ಹೆಲ್ಮೆಟ್‌ ಕಡ್ಡಾಯ: ಬೀದಿಬದಿ ಹೆಲ್ಮೆಟ್‌ ಪ್ಯಾಪಾರ ಜೋರು

KannadaprabhaNewsNetwork |  
Published : Dec 15, 2025, 02:15 AM IST
     ಸಿಕೆಬಿ-1 ನಗರದ ಬಿಬಿ ರಸ್ತೆಯ ಬದಿಯಲ್ಲಿ ಹೆಲ್ಮೆಟ್ ಮಾಡುತ್ತಿರುವುದು | Kannada Prabha

ಸಾರಾಂಶ

ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಮೈಸೂರು, ದೆಹಲಿ, ರಾಜಸ್ಥಾನ, ಬಿಹಾರ ಮೂಲದ ವ್ಯಾಪಾರಿಗಳು ಹೆಲ್ಮೆಟ್‌ಗಳನ್ನು ಇಟ್ಟುಕೊಂಡು ವ್ಯಾಪಾರಕ್ಕಿಳಿದಿದ್ದಾರೆ. ಆಕರ್ಷಕವಾದ ಬಣ್ಣಗಳ ಹೆಲ್ಮೆಟ್‌ಗಳನ್ನು 100 ರಿಂದ 500 ರುಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಇವುಗಳು ನೋಡಲು ಸುಂದರವಾಗಿದ್ದು, ಹಿಂಬದಿಯಲ್ಲಿ ಐಎಸ್‌ಐ ಮಾರ್ಕ್‌ ಸಹ ಇದೆ. ಆದರೆ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗಿವೆ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಡಿ.12 ರಿಂದ ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿರುವ ಬೆನ್ನಲ್ಲೇ ಸಂಚಾರಿ ಪೊಲೀಸರು ದಂಡಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಅನ್ಯ ರಾಜ್ಯಗಳ ಹೆಲ್ಮೆಟ್ ವ್ಯಾಪಾರಿಗಳು ಬೀದಿ ಬದಿ ಹೆಲ್ಮೆಟ್‌ ಮಾರಾಟ ಆರಂಭಿಸಿದ್ದಾರೆ. ನಾನಾ ನಮೂನೆಯ ಹೆಲ್ಮೆಟ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ನ್ಯಾಯಾಲಯ ಮತ್ತು ಕಾನೂನು ಸೇವಾ ಆಯೋಗದ ಜಂಟಿ ಸಹಯೋಗದಲ್ಲಿ ನಾಗರಿಕರ ಸುರಕ್ಷಾ ದೃಷ್ಟಿಯಿಂದ ಜಿಲ್ಲಾಡಳಿತ ಹೆಲ್ಮೆಟ್ ಕಡ್ಡಾಯ ನಿಯಮ ಜಾರಿ ಮಾಡಿದೆ.ಹೆಲ್ಮೆಟ್‌ ಧರಿಸದೆ ಸಂಚಿಸುವ ದ್ವಿಚಕ್ರ ವಾಹನ ಸವಾರರಿಗೆ ಪೊಲೀಸರು ದಂಡಾಸ್ತ್ರ ಪ್ರಯೋಗ ಆರಂಭಿಸಿದ್ದಾರೆ. ಶುಕ್ರವಾರ ಮತ್ತು ಶನಿವಾರ ಎರಡೇ ದಿನದಲ್ಲಿ ಜಿಲ್ಲೆಯಲ್ಲಿ 2445 ಪ್ರಕರಣ ದಾಖಲಿಸಿ, 12,23,300 ರು.ಗಳ ದಂಡ ವಸೂಲಿ ಮಾಡಿದ್ದಾರೆ.

ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಮೈಸೂರು, ದೆಹಲಿ, ರಾಜಸ್ಥಾನ, ಬಿಹಾರ ಮೂಲದ ವ್ಯಾಪಾರಿಗಳು ಹೆಲ್ಮೆಟ್‌ಗಳನ್ನು ಇಟ್ಟುಕೊಂಡು ವ್ಯಾಪಾರಕ್ಕಿಳಿದಿದ್ದಾರೆ. ಆಕರ್ಷಕವಾದ ಬಣ್ಣಗಳ ಹೆಲ್ಮೆಟ್‌ಗಳನ್ನು 100 ರಿಂದ 500 ರುಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಇವುಗಳು ನೋಡಲು ಸುಂದರವಾಗಿದ್ದು, ಹಿಂಬದಿಯಲ್ಲಿ ಐಎಸ್‌ಐ ಮಾರ್ಕ್‌ ಸಹ ಇದೆ. ಆದರೆ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗಿವೆ.

ಇಂತಹ ಕಡಿಮೆ ಬೆಲೆಯ ಹೆಲ್ಮೆಟ್‌ಗಳನ್ನು ಧರಿಸುವುದು ಸುರಕ್ಷಿತವಲ್ಲ. ಒಮ್ಮೆ ಗುಣಮಟ್ಟದ ಜೀವವುಳಿಸುವ ಗಟ್ಟಿಮುಟ್ಟಾದ ಹೆಲ್ಮೆಟ್‌ ಧರಿಸುವುದು ಉತ್ತಮ ಎಂಬುದು ಪೊಲೀಸ್ ಅಧಿಕಾರಿಗಳ ಅಭಿಪ್ರಾಯ. ಹೆಲ್ಮಟ್‌ ಧರಿಸದ ಕಾರಣ ಜಿಲ್ಲೆಯಲ್ಲಿ ಒಂದು ವರ್ಷದಲ್ಲಿ ನಡೆದಿರುವ ರಸ್ತೆ ಅಪಘಾತಗಳಲ್ಲಿ ತಲೆಗೆ ಪೆಟ್ಟಾಗಿ 350 ಹೆಚ್ಚಿನ ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಹಾಗೂ ಸುಪ್ರಿಂ ಕೋರ್ಟ್‌ನ ಆದೇಶದ ಮೇರೆಗೆ ಹೆಲ್ಮೆಟ್ ಕಡ್ಡಾಯ ನಿಯಮ ಜಾರಿ ಮಾಡಿದೆ. ಆಧರೆ ಕೇವಲ ದಂಡವನ್ನು ತಪ್ಪಿಸಿಕೊಳ್ಳುವ ಉದ್ದೇಶದಿಂದ ಸವಾರರು ಕಡಿಮೆ ಬೆಲೆಗೆ ಕಳಪೆ ಗುಣಮಟ್ಟದ ಹೆಲ್ಮೆಟ್‌ ಖರೀದಿಸುತ್ತಿರುವುದು ಸರಿಯಲ್ಲ. ಹೆಲ್ಮೆಟ್ ಜಾಗೃತಿ ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿರುವುದು ಸುಳ್ಳಲ್ಲ. ಕಾನೂನು ಪ್ರಕಾರ ಪೊಲೀಸರು ಹೆಲ್ಮೆಟ್ ಧರಿಸದ ಬೈಕ್‌ ಸವಾರರನ್ನು ಹಿಡಿದು ಮೊದಲಿಗೆ 500 ರೂ ದಂಡ ಹಾಕುತ್ತಿದ್ದಾರೆ. ಎರಡನೇ ಬಾರಿ ಸಿಕ್ಕಿಬಿದ್ದರೆ 1000 ರುಪಾಯಿ ದಂಡ, ಮೂರನೇ ಬಾರಿ ಮುಂದುವರೆದರೆ ಡಿಎಲ್ ರದ್ದು ಮಾಡಲು ಮುಂದಾಗಿದ್ದಾರೆ.

ಅಪ್ರಾಪ್ತರಿಗೆ ದ್ವಿಚಕ್ರವಾಹನಗಳನ್ನು ಓಡಿಸಲು ಅವಕಾಶ ನೀಡದಂತೆ ಪೋಷಕರಿಗೆ ಪೊಲೀಸ್‌ ಇಲಾಖೆ ಸೂಚಿಸಿದೆ. ಒಂದು ವೇಳೆ ಅಪ್ರಾಪ್ತರು ಸಿಕ್ಕಿಬಿದ್ದರೆ ಪೋಷಕರು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ
ಮಡಿಕೇರಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ