ಗಂಗಾವತಿ:
ಇಲ್ಲಿಯ ತಾಲೂಕು ಸಾಹಿತ್ಯ ಭವನದಲ್ಲಿ ಸಮ್ಮೇಳನದ ಲಾಂಛನ ಹಾಗೂ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಸಮ್ಮೇಳನಕ್ಕೆ ಅವಶ್ಯವಿರುವ ಎಲ್ಲ ಸೌಲಭ್ಯ ಕಲ್ಪಿಸಲಾಗುವುದು. ಸಮ್ಮೇಳನದ ಅಧ್ಯಕ್ಷರ ಆಯ್ಕೆ ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಗಣ್ಯರನ್ನು ಮಾಡುವಂತೆ ಸಲಹೆ ನೀಡಿದ ಅವರು, ಸಮ್ಮೇಳನ ಮುಗಿದ ನಂತರ ಆನೆಗೊಂದಿ ಉತ್ಸವದ ಸಿದ್ಧತೆ ನಡೆಸೋಣ ಎಂದರು.ಮಾಜಿ ಸಂಸದ ಶಿವರಾಮಗೌಡ ಮಾತನಾಡಿ, ಗಂಗಾವತಿ ನಗರ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ ರಾಜ್ಯಕ್ಕೆ ಮಾದರಿಯಾಗಿದೆ. ಆದರಿಂದ ಎಲ್ಲರೂ ಸಮ್ಮೇಳನ ಯಶಸ್ಸಿಗೆ ಸಹಕರಿಸಬೇಕು ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣೇಗೌಡ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆ ಮೇಲೆ ನಗರಸಭೆ ಅಧ್ಯಕ್ಷ ಮೌಲಾಸಾಬ್, ಉಪಾಧ್ಯಕ್ಷೆ ಪಾರ್ವತಿ ದುರಗೇಶ, ರಮೇಶ ಚೌಡ್ಕಿ, ತಾಲೂಕು ಕಸಾಪ ಅಧ್ಯಕ್ಷ ರುದ್ರೇಶ ಆರಾಳ, ನಬೀಸಾಬ್,ರಮೇಶ ಕುಲಕರ್ಣಿ, ಮಹಿಬೂಬು, ಶಿವಾನಂದ ತಿಮ್ಮಾಪುರ ಇದ್ದರು.