ಅಭಿವೃದ್ಧಿಗೆ ಬಿಜೆಪಿಗೆ ಸಹಕರಿಸಿ: ಜಗನ್ನಾಥಗೌಡ

KannadaprabhaNewsNetwork |  
Published : Oct 28, 2024, 01:23 AM ISTUpdated : Oct 28, 2024, 01:24 AM IST
ಕೆ ಕೆ ಪಿ ಸುದ್ದಿ 02:ತಾಲೂಕಿನ ಕೋಡಿಹಳ್ಳಿ ಅರ್ಜನಹಳ್ಳಿ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ  ಬಿಜೆಪಿ ಸದಸ್ಯತ ನೊಂದಣಿ ಅಭಿಯಾನ ಕ್ಕೆ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ್‌ ಗೌಡ ಚಾಲನೆ ನೀಡಿದರು.  | Kannada Prabha

ಸಾರಾಂಶ

ಕನಕಪುರ: ದೇಶದ ಭದ್ರತೆ ಮತ್ತು ಸಮಗ್ರ ಅಭಿವೃದ್ಧಿಗೆ ಯುವಕರು ಬಿಜೆಪಿ ಜೊತೆಗೆ ಕೈಜೋಡಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ್‌ಗೌಡ ಮನವಿ ಮಾಡಿದರು.

ಕನಕಪುರ: ದೇಶದ ಭದ್ರತೆ ಮತ್ತು ಸಮಗ್ರ ಅಭಿವೃದ್ಧಿಗೆ ಯುವಕರು ಬಿಜೆಪಿ ಜೊತೆಗೆ ಕೈಜೋಡಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ್‌ಗೌಡ ಮನವಿ ಮಾಡಿದರು.

ತಾಲೂಕಿನ ಬನ್ನಿಮುಕ್ಕೋಡ್ಲು ಪಂಚಾಯ್ತಿ ವ್ಯಾಪ್ತಿಯ ಅರ್ಜನಹಳ್ಳಿ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದು ದೇಶದ ಭದ್ರತೆ ಜೊತೆಗೆ ಅಭಿವೃದ್ಧಿ ಪಥದತ್ತ ಕೊಂಡೊಯ್ಯತ್ತಿದೆ. ಮೋದಿ ಅವರ ಕಾರ್ಯ ವೈಖರಿಗೆ ದೇಶದ ಜನ ಮೂರನೇ ಅವಧಿಗೂ ಅಧಿಕಾರ ಕೊಟ್ಟಿರುವುದೇ ಸಾಕ್ಷಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಇನ್ನು ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದಲ್ಲೇ ಮೂರನೇ ಆರ್ಥಿಕ ದೇಶವನ್ನಾಗಿಸಲು ದೃಢ ಸಂಕಲ್ಪ ಮಾಡಿದ್ದಾರೆ. ಹಾಗಾಗಿ ಪ್ರಜ್ಞಾವಂತ ಯುವಕರು ಬಿಜೆಪಿಯ ಸದಸ್ಯತ್ವ ಪಡೆದು ಮೋದಿ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.

ದೇಶದಲ್ಲಿ ಬಿಜೆಪಿ ಅಭಿವೃದ್ಧಿ ಮೆಚ್ಚಿ ಜನರು ಸ್ವಯಂ ಪ್ರೇರಿತರಾಗಿ ಸದಸ್ಯತ್ವ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ದೇಶದ ಜನರು ಬಿಜೆಪಿ ಪರ ಒಲವು ತೋರಿರುವುದು ವಿರೋಧಿಗಳಿಗೆ ನಡುಕ ಶುರುವಾಗಿದೆ. ಪಕ್ಷ ಹಾಗೂನಾಯಕರ ಮೇಲೆ ಇಲ್ಲ- ಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಅವರ ಹತಾಶ ಭಾವನೆ ತೋರಿಸುತ್ತದೆ ಎಂದರು.

ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ತಾಲೂಕಿನಲ್ಲಿ ಸದಸ್ಯತ್ವ ಅಭಿಯಾನದ ಮೂಲಕ ಯುವಕರಿಗೆ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಬರುವ ಮುಖಂಡರನ್ನು ನೋಂದಣಿ ಮಾಡಿಕೊಂಡು ಅವರಿಗೆ ಜವಾಬ್ದಾರಿ ಕೊಟ್ಟು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವುದೇ ನಮ್ಮ ಉದ್ದೇಶ ಎಂದರು.

ಕೆ ಕೆ ಪಿ ಸುದ್ದಿ 02:

ಕನಕಪುರ ತಾಲೂಕಿನ ಅರ್ಜನಹಳ್ಳಿಯಲ್ಲಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ್‌ ಗೌಡ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ