ಸವಾರರಿಗೆ ಗುಲಾಬಿ ಹೂವು ನೀಡಿ ಹೆಲ್ಮೆಟ್ ಜಾಗೃತಿ

KannadaprabhaNewsNetwork |  
Published : Nov 28, 2025, 02:45 AM IST
೨೫ ವೈಎಲ್‌ಬಿ ೦೪ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ಪೊಲೀಸ್ ಠಾಣೆಯಿಂದ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಓಡಿಸುವವರಿಗೆ ಠಾಣೆಯ ಪಿಎಸ್ಐ ಎಸ್.ಪಿ.ನಾಯ್ಕ ಹಾಗೂ ಸಿಬ್ಬಂದಿಯವರು ಗುಲಾಬಿ ಹೂವು ನೀಡಿ ವಿನೂತನ ಜಾಗೃತಿ ಮೂಡಿಸಿದರು.================= | Kannada Prabha

ಸಾರಾಂಶ

ಪ್ರತಿಯೊಬ್ಬ ಬೈಕ್ ಸವಾರರು ರಸ್ತೆ ನಿಯಮ ಪಾಲಿಸುವ ಜತೆಗೆ ಜೀವ ರಕ್ಷಕವಾದ ಹೆಲ್ಮೆಟ್‌ನ್ನು ಕಡ್ಡಾಯವಗಾಗಿ ಉಪಯೋಗಿಸಬೇಕು

ಯಲಬುರ್ಗಾ: ತಾಲೂಕಿನ ಬೇವೂರು ಗ್ರಾಮದಲ್ಲಿ ಪೊಲೀಸ್ ಠಾಣೆ ವತಿಯಿಂದ ಮಂಗಳವಾರ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಓಡಿಸುವವರಿಗೆ ಠಾಣೆಯ ಪಿಎಸ್ಐ ಎಸ್.ಪಿ.ನಾಯ್ಕ ಹಾಗೂ ಸಿಬ್ಬಂದಿಯವರು ಗುಲಾಬಿ ಹೂವು ನೀಡಿ ವಿನೂತನ ಜಾಗೃತಿ ಮೂಡಿಸಿದರು.

ಈ ವೇಳೆ ಪಿಎಸ್ಐ ಎಸ್.ಪಿ.ನಾಯ್ಕ ಮಾತನಾಡಿ,ಪ್ರತಿಯೊಬ್ಬ ಬೈಕ್ ಸವಾರರು ರಸ್ತೆ ನಿಯಮ ಪಾಲಿಸುವ ಜತೆಗೆ ಜೀವ ರಕ್ಷಕವಾದ ಹೆಲ್ಮೆಟ್‌ನ್ನು ಕಡ್ಡಾಯವಗಾಗಿ ಉಪಯೋಗಿಸಬೇಕು.

ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಸವಾರಿ ಮಾಡುತ್ತಿದ್ದು, ಅಪಘಾತ ಸಂಭವಿಸಿದಾಗ ತಲೆಗೆ ಪೆಟ್ಟು ಬಿದ್ದು ಅನೇಕರು ಪ್ರಾಣ ಕಳೆದುಕೊಂಡ ಉದಾಹರಣೆ ಇವೆ. ಅದನ್ನು ತಪ್ಪಿಸುವ ಸಲುವಾಗಿ ಸಾರ್ವಜನಿಕರಿಗೆ ಹೆಲ್ಮೆಟ್ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ನಿಮ್ಮನ್ನು ನಂಬಿದ ಕುಟುಂಬದವರ ಸಲುವಾಗಿಯಾದರೂ ಹೆಲ್ಮೆಟ್ ಧರಿಸಬೇಕು. ಎಲ್ಲರೂ ಸಂಚಾರ ನಿಯಮ ಅನುಸರಿಸುವ ಜತೆಗೆ ಕಾನೂನು ನಿಯಮ ಪಾಲಿಸಬೇಕು. ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುವವರಿಗೆ ದಂಡ ಹಾಕಲಾಗುವುದು ಎಂದರು.

ಈ ಸಂದರ್ಭ ಎಎಸ್‌ಐ ಶರಣಪ್ಪ, ಪೇದೆಗಳಾದ ಶಂಕ್ರಯ್ಯ, ಗವಿಸಿದ್ದಯ್ಯ, ಬಸವರಾಜ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಠದಲ್ಲಿ ಗುರುಶಾಂತವೀರ ಶ್ರೀಗಳ ಅಂತ್ಯಕ್ರಿಯೆ
ಸಿದ್ಧೇಶ್ವರ ಜಾತ್ರೆಯಲ್ಲಿ ಭಾರ ಎತ್ತುವ ಸ್ಪರ್ಧೆ