ಕನ್ನಡಪ್ರಭವಾರ್ತೆವಿರಾಜಪೇಟೆ
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕರುನಾಡ ಸಂಭ್ರಮ 24 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಭಿತ್ತಿ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಪಂಪ, ರನ್ನ, ಬಸವಣ್ಣ, ಶರೀಫ, ಅಲ್ಲಮ, ಅಕ್ಕಮಹಾದೇವಿ, ಕುವೆಂಪು ಬೇಂದ್ರೆಯವರ ಸಾಹಿತ್ಯವನ್ನು ಓದುವುದರಿಂದ ಆತ್ಮೀಯತೆಯ ಬಂಧ ಬೆಳೆಯುತ್ತದೆ. ಜಾಗತೀಕರಣ ಮತ್ತು ಕೊರೊನಾದಿಂದ ಮಕ್ಕಳ ಮನಸ್ಸು ಹಾಳಾಗಿದೆ. ಯಂತ್ರಗಳಂತೆ ಮರ ಗಟ್ಟಿ ಹೋದಂತಹ ಮನಸ್ಸುಗಳನ್ನು ಮತ್ತೆ ಸೂಕ್ಷ್ಮಗೊಳಿಸುವುದಕ್ಕೆ ಸಂವೇದನಾಶೀಲರನ್ನಾಗಿ ಮಾಡುವುದಕ್ಕೆ ಕನ್ನಡ ಭಾಷೆ ಮತ್ತು ಸಾಹಿತ್ಯವು ದಿವ್ಯ ಔಷಧ ಎಂದರು.ವಿದ್ಯಾರ್ಥಿಗಳು ಗಳಿಸುವ ಹೆಚ್ಚು ಅಂಕಗಳು ಮನಸ್ಸುಗಳನ್ನು ಜೋಡಿಸದಿದ್ದರೆ, ಸಂಬಂಧಗಳನ್ನು ಬೆಸೆಯದಿದ್ದರೆ ಅವು ವ್ಯರ್ಥ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ದಯಾನಂದ ಕೆ.ಸಿ. ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ದಿನಪತ್ರಿಕೆಗಳನ್ನು ಹಾಗೂ ಪುಸ್ತಕಗಳನ್ನು ಓದುವುದರಿಂದ ಕನ್ನಡ ಭಾಷೆಯ ಹಾಗೂ ಸಾಹಿತ್ಯದ ಸತ್ವವನ್ನು ಸವಿಯಬೇಕು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಗೀತೆಗಳ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕನ್ನಡ ಗೀತೆಗಳಿಗೆ ವಿದ್ಯಾರ್ಥಿಗಳು ನರ್ತಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.