾಗೂ ಹೊರ ಊರುಗಳಿಂದ ಬರುವ ಭಕ್ತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಸಮಿತಿಯ ನಾಗೇಂದ್ರ ಕೆ.ಎನ್., ಸುಂದರ ಸಿಂಗ್, ಗಿರಿಧರ ರಾವ್, ನಾಗೇಂದ್ರ ಕುಮಟಾ, ತಾರಾಮೂರ್ತಿ, ರವಿನಾಯ್ಡು, ಟಿ.ವಿ.ಪಾಂಡುರಂಗ, ಎಚ್.ಕೆ.ನಾಗಪ್ಪ, ಹೇಮಂತ್, ಗಣೇಶ್ ಶೇಟ್ ಇನ್ನಿತರರು ಹಾಜರಿದ್ದರು.